ಗುಮ್ಮಟನಗರಿ ವಿಜಯಪುರದಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ ನಡೆದಿದೆ. ಕೆಲಸಕ್ಕೆ ಬಾರದ ಕಾರ್ಮಿಕರನ್ನ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ನಡೆದ ಬೆನ್ನಲ್ಲೇ ಇಬ್ಬರನ್ನ ಬಂಧಿಸಿರುವ ಪೊಲೀಸರು ಉಳಿದವರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ.
ಇಟ್ಟಿಗೆ ಬಟ್ಟಿ ಮಾಲೀಕನಿಂದ ರಾಕ್ಷಸ ಕೃತ್ಯ ನಡೆಸಲಾಗಿದೆ. ಕಾರ್ಮಿಕರ ಮೇಲೆ ಪೈಪ್ಗಳಿಂದ ಮನಬಂದಂತೆ ಹಲ್ಲೆ ಮಾಡಲಾಗಿದೆ. ವಿಜಯಪುರ ನಗರದ ಗಾಂಧಿ ನಗರದ ಬಳಿಯಿರುವ ಇಟ್ಟಿಗೆ ಬಟ್ಟಿಯಲ್ಲಿ ಘಟನೆ ನಡೆದಿದ್ದು, ಮಾಲೀಕ ಖೇಮು ರಾಠೋಡ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ.
ಮೂಲತ ಜಮಖಂಡಿ ತಾಲೂಕಿನ ಚಿಕ್ಕಲಿಕಿ ಗ್ರಾಮದ ಮೂವರು ಕಾರ್ಮಿಕರಾದ ಸದಾಶಿವ ಮಾದರ್, ಸದಾಶಿವ ಬಬಲಾದಿ, ಉಮೇಶ ಮಾದರ್ ಮೇಲೆ ಹಲ್ಲೆ ಮಾಡಲಾಗಿದೆ. ಹಬ್ಬಕ್ಕೆ ಊರಿಗೆ ಹೋಗಿ ವಾಪಸ್ ಬರೋದು ವಿಳಂಭವಾದ ಕಾರಣ ಹಲ್ಲೆ ಮಾಡಲಾಗಿದೆ. ಗಾಯಗೊಂಡ ಕಾರ್ಮಿಕರು ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ವಿಡಿಯೋ ವೈರಲ್ ಆಗುತ್ತಿದಂತೆಯೆ ಎಚ್ಚೆತ್ತಿರುವ ಪೊಲೀಸರು, ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಇಟ್ಟಿಗೆ ಬಟ್ಟಿ ಮಾಲೀಕ ಖೇಮು ರಾಠೋಡ್, ಸಚಿನ್ ಮಾನವರ್, ವಿಶಾಲ್ ಜುಮನಾಳ್ ಬಂಧಿಸಲಾಗಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆದಿದೆ.
ಇತ್ತ ಘಟನೆ ಬಳಿಕ ಖೇಮು ರಾಠೋಡ್ ಇಟ್ಟಿಗೆ ಬಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ವಾಪಸ್ ತೆರಳಿದ್ದಾರೆ. ಇಡೀ ಕಾರ್ಖಾನೆ ಖಾಲಿ ಖಾಲಿಯಾಗಿದೆ. ಕೆಲಸಕ್ಕೆ ಬರೋದು ವಿಳಂಭ ಕಾರಣದಿಂದಾಗಿ ಹಲ್ಲೆ ಮಾಡಿದ್ದು, ಉಳಿದ ಕಾರ್ಮಿಕರಿಗೂ ಭಯ ಹುಟ್ಟಿಸಿದೆ. ಹಾಗಾಗಿ ಅವರು ಕೂಡಾ ಕಾರ್ಖಾನೆ ತೊರೆದಿದ್ದಾರೆ.
ವಿಡಿಯೋ ವೈರಲ್ ಬಳಿಕ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಕೀಯ ನಾಯಕರು ಕೂಡಾ ಘಟನೆ ಖಂಡಿಸಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಒಟ್ಟಾರೆ ಮಾನವಿಯತೇ ಇಲ್ಲದೆ ವರ್ತನೆ ಮಾಡಿರುವ ವಿಡಿಯೋ ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್…
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…