ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ-ಡಿಸ್ಟ್ರಿಕ್ ಮಿಷನ್ ಕೊ- ಆರ್ಡಿನೇಟರ್, ಹುದ್ದೆ- ಸಂಖ್ಯೆ 01, ವಿದ್ಯಾರ್ಹತೆ: ಸಮಾಜ ವಿಜ್ಞಾನ, ಲೈಪ್ ಸೈನ್ಸ್, ನ್ಯೂಟ್ರಿಷನ್, ಮೆಡಿಸನ್, ಹೆಲ್ತ್ ಮ್ಯಾನೇಜಮೆಂಟ್, ಸಮಾಜ ಕಾರ್ಯ, ರೂರಲ್ ಮ್ಯಾನೇಜ್ಮೆಂಟ್ ನಲ್ಲಿ ಪದವಿ ಹೊಂದಿರಬೇಕು ಹಾಗೂ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಲ್ಲಿ 3 ವರ್ಷಗಳ ಅನುಭವ ಹೊಂದಿರಬೇಕು.
ಹುದ್ದೆ-ಸ್ಪೆಷಲಿಸ್ಟ್ ಇನ್ ಫೈನಾನ್ಸಿಯಲ್ ಲಿಟ್ರಸಿ ಅಂಡ್ ಅಕೌಂಟೆಂಟ್. ಹುದ್ದೆ ಸಂಖ್ಯೆ-01 ವಿದ್ಯಾರ್ಹತೆ:ಅರ್ಥಶಾಸ್ತ್ರ/ಬ್ಯಾಂಕಿಂಗ್/ಬಿ.ಕಾಂ ನಲ್ಲಿ ಪದವಿ, ಸ್ನಾತಕೋತ್ತರ ಪದವೀಧರರಿಗೆ ಮೊದಲ ಆದ್ಯತೆ ನೀಡಲಾಗುವುದು. ಆರ್ಥಿಕ ಸಾಕ್ಷರತೆ/ಆರ್ಥಿಕ ಸೇರ್ಪಡೆ ಕೇಂದ್ರಿತ ವಿಷಯಗಳಲ್ಲಿ ಸರ್ಕಾರಿ/ಸರ್ಕಾರೇತರ ಸಂಸ್ಥೆಗಳಲ್ಲಿ 3 ವರ್ಷಗಳ ಅನುಭವ ಹೊಂದಿರಬೇಕು.
ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿಗಳನ್ನು ಪಡೆಯಲು ಹಾಗೂ ಮುಂತಾದ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾ||, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ 080- 29787445 ಇಲ್ಲಿಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸ ಬಹುದಾಗಿದೆ. ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಫೆಬ್ರವರಿ 22 ಸಂಜೆ 5.00 ಗಂಟೆಯೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಕಚೇರಿಗೆ ಸಲ್ಲಿಸಬಹುದಾಗಿದೆ.
ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…