ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ-ಡಿಸ್ಟ್ರಿಕ್ ಮಿಷನ್ ಕೊ- ಆರ್ಡಿನೇಟರ್, ಹುದ್ದೆ- ಸಂಖ್ಯೆ 01, ವಿದ್ಯಾರ್ಹತೆ: ಸಮಾಜ ವಿಜ್ಞಾನ, ಲೈಪ್ ಸೈನ್ಸ್, ನ್ಯೂಟ್ರಿಷನ್, ಮೆಡಿಸನ್, ಹೆಲ್ತ್ ಮ್ಯಾನೇಜಮೆಂಟ್, ಸಮಾಜ ಕಾರ್ಯ, ರೂರಲ್ ಮ್ಯಾನೇಜ್ಮೆಂಟ್ ನಲ್ಲಿ ಪದವಿ ಹೊಂದಿರಬೇಕು ಹಾಗೂ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಲ್ಲಿ 3 ವರ್ಷಗಳ ಅನುಭವ ಹೊಂದಿರಬೇಕು.
ಹುದ್ದೆ-ಸ್ಪೆಷಲಿಸ್ಟ್ ಇನ್ ಫೈನಾನ್ಸಿಯಲ್ ಲಿಟ್ರಸಿ ಅಂಡ್ ಅಕೌಂಟೆಂಟ್. ಹುದ್ದೆ ಸಂಖ್ಯೆ-01 ವಿದ್ಯಾರ್ಹತೆ:ಅರ್ಥಶಾಸ್ತ್ರ/ಬ್ಯಾಂಕಿಂಗ್/ಬಿ.ಕಾಂ ನಲ್ಲಿ ಪದವಿ, ಸ್ನಾತಕೋತ್ತರ ಪದವೀಧರರಿಗೆ ಮೊದಲ ಆದ್ಯತೆ ನೀಡಲಾಗುವುದು. ಆರ್ಥಿಕ ಸಾಕ್ಷರತೆ/ಆರ್ಥಿಕ ಸೇರ್ಪಡೆ ಕೇಂದ್ರಿತ ವಿಷಯಗಳಲ್ಲಿ ಸರ್ಕಾರಿ/ಸರ್ಕಾರೇತರ ಸಂಸ್ಥೆಗಳಲ್ಲಿ 3 ವರ್ಷಗಳ ಅನುಭವ ಹೊಂದಿರಬೇಕು.
ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿಗಳನ್ನು ಪಡೆಯಲು ಹಾಗೂ ಮುಂತಾದ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾ||, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ 080- 29787445 ಇಲ್ಲಿಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸ ಬಹುದಾಗಿದೆ. ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಫೆಬ್ರವರಿ 22 ಸಂಜೆ 5.00 ಗಂಟೆಯೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಕಚೇರಿಗೆ ಸಲ್ಲಿಸಬಹುದಾಗಿದೆ.
ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…