Categories: ಕೋಲಾರ

ಗುತ್ತಿಗೆ ನೌಕರರ ಖಾಯಂಗೊಳಿಸಲು ಸೆ.30 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

ಕೋಲಾರ: ರಾಜ್ಯಾದ್ಯಂತ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರನ್ನು ಖಾಯಂಗೊಳಸಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲು ಒತ್ತಾಯಿಸಿ ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ಸೆ‌.30 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ತಿಳಿಸಿದರು,

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶಕ್ಕೆ ಸ್ವಾತಂತ್ರ್ಯ ಬಂದು 77 ವರ್ಷಗಳಾದರೂ ಕಾರ್ಮಿಕರ ಮೇಲಿನ ಶೋಷಣೆ ದಬ್ಬಾಳಿಕೆ ಇನ್ನೂ ನಿಂತಲ್ಲ ಜನಸಂಖ್ಯೆ ಹೆಚ್ಚಳಕ್ಕೆ ತಕ್ಕಂತೆ ಉದ್ಯೋಗ ಅವಕಾಶಗಳನ್ನು ಸೃಷ್ಟಿ ಮಾಡಬೇಕು ಯುವಜನತೆ ಉದ್ಯೋಗದ ಆಸೆಯಲ್ಲಿ ಕೈಗಾರಿಕೆಗಳು ಮತ್ತು ಕಛೇರಿಗಳಲ್ಲಿ ಕಡಿಮೆ ವೇತನಕ್ಕೆ ದುಡಿಯುವಂತಾಗಿದೆ ಗುತ್ತಿಗೆ, ಹೊರಗುತ್ತಿಗೆ, ಹಂಗಾಮಿ ಸೇರಿದಂತೆ ಎಲ್ಲಾ ಖಾಯಂಯೇತರ ಕಾರ್ಮಿಕರಿಗೆ ಕೆಲಸದ ಭದ್ರತೆಯನ್ನು ಸರಕಾರಗಳು ಒದಗಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಲಕ್ಷಾಂತರ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಯಾವುದೇ ವಿಶೇಷ ಸೌಲಭ್ಯವಿಲ್ಲದೆ ಸುಮಾರು 25-30 ವರ್ಷಗಳಿಂದ ಪ್ರಾಮಾಣಿಕವಾಗಿ ದುಡಿಯುತ್ತಿದ್ದಾರೆ. ಪ್ರಸ್ತುತ ನೀಡುತ್ತಿರುವ ವೇತನವು ಅತ್ಯಂತ ಕಡಿಮೆ ಇದ್ದು, ಕನಿಷ್ಠ ಜೀವನ ಸಾಗಿಸುವುದೂ ಕಷ್ಟವಾಗಿದೆ ಮುಂದೆ ನಿವೃತ್ತಿಯಾದರೆ ಗ್ರಾಚ್ಯೂಟಿ ಸಹ ಇಲ್ಲವಾಗಿದೆ ಸಮಾನ ಕೆಲಸಕ್ಕೆ ಸಮಾನ ವೇತನ ಒದಗಿಸಲು ಸರಕಾರವು ಕ್ರಮವಹಿಸಬೇಕು ಎಂದರು.

ಹಿರಿಯ ಕಾರ್ಮಿಕ ಮುಖಂಡ ಎ.ಆರ್ ಬಾಬು ಮಾತನಾಡಿ, ಕೇಂದ್ರ ಸರಕಾರದ ಒಡೆತನದ ಸಾರ್ವಜನಿಕ ಉದ್ಯಮಗಳಾದ ಬೆಮಲ್, ಹೆಚ್ಎಎಲ್, ಬಿಇಎಲ್, ಬಿಎಸ್ಎನ್ಎಲ್, ಬಿಹೆಚ್ಇಎಲ್ ಸೇರಿದಂತೆ ಪ್ರತಿಷ್ಠಿತ ಕೈಗಾರಿಕೆಗಳು ರಾಜ್ಯ ಸರಕಾರದ ವಿವಿಧ ಇಲಾಖೆಗಳು ನಿಗಮ ಮಂಡಳಿಗಳು ನಗರಸಭೆ ಪುರಸಭೆಗಳಲ್ಲಿ ಹತ್ತಾರು ವರ್ಷಗಳಿಂದ ದುಡಿಯುತ್ತಿದ್ದರೂ ಖಾಯಂ ಮಾಡಲು ನಿರಾಕರಿಸಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಹಲವು ತೀರ್ಪುಗಳನ್ನು ನೀಡಿದ್ದರೂ ಜಾರಿ ಮಾಡಿಲ್ಲ ಇದರಿಂದಾಗಿಯೇ ಕಾರ್ಮಿಕರು ಬೀದಿಗೆ ಬಂದಿದ್ದಾರೆ ಎಂದು ದೂರಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ, ಕಾರ್ಮಿಕರನ್ನು ಶೋಷಣೆ ಮಾಡುವ ಗುತ್ತಿಗೆ ಹೊರಗುತ್ತಿಗೆ ಪದ್ದತಿಯನ್ನು ನಿಷೇಧಿಸಬೇಕು ಖಾಯಂಯೇತರ ನೌಕರರಿಗೆ ಪಿ.ಎಫ್, ಇಎಸ್ಐ, ಗ್ರಾಚ್ಯೂಟಿ, ಓಟಿ, ರಜೆ ಸೌಲಭ್ಯ, ಹೆರಿಗೆ ಮತ್ತಿತರರ ಸೌಲಭ್ಯಗಳನ್ನು ಒದಗಿಸಬೇಕು ರಾಜ್ಯ ಮತ್ತು ಕೇಂದ್ರ ಸರಕಾರಗಳು ಕೋರ್ಟ್ ಆದೇಶವನ್ನು ಕಡ್ಡಾಯವಾಗಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಖಜಾಂಚಿ ಹೆಚ್.ಬಿ ಕೃಷ್ಣಪ್ಪ, ಕಾರ್ಯದರ್ಶಿ ಭೀಮರಾಜ್ ಇದ್ದರು,

Ramesh Babu

Journalist

Recent Posts

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

36 minutes ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

8 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

8 hours ago

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…

11 hours ago

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

22 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

1 day ago