ಗುಮ್ಮಟನಗರಿ ವಿಜಯಪುರದಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ ನಡೆದಿದೆ. ಕೆಲಸಕ್ಕೆ ಬಾರದ ಕಾರ್ಮಿಕರನ್ನ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ನಡೆದ ಬೆನ್ನಲ್ಲೇ ಇಬ್ಬರನ್ನ ಬಂಧಿಸಿರುವ ಪೊಲೀಸರು ಉಳಿದವರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ.
ಇಟ್ಟಿಗೆ ಬಟ್ಟಿ ಮಾಲೀಕನಿಂದ ರಾಕ್ಷಸ ಕೃತ್ಯ ನಡೆಸಲಾಗಿದೆ. ಕಾರ್ಮಿಕರ ಮೇಲೆ ಪೈಪ್ಗಳಿಂದ ಮನಬಂದಂತೆ ಹಲ್ಲೆ ಮಾಡಲಾಗಿದೆ. ವಿಜಯಪುರ ನಗರದ ಗಾಂಧಿ ನಗರದ ಬಳಿಯಿರುವ ಇಟ್ಟಿಗೆ ಬಟ್ಟಿಯಲ್ಲಿ ಘಟನೆ ನಡೆದಿದ್ದು, ಮಾಲೀಕ ಖೇಮು ರಾಠೋಡ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ.
ಮೂಲತ ಜಮಖಂಡಿ ತಾಲೂಕಿನ ಚಿಕ್ಕಲಿಕಿ ಗ್ರಾಮದ ಮೂವರು ಕಾರ್ಮಿಕರಾದ ಸದಾಶಿವ ಮಾದರ್, ಸದಾಶಿವ ಬಬಲಾದಿ, ಉಮೇಶ ಮಾದರ್ ಮೇಲೆ ಹಲ್ಲೆ ಮಾಡಲಾಗಿದೆ. ಹಬ್ಬಕ್ಕೆ ಊರಿಗೆ ಹೋಗಿ ವಾಪಸ್ ಬರೋದು ವಿಳಂಭವಾದ ಕಾರಣ ಹಲ್ಲೆ ಮಾಡಲಾಗಿದೆ. ಗಾಯಗೊಂಡ ಕಾರ್ಮಿಕರು ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ವಿಡಿಯೋ ವೈರಲ್ ಆಗುತ್ತಿದಂತೆಯೆ ಎಚ್ಚೆತ್ತಿರುವ ಪೊಲೀಸರು, ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಇಟ್ಟಿಗೆ ಬಟ್ಟಿ ಮಾಲೀಕ ಖೇಮು ರಾಠೋಡ್, ಸಚಿನ್ ಮಾನವರ್, ವಿಶಾಲ್ ಜುಮನಾಳ್ ಬಂಧಿಸಲಾಗಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆದಿದೆ.
ಇತ್ತ ಘಟನೆ ಬಳಿಕ ಖೇಮು ರಾಠೋಡ್ ಇಟ್ಟಿಗೆ ಬಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ವಾಪಸ್ ತೆರಳಿದ್ದಾರೆ. ಇಡೀ ಕಾರ್ಖಾನೆ ಖಾಲಿ ಖಾಲಿಯಾಗಿದೆ. ಕೆಲಸಕ್ಕೆ ಬರೋದು ವಿಳಂಭ ಕಾರಣದಿಂದಾಗಿ ಹಲ್ಲೆ ಮಾಡಿದ್ದು, ಉಳಿದ ಕಾರ್ಮಿಕರಿಗೂ ಭಯ ಹುಟ್ಟಿಸಿದೆ. ಹಾಗಾಗಿ ಅವರು ಕೂಡಾ ಕಾರ್ಖಾನೆ ತೊರೆದಿದ್ದಾರೆ.
ವಿಡಿಯೋ ವೈರಲ್ ಬಳಿಕ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಕೀಯ ನಾಯಕರು ಕೂಡಾ ಘಟನೆ ಖಂಡಿಸಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಒಟ್ಟಾರೆ ಮಾನವಿಯತೇ ಇಲ್ಲದೆ ವರ್ತನೆ ಮಾಡಿರುವ ವಿಡಿಯೋ ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…