Categories: ಕೋಲಾರ

ಗುಟ್ಟಹಳ್ಳಿ ಕರಗದಮ್ಮ ದೇವಿಯ ಪ್ರತಿಷ್ಠಾಪನೆ: ಶಾಸಕ ಕೊತ್ತೂರು, ಎಂಎಲ್ಸಿ ಅನಿಲ್ ಕುಮಾರ್ ಭಾಗಿ

ಕೋಲಾರ: ತಾಲೂಕಿನ ಬೆಳಮಾರನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗುಟ್ಟಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಕರಗದಮ್ಮ ದೇವಾಲಯದ ಪ್ರತಿಷ್ಟಾಪನೆಯಲ್ಲಿ ಶಾಸಕ ಕೊತ್ತೂರು ಜಿ.ಮಂಜುನಾಥ್, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಸೇರಿದಂತೆ ಮುಖಂಡರು ಗ್ರಾಮಸ್ಥರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಜಿ ಮಂಜುನಾಥ್ ಮಾತನಾಡಿ ಕೋಲಾರ ಕ್ಷೇತ್ರದ ಜನತೆಗೆ ನೆಮ್ಮದಿ ತರುವಂತೆ ಗ್ರಾಮದಲ್ಲಿ ಪ್ರತಿಷ್ಠಾಪನೆಗೊಂಡಿರುವ ಕರಗದಮ್ಮ ದೇವಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದೇವೆ. ಯಾವುದೇ ದೇವರು ಆಗಿರಲಿ ಶ್ರದ್ಧಾ ಭಕ್ತಿಯಿಂದ ದರ್ಶನ ಮಾಡಿದಾಗ ಮಾತ್ರ ಅದರ ಪೂರ್ಣ ಫಲ ನಮಗೆ ಪ್ರಾಪ್ತವಾಗುತ್ತದೆ ಈ ದೇವರ ಅನುಗ್ರಹದಿಂದ ರಾಜ್ಯದಲ್ಲಿ ಚೆನ್ನಾಗಿ ಮಳೆಯಾಗಿ ರೈತರ ಸಂಕಷ್ಟದಿಂದ ದೂರವಾಗಿ ಸುಖ, ಸಂತೋಷವನ್ನು ತರುವಂತಾಗಲಿ ಎಂದರು

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನೇತೃತ್ವದ ಸರಕಾರವು ಕಳೆದ ಒಂದು ವರ್ಷದಿಂದ ಜನತೆಗಾಗಿ ಮಾಡಿರುವ ಹಲವಾರು ಗ್ಯಾರಂಟಿ ಯೋಜನೆಗಳು, ಬಡವ, ದಲಿತರ, ಅಲ್ಪಸಂಖ್ಯಾತರು ಸಾಮಾನ್ಯ ವರ್ಗಗಳು ಸೇರಿದಂತೆ ಸಮಾಜದಲ್ಲಿ ತುಳಿತಕ್ಕೊಳಗಾದವರನ್ನು ಮುಖ್ಯವಾಹಿನಿಗೆ ತರುವ ಮಹತ್ವಾಕಾಂಕ್ಷೆಯ ಯೋಜನೆಗಳಾಗಿವೆ ಈ ಯೋಜನೆಗಳಿಂದ ನಾಡಿನ ಪ್ರತಿಯೊಬ್ಬರೂ ನೆಮ್ಮದಿಯ ವಾತಾವರಣ ತರುವಂತೆ ಮಾಡಿದ್ದಾರೆ ಎಂದರು.

ರಾಜ್ಯದ ಕಾಂಗ್ರೆಸ್ ಸರಕಾರವು ಜನಪರವಾದ ಯೋಜನೆಗಳ ಮೂಲಕ ಜನ ಮೆಚ್ಚುಗೆ ಪಡೆದಿದೆ. ಮತ್ತಷ್ಟು ಅಭಿವೃದ್ಧಿ ಕಾರ್ಯ ಮಾಡಬೇಕಿದ್ದು, ಈ ನಿಟ್ಟಿನಲ್ಲಿ ಸರಕಾರ ಚಿಂತನೆ ನಡೆಸಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಅಷ್ಟು ಭರವಸೆಯನ್ನು ಸರಕಾರವು ಈಡೇರಿಸಿದೆ ಆರೋಗ್ಯ, ಶಿಕ್ಷಣ, ಮೂಲಸೌಕರ್ಯಗಳನ್ನು ಜನತೆಗೆ ಜನಪರವಾದ ಯೋಜನೆಗಳ ಮೂಲಕ ತಲುಪಿಸುತ್ತಿರುವುದರಿಂದ ಈ ಸರಕಾರವು ಜನತೆಯ ಮನೆಯ ಮಾತಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ಬಿ.ರಮೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವೈ.ಶಿವಕುಮಾರ್, ದೊಡ್ಡ ಹಸಾಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್, ವಕ್ಕಲೇರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಕನಕರಾಜ್, ತೋರಣಕಂಬದಹಳ್ಳಿ ನಾರಾಯಣಸ್ವಾಮಿ, ಕಲ್ವಮಂಜಲಿ ಶ್ರೀರಾಮಪ್ಪ, ಕುಮಾರ್, ನುಕ್ಕನಹಳ್ಳಿ ಶ್ರೀನಿವಾಸ್, ಡಿಎಚ್ಒ ಜಗದೀಶ್, ಸುತ್ತಮುತ್ತಲಿನ ಗ್ರಾಮಸ್ಥರು ಇದ್ದರು,

Ramesh Babu

Journalist

Recent Posts

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

2 hours ago

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

14 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

15 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

15 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

15 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

18 hours ago