ಗುಮ್ಮಟನಗರಿ ವಿಜಯಪುರದಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ ನಡೆದಿದೆ. ಕೆಲಸಕ್ಕೆ ಬಾರದ ಕಾರ್ಮಿಕರನ್ನ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ನಡೆದ ಬೆನ್ನಲ್ಲೇ ಇಬ್ಬರನ್ನ ಬಂಧಿಸಿರುವ ಪೊಲೀಸರು ಉಳಿದವರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ.
ಇಟ್ಟಿಗೆ ಬಟ್ಟಿ ಮಾಲೀಕನಿಂದ ರಾಕ್ಷಸ ಕೃತ್ಯ ನಡೆಸಲಾಗಿದೆ. ಕಾರ್ಮಿಕರ ಮೇಲೆ ಪೈಪ್ಗಳಿಂದ ಮನಬಂದಂತೆ ಹಲ್ಲೆ ಮಾಡಲಾಗಿದೆ. ವಿಜಯಪುರ ನಗರದ ಗಾಂಧಿ ನಗರದ ಬಳಿಯಿರುವ ಇಟ್ಟಿಗೆ ಬಟ್ಟಿಯಲ್ಲಿ ಘಟನೆ ನಡೆದಿದ್ದು, ಮಾಲೀಕ ಖೇಮು ರಾಠೋಡ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ.
ಮೂಲತ ಜಮಖಂಡಿ ತಾಲೂಕಿನ ಚಿಕ್ಕಲಿಕಿ ಗ್ರಾಮದ ಮೂವರು ಕಾರ್ಮಿಕರಾದ ಸದಾಶಿವ ಮಾದರ್, ಸದಾಶಿವ ಬಬಲಾದಿ, ಉಮೇಶ ಮಾದರ್ ಮೇಲೆ ಹಲ್ಲೆ ಮಾಡಲಾಗಿದೆ. ಹಬ್ಬಕ್ಕೆ ಊರಿಗೆ ಹೋಗಿ ವಾಪಸ್ ಬರೋದು ವಿಳಂಭವಾದ ಕಾರಣ ಹಲ್ಲೆ ಮಾಡಲಾಗಿದೆ. ಗಾಯಗೊಂಡ ಕಾರ್ಮಿಕರು ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ವಿಡಿಯೋ ವೈರಲ್ ಆಗುತ್ತಿದಂತೆಯೆ ಎಚ್ಚೆತ್ತಿರುವ ಪೊಲೀಸರು, ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಇಟ್ಟಿಗೆ ಬಟ್ಟಿ ಮಾಲೀಕ ಖೇಮು ರಾಠೋಡ್, ಸಚಿನ್ ಮಾನವರ್, ವಿಶಾಲ್ ಜುಮನಾಳ್ ಬಂಧಿಸಲಾಗಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆದಿದೆ.
ಇತ್ತ ಘಟನೆ ಬಳಿಕ ಖೇಮು ರಾಠೋಡ್ ಇಟ್ಟಿಗೆ ಬಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ವಾಪಸ್ ತೆರಳಿದ್ದಾರೆ. ಇಡೀ ಕಾರ್ಖಾನೆ ಖಾಲಿ ಖಾಲಿಯಾಗಿದೆ. ಕೆಲಸಕ್ಕೆ ಬರೋದು ವಿಳಂಭ ಕಾರಣದಿಂದಾಗಿ ಹಲ್ಲೆ ಮಾಡಿದ್ದು, ಉಳಿದ ಕಾರ್ಮಿಕರಿಗೂ ಭಯ ಹುಟ್ಟಿಸಿದೆ. ಹಾಗಾಗಿ ಅವರು ಕೂಡಾ ಕಾರ್ಖಾನೆ ತೊರೆದಿದ್ದಾರೆ.
ವಿಡಿಯೋ ವೈರಲ್ ಬಳಿಕ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಕೀಯ ನಾಯಕರು ಕೂಡಾ ಘಟನೆ ಖಂಡಿಸಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಒಟ್ಟಾರೆ ಮಾನವಿಯತೇ ಇಲ್ಲದೆ ವರ್ತನೆ ಮಾಡಿರುವ ವಿಡಿಯೋ ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…
ಪ್ರತಿ ತಿಂಗಳ ಮೊದಲನೇ ಶನಿವಾರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಪ್ರತಿ ತಿಂಗಳ ಮೂರನೇ…