ಗುಮ್ಮಟನಗರಿ ವಿಜಯಪುರದಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ ನಡೆದಿದೆ. ಕೆಲಸಕ್ಕೆ ಬಾರದ ಕಾರ್ಮಿಕರನ್ನ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ನಡೆದ ಬೆನ್ನಲ್ಲೇ ಇಬ್ಬರನ್ನ ಬಂಧಿಸಿರುವ ಪೊಲೀಸರು ಉಳಿದವರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ.
ಇಟ್ಟಿಗೆ ಬಟ್ಟಿ ಮಾಲೀಕನಿಂದ ರಾಕ್ಷಸ ಕೃತ್ಯ ನಡೆಸಲಾಗಿದೆ. ಕಾರ್ಮಿಕರ ಮೇಲೆ ಪೈಪ್ಗಳಿಂದ ಮನಬಂದಂತೆ ಹಲ್ಲೆ ಮಾಡಲಾಗಿದೆ. ವಿಜಯಪುರ ನಗರದ ಗಾಂಧಿ ನಗರದ ಬಳಿಯಿರುವ ಇಟ್ಟಿಗೆ ಬಟ್ಟಿಯಲ್ಲಿ ಘಟನೆ ನಡೆದಿದ್ದು, ಮಾಲೀಕ ಖೇಮು ರಾಠೋಡ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ.
ಮೂಲತ ಜಮಖಂಡಿ ತಾಲೂಕಿನ ಚಿಕ್ಕಲಿಕಿ ಗ್ರಾಮದ ಮೂವರು ಕಾರ್ಮಿಕರಾದ ಸದಾಶಿವ ಮಾದರ್, ಸದಾಶಿವ ಬಬಲಾದಿ, ಉಮೇಶ ಮಾದರ್ ಮೇಲೆ ಹಲ್ಲೆ ಮಾಡಲಾಗಿದೆ. ಹಬ್ಬಕ್ಕೆ ಊರಿಗೆ ಹೋಗಿ ವಾಪಸ್ ಬರೋದು ವಿಳಂಭವಾದ ಕಾರಣ ಹಲ್ಲೆ ಮಾಡಲಾಗಿದೆ. ಗಾಯಗೊಂಡ ಕಾರ್ಮಿಕರು ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ವಿಡಿಯೋ ವೈರಲ್ ಆಗುತ್ತಿದಂತೆಯೆ ಎಚ್ಚೆತ್ತಿರುವ ಪೊಲೀಸರು, ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಇಟ್ಟಿಗೆ ಬಟ್ಟಿ ಮಾಲೀಕ ಖೇಮು ರಾಠೋಡ್, ಸಚಿನ್ ಮಾನವರ್, ವಿಶಾಲ್ ಜುಮನಾಳ್ ಬಂಧಿಸಲಾಗಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆದಿದೆ.
ಇತ್ತ ಘಟನೆ ಬಳಿಕ ಖೇಮು ರಾಠೋಡ್ ಇಟ್ಟಿಗೆ ಬಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ವಾಪಸ್ ತೆರಳಿದ್ದಾರೆ. ಇಡೀ ಕಾರ್ಖಾನೆ ಖಾಲಿ ಖಾಲಿಯಾಗಿದೆ. ಕೆಲಸಕ್ಕೆ ಬರೋದು ವಿಳಂಭ ಕಾರಣದಿಂದಾಗಿ ಹಲ್ಲೆ ಮಾಡಿದ್ದು, ಉಳಿದ ಕಾರ್ಮಿಕರಿಗೂ ಭಯ ಹುಟ್ಟಿಸಿದೆ. ಹಾಗಾಗಿ ಅವರು ಕೂಡಾ ಕಾರ್ಖಾನೆ ತೊರೆದಿದ್ದಾರೆ.
ವಿಡಿಯೋ ವೈರಲ್ ಬಳಿಕ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಕೀಯ ನಾಯಕರು ಕೂಡಾ ಘಟನೆ ಖಂಡಿಸಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಒಟ್ಟಾರೆ ಮಾನವಿಯತೇ ಇಲ್ಲದೆ ವರ್ತನೆ ಮಾಡಿರುವ ವಿಡಿಯೋ ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…