Categories: ಕೋಲಾರ

ಗುತ್ತಿಗೆ ನೌಕರರ ಖಾಯಂಗೊಳಿಸಲು ಸೆ.30 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

ಕೋಲಾರ: ರಾಜ್ಯಾದ್ಯಂತ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರನ್ನು ಖಾಯಂಗೊಳಸಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲು ಒತ್ತಾಯಿಸಿ ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ಸೆ‌.30 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ತಿಳಿಸಿದರು,

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶಕ್ಕೆ ಸ್ವಾತಂತ್ರ್ಯ ಬಂದು 77 ವರ್ಷಗಳಾದರೂ ಕಾರ್ಮಿಕರ ಮೇಲಿನ ಶೋಷಣೆ ದಬ್ಬಾಳಿಕೆ ಇನ್ನೂ ನಿಂತಲ್ಲ ಜನಸಂಖ್ಯೆ ಹೆಚ್ಚಳಕ್ಕೆ ತಕ್ಕಂತೆ ಉದ್ಯೋಗ ಅವಕಾಶಗಳನ್ನು ಸೃಷ್ಟಿ ಮಾಡಬೇಕು ಯುವಜನತೆ ಉದ್ಯೋಗದ ಆಸೆಯಲ್ಲಿ ಕೈಗಾರಿಕೆಗಳು ಮತ್ತು ಕಛೇರಿಗಳಲ್ಲಿ ಕಡಿಮೆ ವೇತನಕ್ಕೆ ದುಡಿಯುವಂತಾಗಿದೆ ಗುತ್ತಿಗೆ, ಹೊರಗುತ್ತಿಗೆ, ಹಂಗಾಮಿ ಸೇರಿದಂತೆ ಎಲ್ಲಾ ಖಾಯಂಯೇತರ ಕಾರ್ಮಿಕರಿಗೆ ಕೆಲಸದ ಭದ್ರತೆಯನ್ನು ಸರಕಾರಗಳು ಒದಗಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಲಕ್ಷಾಂತರ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಯಾವುದೇ ವಿಶೇಷ ಸೌಲಭ್ಯವಿಲ್ಲದೆ ಸುಮಾರು 25-30 ವರ್ಷಗಳಿಂದ ಪ್ರಾಮಾಣಿಕವಾಗಿ ದುಡಿಯುತ್ತಿದ್ದಾರೆ. ಪ್ರಸ್ತುತ ನೀಡುತ್ತಿರುವ ವೇತನವು ಅತ್ಯಂತ ಕಡಿಮೆ ಇದ್ದು, ಕನಿಷ್ಠ ಜೀವನ ಸಾಗಿಸುವುದೂ ಕಷ್ಟವಾಗಿದೆ ಮುಂದೆ ನಿವೃತ್ತಿಯಾದರೆ ಗ್ರಾಚ್ಯೂಟಿ ಸಹ ಇಲ್ಲವಾಗಿದೆ ಸಮಾನ ಕೆಲಸಕ್ಕೆ ಸಮಾನ ವೇತನ ಒದಗಿಸಲು ಸರಕಾರವು ಕ್ರಮವಹಿಸಬೇಕು ಎಂದರು.

ಹಿರಿಯ ಕಾರ್ಮಿಕ ಮುಖಂಡ ಎ.ಆರ್ ಬಾಬು ಮಾತನಾಡಿ, ಕೇಂದ್ರ ಸರಕಾರದ ಒಡೆತನದ ಸಾರ್ವಜನಿಕ ಉದ್ಯಮಗಳಾದ ಬೆಮಲ್, ಹೆಚ್ಎಎಲ್, ಬಿಇಎಲ್, ಬಿಎಸ್ಎನ್ಎಲ್, ಬಿಹೆಚ್ಇಎಲ್ ಸೇರಿದಂತೆ ಪ್ರತಿಷ್ಠಿತ ಕೈಗಾರಿಕೆಗಳು ರಾಜ್ಯ ಸರಕಾರದ ವಿವಿಧ ಇಲಾಖೆಗಳು ನಿಗಮ ಮಂಡಳಿಗಳು ನಗರಸಭೆ ಪುರಸಭೆಗಳಲ್ಲಿ ಹತ್ತಾರು ವರ್ಷಗಳಿಂದ ದುಡಿಯುತ್ತಿದ್ದರೂ ಖಾಯಂ ಮಾಡಲು ನಿರಾಕರಿಸಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಹಲವು ತೀರ್ಪುಗಳನ್ನು ನೀಡಿದ್ದರೂ ಜಾರಿ ಮಾಡಿಲ್ಲ ಇದರಿಂದಾಗಿಯೇ ಕಾರ್ಮಿಕರು ಬೀದಿಗೆ ಬಂದಿದ್ದಾರೆ ಎಂದು ದೂರಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ, ಕಾರ್ಮಿಕರನ್ನು ಶೋಷಣೆ ಮಾಡುವ ಗುತ್ತಿಗೆ ಹೊರಗುತ್ತಿಗೆ ಪದ್ದತಿಯನ್ನು ನಿಷೇಧಿಸಬೇಕು ಖಾಯಂಯೇತರ ನೌಕರರಿಗೆ ಪಿ.ಎಫ್, ಇಎಸ್ಐ, ಗ್ರಾಚ್ಯೂಟಿ, ಓಟಿ, ರಜೆ ಸೌಲಭ್ಯ, ಹೆರಿಗೆ ಮತ್ತಿತರರ ಸೌಲಭ್ಯಗಳನ್ನು ಒದಗಿಸಬೇಕು ರಾಜ್ಯ ಮತ್ತು ಕೇಂದ್ರ ಸರಕಾರಗಳು ಕೋರ್ಟ್ ಆದೇಶವನ್ನು ಕಡ್ಡಾಯವಾಗಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಖಜಾಂಚಿ ಹೆಚ್.ಬಿ ಕೃಷ್ಣಪ್ಪ, ಕಾರ್ಯದರ್ಶಿ ಭೀಮರಾಜ್ ಇದ್ದರು,

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

4 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

4 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

7 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

8 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

12 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

16 hours ago