Categories: ವಿಜಯಪುರ

ಗುಮ್ಮಟನಗರಿ ವಿಜಯಪುರದಲ್ಲಿ ನಾಗರಿಕ‌ ಸಮಾಜ ತಲೆತಗ್ಗಿಸುವ ಘಟನೆ ಬೆಳಕಿಗೆ: ಇಟ್ಟಿಗೆ ಬಟ್ಟಿ ಮಾಲೀಕನಿಂದ ಕಾರ್ಮಿಕರ ಮೇಲೆ ರಾಕ್ಷಸಿ ಕೃತ್ಯ: ಕಾರ್ಮಿಕರ ಮೇಲೆ ನಡೆದ ಹಲ್ಲೆ ಅಮಾನವೀಯ ಮಾತ್ರವಲ್ಲ, ಘೋರ ಅಪರಾಧವೂ ಹೌದು ಎಂದು ಸಿಎಂ ಆಕ್ರೋಶ

ಗುಮ್ಮಟನಗರಿ ವಿಜಯಪುರದಲ್ಲಿ ನಾಗರಿಕ‌ ಸಮಾಜ ತಲೆತಗ್ಗಿಸುವ ಘಟನೆ ನಡೆದಿದೆ. ಕೆಲಸಕ್ಕೆ ಬಾರದ ಕಾರ್ಮಿಕರನ್ನ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ನಡೆದ ಬೆನ್ನಲ್ಲೇ ಇಬ್ಬರನ್ನ ಬಂಧಿಸಿರುವ ಪೊಲೀಸರು ಉಳಿದವರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ.

ಇಟ್ಟಿಗೆ ಬಟ್ಟಿ ಮಾಲೀಕನಿಂದ ರಾಕ್ಷಸ ಕೃತ್ಯ ನಡೆಸಲಾಗಿದೆ. ಕಾರ್ಮಿಕರ ಮೇಲೆ ಪೈಪ್‌ಗಳಿಂದ ಮನಬಂದಂತೆ ಹಲ್ಲೆ ಮಾಡಲಾಗಿದೆ. ವಿಜಯಪುರ ನಗರದ ಗಾಂಧಿ ನಗರದ ಬಳಿಯಿರುವ ಇಟ್ಟಿಗೆ ಬಟ್ಟಿಯಲ್ಲಿ ಘಟನೆ ನಡೆದಿದ್ದು, ಮಾಲೀಕ ಖೇಮು ರಾಠೋಡ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ.

ಮೂಲತ ಜಮಖಂಡಿ ತಾಲೂಕಿನ ಚಿಕ್ಕಲಿಕಿ ಗ್ರಾಮದ ಮೂವರು ಕಾರ್ಮಿಕರಾದ ಸದಾಶಿವ ಮಾದರ್, ಸದಾಶಿವ ಬಬಲಾದಿ, ಉಮೇಶ ಮಾದರ್ ಮೇಲೆ ಹಲ್ಲೆ ಮಾಡಲಾಗಿದೆ. ಹಬ್ಬಕ್ಕೆ ಊರಿಗೆ ಹೋಗಿ ವಾಪಸ್ ಬರೋದು ವಿಳಂಭವಾದ ಕಾರಣ ಹಲ್ಲೆ ಮಾಡಲಾಗಿದೆ. ಗಾಯಗೊಂಡ ಕಾರ್ಮಿಕರು ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ವಿಡಿಯೋ ವೈರಲ್ ಆಗುತ್ತಿದಂತೆಯೆ ಎಚ್ಚೆತ್ತಿರುವ ಪೊಲೀಸರು, ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಇಟ್ಟಿಗೆ ಬಟ್ಟಿ ಮಾಲೀಕ ಖೇಮು ರಾಠೋಡ್, ಸಚಿನ್ ಮಾನವರ್, ವಿಶಾಲ್ ಜುಮನಾಳ್  ಬಂಧಿಸಲಾಗಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆದಿದೆ.

 

ಇತ್ತ ಘಟನೆ ಬಳಿಕ ಖೇಮು ರಾಠೋಡ್ ಇಟ್ಟಿಗೆ ಬಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ವಾಪಸ್ ತೆರಳಿದ್ದಾರೆ. ಇಡೀ ಕಾರ್ಖಾನೆ ಖಾಲಿ ಖಾಲಿಯಾಗಿದೆ. ಕೆಲಸಕ್ಕೆ ಬರೋದು ವಿಳಂಭ ಕಾರಣದಿಂದಾಗಿ ಹಲ್ಲೆ ಮಾಡಿದ್ದು, ಉಳಿದ ಕಾರ್ಮಿಕರಿಗೂ ಭಯ ಹುಟ್ಟಿಸಿದೆ. ಹಾಗಾಗಿ ಅವರು ಕೂಡಾ ಕಾರ್ಖಾನೆ ತೊರೆದಿದ್ದಾರೆ.

ವಿಡಿಯೋ ವೈರಲ್ ಬಳಿಕ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಕೀಯ ನಾಯಕರು ಕೂಡಾ ಘಟನೆ ಖಂಡಿಸಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಒಟ್ಟಾರೆ ಮಾನವಿಯತೇ ಇಲ್ಲದೆ ವರ್ತನೆ ಮಾಡಿರುವ ವಿಡಿಯೋ ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.

ವಿಜಯಪುರದ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುವ ಕಾರ್ಮಿಕರ ಮೇಲೆ ನಡೆದ ಹಲ್ಲೆ ಅಮಾನವೀಯ ಮಾತ್ರವಲ್ಲ, ಘೋರ ಅಪರಾಧವೂ ಹೌದು. ಬಡ ಕೂಲಿಕಾರ್ಮಿಕರ ಮೇಲೆ ಹಲ್ಲೆ ಮಾಡಿದ ದುರುಳರನ್ನು ಈಗಾಗಲೇ ಬಂಧಿಸಲಾಗಿದ್ದು, ಸೂಕ್ತ ತನಿಖೆ ನಡೆಸಿ, ಅಪರಾಧಿಗಳನ್ನು ಗರಿಷ್ಠ ಶಿಕ್ಷೆಗೆ ಒಳಪಡಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

11 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

16 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

16 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

21 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago