Categories: ಕೋಲಾರ

ಗುಟ್ಟಹಳ್ಳಿ ಕರಗದಮ್ಮ ದೇವಿಯ ಪ್ರತಿಷ್ಠಾಪನೆ: ಶಾಸಕ ಕೊತ್ತೂರು, ಎಂಎಲ್ಸಿ ಅನಿಲ್ ಕುಮಾರ್ ಭಾಗಿ

ಕೋಲಾರ: ತಾಲೂಕಿನ ಬೆಳಮಾರನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗುಟ್ಟಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಕರಗದಮ್ಮ ದೇವಾಲಯದ ಪ್ರತಿಷ್ಟಾಪನೆಯಲ್ಲಿ ಶಾಸಕ ಕೊತ್ತೂರು ಜಿ.ಮಂಜುನಾಥ್, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಸೇರಿದಂತೆ ಮುಖಂಡರು ಗ್ರಾಮಸ್ಥರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಜಿ ಮಂಜುನಾಥ್ ಮಾತನಾಡಿ ಕೋಲಾರ ಕ್ಷೇತ್ರದ ಜನತೆಗೆ ನೆಮ್ಮದಿ ತರುವಂತೆ ಗ್ರಾಮದಲ್ಲಿ ಪ್ರತಿಷ್ಠಾಪನೆಗೊಂಡಿರುವ ಕರಗದಮ್ಮ ದೇವಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದೇವೆ. ಯಾವುದೇ ದೇವರು ಆಗಿರಲಿ ಶ್ರದ್ಧಾ ಭಕ್ತಿಯಿಂದ ದರ್ಶನ ಮಾಡಿದಾಗ ಮಾತ್ರ ಅದರ ಪೂರ್ಣ ಫಲ ನಮಗೆ ಪ್ರಾಪ್ತವಾಗುತ್ತದೆ ಈ ದೇವರ ಅನುಗ್ರಹದಿಂದ ರಾಜ್ಯದಲ್ಲಿ ಚೆನ್ನಾಗಿ ಮಳೆಯಾಗಿ ರೈತರ ಸಂಕಷ್ಟದಿಂದ ದೂರವಾಗಿ ಸುಖ, ಸಂತೋಷವನ್ನು ತರುವಂತಾಗಲಿ ಎಂದರು

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನೇತೃತ್ವದ ಸರಕಾರವು ಕಳೆದ ಒಂದು ವರ್ಷದಿಂದ ಜನತೆಗಾಗಿ ಮಾಡಿರುವ ಹಲವಾರು ಗ್ಯಾರಂಟಿ ಯೋಜನೆಗಳು, ಬಡವ, ದಲಿತರ, ಅಲ್ಪಸಂಖ್ಯಾತರು ಸಾಮಾನ್ಯ ವರ್ಗಗಳು ಸೇರಿದಂತೆ ಸಮಾಜದಲ್ಲಿ ತುಳಿತಕ್ಕೊಳಗಾದವರನ್ನು ಮುಖ್ಯವಾಹಿನಿಗೆ ತರುವ ಮಹತ್ವಾಕಾಂಕ್ಷೆಯ ಯೋಜನೆಗಳಾಗಿವೆ ಈ ಯೋಜನೆಗಳಿಂದ ನಾಡಿನ ಪ್ರತಿಯೊಬ್ಬರೂ ನೆಮ್ಮದಿಯ ವಾತಾವರಣ ತರುವಂತೆ ಮಾಡಿದ್ದಾರೆ ಎಂದರು.

ರಾಜ್ಯದ ಕಾಂಗ್ರೆಸ್ ಸರಕಾರವು ಜನಪರವಾದ ಯೋಜನೆಗಳ ಮೂಲಕ ಜನ ಮೆಚ್ಚುಗೆ ಪಡೆದಿದೆ. ಮತ್ತಷ್ಟು ಅಭಿವೃದ್ಧಿ ಕಾರ್ಯ ಮಾಡಬೇಕಿದ್ದು, ಈ ನಿಟ್ಟಿನಲ್ಲಿ ಸರಕಾರ ಚಿಂತನೆ ನಡೆಸಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಅಷ್ಟು ಭರವಸೆಯನ್ನು ಸರಕಾರವು ಈಡೇರಿಸಿದೆ ಆರೋಗ್ಯ, ಶಿಕ್ಷಣ, ಮೂಲಸೌಕರ್ಯಗಳನ್ನು ಜನತೆಗೆ ಜನಪರವಾದ ಯೋಜನೆಗಳ ಮೂಲಕ ತಲುಪಿಸುತ್ತಿರುವುದರಿಂದ ಈ ಸರಕಾರವು ಜನತೆಯ ಮನೆಯ ಮಾತಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ಬಿ.ರಮೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವೈ.ಶಿವಕುಮಾರ್, ದೊಡ್ಡ ಹಸಾಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್, ವಕ್ಕಲೇರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಕನಕರಾಜ್, ತೋರಣಕಂಬದಹಳ್ಳಿ ನಾರಾಯಣಸ್ವಾಮಿ, ಕಲ್ವಮಂಜಲಿ ಶ್ರೀರಾಮಪ್ಪ, ಕುಮಾರ್, ನುಕ್ಕನಹಳ್ಳಿ ಶ್ರೀನಿವಾಸ್, ಡಿಎಚ್ಒ ಜಗದೀಶ್, ಸುತ್ತಮುತ್ತಲಿನ ಗ್ರಾಮಸ್ಥರು ಇದ್ದರು,

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

2 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

13 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

14 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

14 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

17 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago