ಕೋಲಾರ: ರಾಜ್ಯಾದ್ಯಂತ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರನ್ನು ಖಾಯಂಗೊಳಸಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲು ಒತ್ತಾಯಿಸಿ ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ಸೆ.30 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ತಿಳಿಸಿದರು,
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶಕ್ಕೆ ಸ್ವಾತಂತ್ರ್ಯ ಬಂದು 77 ವರ್ಷಗಳಾದರೂ ಕಾರ್ಮಿಕರ ಮೇಲಿನ ಶೋಷಣೆ ದಬ್ಬಾಳಿಕೆ ಇನ್ನೂ ನಿಂತಲ್ಲ ಜನಸಂಖ್ಯೆ ಹೆಚ್ಚಳಕ್ಕೆ ತಕ್ಕಂತೆ ಉದ್ಯೋಗ ಅವಕಾಶಗಳನ್ನು ಸೃಷ್ಟಿ ಮಾಡಬೇಕು ಯುವಜನತೆ ಉದ್ಯೋಗದ ಆಸೆಯಲ್ಲಿ ಕೈಗಾರಿಕೆಗಳು ಮತ್ತು ಕಛೇರಿಗಳಲ್ಲಿ ಕಡಿಮೆ ವೇತನಕ್ಕೆ ದುಡಿಯುವಂತಾಗಿದೆ ಗುತ್ತಿಗೆ, ಹೊರಗುತ್ತಿಗೆ, ಹಂಗಾಮಿ ಸೇರಿದಂತೆ ಎಲ್ಲಾ ಖಾಯಂಯೇತರ ಕಾರ್ಮಿಕರಿಗೆ ಕೆಲಸದ ಭದ್ರತೆಯನ್ನು ಸರಕಾರಗಳು ಒದಗಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯಲ್ಲಿ ಲಕ್ಷಾಂತರ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಯಾವುದೇ ವಿಶೇಷ ಸೌಲಭ್ಯವಿಲ್ಲದೆ ಸುಮಾರು 25-30 ವರ್ಷಗಳಿಂದ ಪ್ರಾಮಾಣಿಕವಾಗಿ ದುಡಿಯುತ್ತಿದ್ದಾರೆ. ಪ್ರಸ್ತುತ ನೀಡುತ್ತಿರುವ ವೇತನವು ಅತ್ಯಂತ ಕಡಿಮೆ ಇದ್ದು, ಕನಿಷ್ಠ ಜೀವನ ಸಾಗಿಸುವುದೂ ಕಷ್ಟವಾಗಿದೆ ಮುಂದೆ ನಿವೃತ್ತಿಯಾದರೆ ಗ್ರಾಚ್ಯೂಟಿ ಸಹ ಇಲ್ಲವಾಗಿದೆ ಸಮಾನ ಕೆಲಸಕ್ಕೆ ಸಮಾನ ವೇತನ ಒದಗಿಸಲು ಸರಕಾರವು ಕ್ರಮವಹಿಸಬೇಕು ಎಂದರು.
ಹಿರಿಯ ಕಾರ್ಮಿಕ ಮುಖಂಡ ಎ.ಆರ್ ಬಾಬು ಮಾತನಾಡಿ, ಕೇಂದ್ರ ಸರಕಾರದ ಒಡೆತನದ ಸಾರ್ವಜನಿಕ ಉದ್ಯಮಗಳಾದ ಬೆಮಲ್, ಹೆಚ್ಎಎಲ್, ಬಿಇಎಲ್, ಬಿಎಸ್ಎನ್ಎಲ್, ಬಿಹೆಚ್ಇಎಲ್ ಸೇರಿದಂತೆ ಪ್ರತಿಷ್ಠಿತ ಕೈಗಾರಿಕೆಗಳು ರಾಜ್ಯ ಸರಕಾರದ ವಿವಿಧ ಇಲಾಖೆಗಳು ನಿಗಮ ಮಂಡಳಿಗಳು ನಗರಸಭೆ ಪುರಸಭೆಗಳಲ್ಲಿ ಹತ್ತಾರು ವರ್ಷಗಳಿಂದ ದುಡಿಯುತ್ತಿದ್ದರೂ ಖಾಯಂ ಮಾಡಲು ನಿರಾಕರಿಸಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಹಲವು ತೀರ್ಪುಗಳನ್ನು ನೀಡಿದ್ದರೂ ಜಾರಿ ಮಾಡಿಲ್ಲ ಇದರಿಂದಾಗಿಯೇ ಕಾರ್ಮಿಕರು ಬೀದಿಗೆ ಬಂದಿದ್ದಾರೆ ಎಂದು ದೂರಿದರು.
ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ, ಕಾರ್ಮಿಕರನ್ನು ಶೋಷಣೆ ಮಾಡುವ ಗುತ್ತಿಗೆ ಹೊರಗುತ್ತಿಗೆ ಪದ್ದತಿಯನ್ನು ನಿಷೇಧಿಸಬೇಕು ಖಾಯಂಯೇತರ ನೌಕರರಿಗೆ ಪಿ.ಎಫ್, ಇಎಸ್ಐ, ಗ್ರಾಚ್ಯೂಟಿ, ಓಟಿ, ರಜೆ ಸೌಲಭ್ಯ, ಹೆರಿಗೆ ಮತ್ತಿತರರ ಸೌಲಭ್ಯಗಳನ್ನು ಒದಗಿಸಬೇಕು ರಾಜ್ಯ ಮತ್ತು ಕೇಂದ್ರ ಸರಕಾರಗಳು ಕೋರ್ಟ್ ಆದೇಶವನ್ನು ಕಡ್ಡಾಯವಾಗಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಖಜಾಂಚಿ ಹೆಚ್.ಬಿ ಕೃಷ್ಣಪ್ಪ, ಕಾರ್ಯದರ್ಶಿ ಭೀಮರಾಜ್ ಇದ್ದರು,
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…