ಕೋಲಾರ: ಸಂವಿಧಾನದ ಬಗ್ಗೆ ಗೌರವ ಇದ್ದರೆ ಗುತ್ತಿಗೆದಾರ ಸಾವಿಗೆ ಕಾರಣವಾದ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡಲಿ ಎಂದು ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷದ ಮುಖಂಡರಾದ ಯಲುವಗುಳಿ ನಾಗರಾಜ್, ಜಯನಗರ ಮುನಿಯಪ್ಪ, ಹಾರೋಹಳ್ಳಿ ನಾಗರಾಜ್ ಜಂಟಿಯಾಗಿ ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಗುತ್ತಿಗೆದಾರ ಸಚಿನ್ ಸಾವಿನಲ್ಲಿ ಸಚಿವ ಪ್ರಿಯಾಂಕ್ಖರ್ಗೆ ಅವರ ಪಾತ್ರವಿರುವುದು ಸ್ಪಷ್ಟವಾಗಿದೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಾಗ ಸಚಿವ ಈಶ್ವರಪ್ಪ ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಿದ್ದಾರೆ ನಿಮಗೆ ಏನಾದರೂ ನೈತಿಕತೆ ಇದ್ದರೆ ರಾಜೀನಾಮೆ ಕೊಡಬೇಕು ಮಾತಲ್ಲಿ ಸಂವಿಧಾನ ಅಂಬೇಡ್ಕರ್ ಇದ್ದರೆ ಅಷ್ಟೇ ಸಾಲದು ನಡುವಳಿಕೆಯಲ್ಲಿ ಸಹ ಇರಬೇಕು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲವಾಗಿದೆ ಬೆಳಗಾವಿ ಅಧಿವೇಶನದಲ್ಲಿ ಸಿ.ಟಿ ರವಿ ಮೇಲೆ ಹಲ್ಲೆ ರಾಜರಾಜೇಶ್ವರಿ ನಗರದಲ್ಲಿ ಮಾಜಿ ಸಚಿವ ಮುನಿರತ್ನ ಮೇಲೆ ಹಲ್ಲೆ ಗುತ್ತಿಗೆದಾರ ಸಚಿನ್ ಆತ್ಮಹತ್ಯೆಯಾಗಿದೆ ಇನ್ನೂ ಸಾಮಾನ್ಯ ಜನರಿಗೆ ಹೇಗೆ ರಕ್ಷಣೆ ಇದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ ಸರ್ಕಾರಕ್ಕೆ ಗೌರವ ಇದ್ದರೆ ತಪ್ಪಿತಸ್ಥರು ಯಾರೇ ಆದರೂ ಶಿಕ್ಷೆ ನೀಡುವಂತೆ ಒತ್ತಾಯಿಸಿದರು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…