Categories: ಕೋಲಾರ

ಗುತ್ತಿಗೆ ನೌಕರರ ಖಾಯಂಗೊಳಿಸಲು ಸೆ.30 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

ಕೋಲಾರ: ರಾಜ್ಯಾದ್ಯಂತ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರನ್ನು ಖಾಯಂಗೊಳಸಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲು ಒತ್ತಾಯಿಸಿ ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ಸೆ‌.30 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ತಿಳಿಸಿದರು,

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶಕ್ಕೆ ಸ್ವಾತಂತ್ರ್ಯ ಬಂದು 77 ವರ್ಷಗಳಾದರೂ ಕಾರ್ಮಿಕರ ಮೇಲಿನ ಶೋಷಣೆ ದಬ್ಬಾಳಿಕೆ ಇನ್ನೂ ನಿಂತಲ್ಲ ಜನಸಂಖ್ಯೆ ಹೆಚ್ಚಳಕ್ಕೆ ತಕ್ಕಂತೆ ಉದ್ಯೋಗ ಅವಕಾಶಗಳನ್ನು ಸೃಷ್ಟಿ ಮಾಡಬೇಕು ಯುವಜನತೆ ಉದ್ಯೋಗದ ಆಸೆಯಲ್ಲಿ ಕೈಗಾರಿಕೆಗಳು ಮತ್ತು ಕಛೇರಿಗಳಲ್ಲಿ ಕಡಿಮೆ ವೇತನಕ್ಕೆ ದುಡಿಯುವಂತಾಗಿದೆ ಗುತ್ತಿಗೆ, ಹೊರಗುತ್ತಿಗೆ, ಹಂಗಾಮಿ ಸೇರಿದಂತೆ ಎಲ್ಲಾ ಖಾಯಂಯೇತರ ಕಾರ್ಮಿಕರಿಗೆ ಕೆಲಸದ ಭದ್ರತೆಯನ್ನು ಸರಕಾರಗಳು ಒದಗಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಲಕ್ಷಾಂತರ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಯಾವುದೇ ವಿಶೇಷ ಸೌಲಭ್ಯವಿಲ್ಲದೆ ಸುಮಾರು 25-30 ವರ್ಷಗಳಿಂದ ಪ್ರಾಮಾಣಿಕವಾಗಿ ದುಡಿಯುತ್ತಿದ್ದಾರೆ. ಪ್ರಸ್ತುತ ನೀಡುತ್ತಿರುವ ವೇತನವು ಅತ್ಯಂತ ಕಡಿಮೆ ಇದ್ದು, ಕನಿಷ್ಠ ಜೀವನ ಸಾಗಿಸುವುದೂ ಕಷ್ಟವಾಗಿದೆ ಮುಂದೆ ನಿವೃತ್ತಿಯಾದರೆ ಗ್ರಾಚ್ಯೂಟಿ ಸಹ ಇಲ್ಲವಾಗಿದೆ ಸಮಾನ ಕೆಲಸಕ್ಕೆ ಸಮಾನ ವೇತನ ಒದಗಿಸಲು ಸರಕಾರವು ಕ್ರಮವಹಿಸಬೇಕು ಎಂದರು.

ಹಿರಿಯ ಕಾರ್ಮಿಕ ಮುಖಂಡ ಎ.ಆರ್ ಬಾಬು ಮಾತನಾಡಿ, ಕೇಂದ್ರ ಸರಕಾರದ ಒಡೆತನದ ಸಾರ್ವಜನಿಕ ಉದ್ಯಮಗಳಾದ ಬೆಮಲ್, ಹೆಚ್ಎಎಲ್, ಬಿಇಎಲ್, ಬಿಎಸ್ಎನ್ಎಲ್, ಬಿಹೆಚ್ಇಎಲ್ ಸೇರಿದಂತೆ ಪ್ರತಿಷ್ಠಿತ ಕೈಗಾರಿಕೆಗಳು ರಾಜ್ಯ ಸರಕಾರದ ವಿವಿಧ ಇಲಾಖೆಗಳು ನಿಗಮ ಮಂಡಳಿಗಳು ನಗರಸಭೆ ಪುರಸಭೆಗಳಲ್ಲಿ ಹತ್ತಾರು ವರ್ಷಗಳಿಂದ ದುಡಿಯುತ್ತಿದ್ದರೂ ಖಾಯಂ ಮಾಡಲು ನಿರಾಕರಿಸಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಹಲವು ತೀರ್ಪುಗಳನ್ನು ನೀಡಿದ್ದರೂ ಜಾರಿ ಮಾಡಿಲ್ಲ ಇದರಿಂದಾಗಿಯೇ ಕಾರ್ಮಿಕರು ಬೀದಿಗೆ ಬಂದಿದ್ದಾರೆ ಎಂದು ದೂರಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ, ಕಾರ್ಮಿಕರನ್ನು ಶೋಷಣೆ ಮಾಡುವ ಗುತ್ತಿಗೆ ಹೊರಗುತ್ತಿಗೆ ಪದ್ದತಿಯನ್ನು ನಿಷೇಧಿಸಬೇಕು ಖಾಯಂಯೇತರ ನೌಕರರಿಗೆ ಪಿ.ಎಫ್, ಇಎಸ್ಐ, ಗ್ರಾಚ್ಯೂಟಿ, ಓಟಿ, ರಜೆ ಸೌಲಭ್ಯ, ಹೆರಿಗೆ ಮತ್ತಿತರರ ಸೌಲಭ್ಯಗಳನ್ನು ಒದಗಿಸಬೇಕು ರಾಜ್ಯ ಮತ್ತು ಕೇಂದ್ರ ಸರಕಾರಗಳು ಕೋರ್ಟ್ ಆದೇಶವನ್ನು ಕಡ್ಡಾಯವಾಗಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಖಜಾಂಚಿ ಹೆಚ್.ಬಿ ಕೃಷ್ಣಪ್ಪ, ಕಾರ್ಯದರ್ಶಿ ಭೀಮರಾಜ್ ಇದ್ದರು,

Ramesh Babu

Journalist

Recent Posts

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

46 minutes ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

5 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

11 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago