ಕೋಲಾರ: ಸಂವಿಧಾನದ ಬಗ್ಗೆ ಗೌರವ ಇದ್ದರೆ ಗುತ್ತಿಗೆದಾರ ಸಾವಿಗೆ ಕಾರಣವಾದ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡಲಿ ಎಂದು ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷದ ಮುಖಂಡರಾದ ಯಲುವಗುಳಿ ನಾಗರಾಜ್, ಜಯನಗರ ಮುನಿಯಪ್ಪ, ಹಾರೋಹಳ್ಳಿ ನಾಗರಾಜ್ ಜಂಟಿಯಾಗಿ ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಗುತ್ತಿಗೆದಾರ ಸಚಿನ್ ಸಾವಿನಲ್ಲಿ ಸಚಿವ ಪ್ರಿಯಾಂಕ್ಖರ್ಗೆ ಅವರ ಪಾತ್ರವಿರುವುದು ಸ್ಪಷ್ಟವಾಗಿದೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಾಗ ಸಚಿವ ಈಶ್ವರಪ್ಪ ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಿದ್ದಾರೆ ನಿಮಗೆ ಏನಾದರೂ ನೈತಿಕತೆ ಇದ್ದರೆ ರಾಜೀನಾಮೆ ಕೊಡಬೇಕು ಮಾತಲ್ಲಿ ಸಂವಿಧಾನ ಅಂಬೇಡ್ಕರ್ ಇದ್ದರೆ ಅಷ್ಟೇ ಸಾಲದು ನಡುವಳಿಕೆಯಲ್ಲಿ ಸಹ ಇರಬೇಕು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲವಾಗಿದೆ ಬೆಳಗಾವಿ ಅಧಿವೇಶನದಲ್ಲಿ ಸಿ.ಟಿ ರವಿ ಮೇಲೆ ಹಲ್ಲೆ ರಾಜರಾಜೇಶ್ವರಿ ನಗರದಲ್ಲಿ ಮಾಜಿ ಸಚಿವ ಮುನಿರತ್ನ ಮೇಲೆ ಹಲ್ಲೆ ಗುತ್ತಿಗೆದಾರ ಸಚಿನ್ ಆತ್ಮಹತ್ಯೆಯಾಗಿದೆ ಇನ್ನೂ ಸಾಮಾನ್ಯ ಜನರಿಗೆ ಹೇಗೆ ರಕ್ಷಣೆ ಇದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ ಸರ್ಕಾರಕ್ಕೆ ಗೌರವ ಇದ್ದರೆ ತಪ್ಪಿತಸ್ಥರು ಯಾರೇ ಆದರೂ ಶಿಕ್ಷೆ ನೀಡುವಂತೆ ಒತ್ತಾಯಿಸಿದರು.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…