Categories: ಕೋಲಾರ

ಗುಟ್ಟಹಳ್ಳಿ ಕರಗದಮ್ಮ ದೇವಿಯ ಪ್ರತಿಷ್ಠಾಪನೆ: ಶಾಸಕ ಕೊತ್ತೂರು, ಎಂಎಲ್ಸಿ ಅನಿಲ್ ಕುಮಾರ್ ಭಾಗಿ

ಕೋಲಾರ: ತಾಲೂಕಿನ ಬೆಳಮಾರನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗುಟ್ಟಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಕರಗದಮ್ಮ ದೇವಾಲಯದ ಪ್ರತಿಷ್ಟಾಪನೆಯಲ್ಲಿ ಶಾಸಕ ಕೊತ್ತೂರು ಜಿ.ಮಂಜುನಾಥ್, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಸೇರಿದಂತೆ ಮುಖಂಡರು ಗ್ರಾಮಸ್ಥರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಜಿ ಮಂಜುನಾಥ್ ಮಾತನಾಡಿ ಕೋಲಾರ ಕ್ಷೇತ್ರದ ಜನತೆಗೆ ನೆಮ್ಮದಿ ತರುವಂತೆ ಗ್ರಾಮದಲ್ಲಿ ಪ್ರತಿಷ್ಠಾಪನೆಗೊಂಡಿರುವ ಕರಗದಮ್ಮ ದೇವಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದೇವೆ. ಯಾವುದೇ ದೇವರು ಆಗಿರಲಿ ಶ್ರದ್ಧಾ ಭಕ್ತಿಯಿಂದ ದರ್ಶನ ಮಾಡಿದಾಗ ಮಾತ್ರ ಅದರ ಪೂರ್ಣ ಫಲ ನಮಗೆ ಪ್ರಾಪ್ತವಾಗುತ್ತದೆ ಈ ದೇವರ ಅನುಗ್ರಹದಿಂದ ರಾಜ್ಯದಲ್ಲಿ ಚೆನ್ನಾಗಿ ಮಳೆಯಾಗಿ ರೈತರ ಸಂಕಷ್ಟದಿಂದ ದೂರವಾಗಿ ಸುಖ, ಸಂತೋಷವನ್ನು ತರುವಂತಾಗಲಿ ಎಂದರು

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನೇತೃತ್ವದ ಸರಕಾರವು ಕಳೆದ ಒಂದು ವರ್ಷದಿಂದ ಜನತೆಗಾಗಿ ಮಾಡಿರುವ ಹಲವಾರು ಗ್ಯಾರಂಟಿ ಯೋಜನೆಗಳು, ಬಡವ, ದಲಿತರ, ಅಲ್ಪಸಂಖ್ಯಾತರು ಸಾಮಾನ್ಯ ವರ್ಗಗಳು ಸೇರಿದಂತೆ ಸಮಾಜದಲ್ಲಿ ತುಳಿತಕ್ಕೊಳಗಾದವರನ್ನು ಮುಖ್ಯವಾಹಿನಿಗೆ ತರುವ ಮಹತ್ವಾಕಾಂಕ್ಷೆಯ ಯೋಜನೆಗಳಾಗಿವೆ ಈ ಯೋಜನೆಗಳಿಂದ ನಾಡಿನ ಪ್ರತಿಯೊಬ್ಬರೂ ನೆಮ್ಮದಿಯ ವಾತಾವರಣ ತರುವಂತೆ ಮಾಡಿದ್ದಾರೆ ಎಂದರು.

ರಾಜ್ಯದ ಕಾಂಗ್ರೆಸ್ ಸರಕಾರವು ಜನಪರವಾದ ಯೋಜನೆಗಳ ಮೂಲಕ ಜನ ಮೆಚ್ಚುಗೆ ಪಡೆದಿದೆ. ಮತ್ತಷ್ಟು ಅಭಿವೃದ್ಧಿ ಕಾರ್ಯ ಮಾಡಬೇಕಿದ್ದು, ಈ ನಿಟ್ಟಿನಲ್ಲಿ ಸರಕಾರ ಚಿಂತನೆ ನಡೆಸಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಅಷ್ಟು ಭರವಸೆಯನ್ನು ಸರಕಾರವು ಈಡೇರಿಸಿದೆ ಆರೋಗ್ಯ, ಶಿಕ್ಷಣ, ಮೂಲಸೌಕರ್ಯಗಳನ್ನು ಜನತೆಗೆ ಜನಪರವಾದ ಯೋಜನೆಗಳ ಮೂಲಕ ತಲುಪಿಸುತ್ತಿರುವುದರಿಂದ ಈ ಸರಕಾರವು ಜನತೆಯ ಮನೆಯ ಮಾತಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ಬಿ.ರಮೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವೈ.ಶಿವಕುಮಾರ್, ದೊಡ್ಡ ಹಸಾಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್, ವಕ್ಕಲೇರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಕನಕರಾಜ್, ತೋರಣಕಂಬದಹಳ್ಳಿ ನಾರಾಯಣಸ್ವಾಮಿ, ಕಲ್ವಮಂಜಲಿ ಶ್ರೀರಾಮಪ್ಪ, ಕುಮಾರ್, ನುಕ್ಕನಹಳ್ಳಿ ಶ್ರೀನಿವಾಸ್, ಡಿಎಚ್ಒ ಜಗದೀಶ್, ಸುತ್ತಮುತ್ತಲಿನ ಗ್ರಾಮಸ್ಥರು ಇದ್ದರು,

Ramesh Babu

Journalist

Recent Posts

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

4 minutes ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

5 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

6 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

6 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

8 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

9 hours ago