Categories: ವಿಜಯಪುರ

ಗುಮ್ಮಟನಗರಿ ವಿಜಯಪುರದಲ್ಲಿ ನಾಗರಿಕ‌ ಸಮಾಜ ತಲೆತಗ್ಗಿಸುವ ಘಟನೆ ಬೆಳಕಿಗೆ: ಇಟ್ಟಿಗೆ ಬಟ್ಟಿ ಮಾಲೀಕನಿಂದ ಕಾರ್ಮಿಕರ ಮೇಲೆ ರಾಕ್ಷಸಿ ಕೃತ್ಯ: ಕಾರ್ಮಿಕರ ಮೇಲೆ ನಡೆದ ಹಲ್ಲೆ ಅಮಾನವೀಯ ಮಾತ್ರವಲ್ಲ, ಘೋರ ಅಪರಾಧವೂ ಹೌದು ಎಂದು ಸಿಎಂ ಆಕ್ರೋಶ

ಗುಮ್ಮಟನಗರಿ ವಿಜಯಪುರದಲ್ಲಿ ನಾಗರಿಕ‌ ಸಮಾಜ ತಲೆತಗ್ಗಿಸುವ ಘಟನೆ ನಡೆದಿದೆ. ಕೆಲಸಕ್ಕೆ ಬಾರದ ಕಾರ್ಮಿಕರನ್ನ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ನಡೆದ ಬೆನ್ನಲ್ಲೇ ಇಬ್ಬರನ್ನ ಬಂಧಿಸಿರುವ ಪೊಲೀಸರು ಉಳಿದವರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ.

ಇಟ್ಟಿಗೆ ಬಟ್ಟಿ ಮಾಲೀಕನಿಂದ ರಾಕ್ಷಸ ಕೃತ್ಯ ನಡೆಸಲಾಗಿದೆ. ಕಾರ್ಮಿಕರ ಮೇಲೆ ಪೈಪ್‌ಗಳಿಂದ ಮನಬಂದಂತೆ ಹಲ್ಲೆ ಮಾಡಲಾಗಿದೆ. ವಿಜಯಪುರ ನಗರದ ಗಾಂಧಿ ನಗರದ ಬಳಿಯಿರುವ ಇಟ್ಟಿಗೆ ಬಟ್ಟಿಯಲ್ಲಿ ಘಟನೆ ನಡೆದಿದ್ದು, ಮಾಲೀಕ ಖೇಮು ರಾಠೋಡ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ.

ಮೂಲತ ಜಮಖಂಡಿ ತಾಲೂಕಿನ ಚಿಕ್ಕಲಿಕಿ ಗ್ರಾಮದ ಮೂವರು ಕಾರ್ಮಿಕರಾದ ಸದಾಶಿವ ಮಾದರ್, ಸದಾಶಿವ ಬಬಲಾದಿ, ಉಮೇಶ ಮಾದರ್ ಮೇಲೆ ಹಲ್ಲೆ ಮಾಡಲಾಗಿದೆ. ಹಬ್ಬಕ್ಕೆ ಊರಿಗೆ ಹೋಗಿ ವಾಪಸ್ ಬರೋದು ವಿಳಂಭವಾದ ಕಾರಣ ಹಲ್ಲೆ ಮಾಡಲಾಗಿದೆ. ಗಾಯಗೊಂಡ ಕಾರ್ಮಿಕರು ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ವಿಡಿಯೋ ವೈರಲ್ ಆಗುತ್ತಿದಂತೆಯೆ ಎಚ್ಚೆತ್ತಿರುವ ಪೊಲೀಸರು, ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಇಟ್ಟಿಗೆ ಬಟ್ಟಿ ಮಾಲೀಕ ಖೇಮು ರಾಠೋಡ್, ಸಚಿನ್ ಮಾನವರ್, ವಿಶಾಲ್ ಜುಮನಾಳ್  ಬಂಧಿಸಲಾಗಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆದಿದೆ.

 

ಇತ್ತ ಘಟನೆ ಬಳಿಕ ಖೇಮು ರಾಠೋಡ್ ಇಟ್ಟಿಗೆ ಬಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ವಾಪಸ್ ತೆರಳಿದ್ದಾರೆ. ಇಡೀ ಕಾರ್ಖಾನೆ ಖಾಲಿ ಖಾಲಿಯಾಗಿದೆ. ಕೆಲಸಕ್ಕೆ ಬರೋದು ವಿಳಂಭ ಕಾರಣದಿಂದಾಗಿ ಹಲ್ಲೆ ಮಾಡಿದ್ದು, ಉಳಿದ ಕಾರ್ಮಿಕರಿಗೂ ಭಯ ಹುಟ್ಟಿಸಿದೆ. ಹಾಗಾಗಿ ಅವರು ಕೂಡಾ ಕಾರ್ಖಾನೆ ತೊರೆದಿದ್ದಾರೆ.

ವಿಡಿಯೋ ವೈರಲ್ ಬಳಿಕ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಕೀಯ ನಾಯಕರು ಕೂಡಾ ಘಟನೆ ಖಂಡಿಸಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಒಟ್ಟಾರೆ ಮಾನವಿಯತೇ ಇಲ್ಲದೆ ವರ್ತನೆ ಮಾಡಿರುವ ವಿಡಿಯೋ ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.

ವಿಜಯಪುರದ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುವ ಕಾರ್ಮಿಕರ ಮೇಲೆ ನಡೆದ ಹಲ್ಲೆ ಅಮಾನವೀಯ ಮಾತ್ರವಲ್ಲ, ಘೋರ ಅಪರಾಧವೂ ಹೌದು. ಬಡ ಕೂಲಿಕಾರ್ಮಿಕರ ಮೇಲೆ ಹಲ್ಲೆ ಮಾಡಿದ ದುರುಳರನ್ನು ಈಗಾಗಲೇ ಬಂಧಿಸಲಾಗಿದ್ದು, ಸೂಕ್ತ ತನಿಖೆ ನಡೆಸಿ, ಅಪರಾಧಿಗಳನ್ನು ಗರಿಷ್ಠ ಶಿಕ್ಷೆಗೆ ಒಳಪಡಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

20 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 days ago