“ಗುರಿ” ಇಟ್ಟ ದೊಡ್ಡಬಳ್ಳಾಪುರ ಪ್ರತಿಭೆ ಮಹಾನಿಧಿ

ವಿದ್ಯಾರ್ಥಿ ಮತ್ತು ಶಿಕ್ಷಕನ ಬಾಂಧವ್ಯ, ಸರ್ಕಾರಿ ಶಾಲೆಗಳ ಇಂದಿನ ಸ್ಥಿತಿಗತಿ ಮೊದಲಾದ ಅಂಶಗಳು ಒಳಗೊಂಡಿರುವ ‘ನನ್ನ ಶಾಲೆಯನ್ನು ಪ್ರೀತಿಸುತ್ತೇನೆ’ ಎಂಬ ಅಡಿಬರಹವಿರುವ ಗುರಿ ಸಿನಿಮಾದಲ್ಲಿ ನಟ ಅಚ್ಯುತ್ ಕುಮಾರ್, ನಾಗಾಭರಣ, ಅವಿನಾಶ್ಉಗ್ರಂ ಮಂಜು ಮತ್ತು ಜಯಶ್ರೀ, ದೊಡ್ಡಬಳ್ಳಾಪುರದ ಹೆಮ್ಮೆಯ ಕುವರ ಮಹಾನಿಧಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

‘ಗುರಿ’ ಚಿತ್ರದ ಟೀಸರ್, ಟ್ರೈಲರ್ ಮತ್ತು ಹಾಡುಗಳು ಇತ್ತೀಚೆಗಷ್ಟೇ ಬಿಡುಗಡೆಗೊಂಡಿವೆ. 80ರ ದಶಕದಲ್ಲಿ ರಾಜ್‌ಕುಮಾರ್ ಅಭಿನಯಸಿದ್ದ ‘ಗುರಿ’ ಚಿತ್ರವು ಸೂಪರ್ ಹಿಟ್ ಆಗಿತ್ತು. ಇದೀಗ ಅದೇ ಹೆಸರಿನಲ್ಲಿ ಸಿನಿಮಾವೊಂದು ಸಿದ್ಧಗೊಂಡಿದ್ದು, ಸೆಲ್ವಂ ಮಾದಪ್ಪನ್ ಕಥೆ ಬರೆದು ನಿರ್ದೇಶಿಸಿದ್ದಾರೆ. ಈ ಚಿತ್ರ ಇದೇ ತಿಂಗಳ 12ರಂದು ಅಂದರೆ ನಾಳೆ ಬೆಳ್ಳಿ ಪರದೆ ಮೇಲೆ ತೆರೆ ಕಾಣಲಿದೆ….

ಗುರಿ ಸಿನಿಮಾವು ನೈಜ ಘಟನೆಯನ್ನು ಆಧರಿಸಿದೆ. ಒಮ್ಮೆ ಕೋಲಾರದ ತೇರಳ್ಳಿ ಬೆಟ್ಟಕ್ಕೆ ಹೋಗಿದ್ದಾಗ, ಅಲ್ಲಿ ಸರ್ಕಾರಿ ಶಾಲೆಯನ್ನು ಮುಚ್ಚಲಾಗಿತ್ತು. ಮಕ್ಕಳು ಶಿಕ್ಷಕರೊಂದಿಗೆ ಕೆರೆಯಲ್ಲಿ ಆಟವಾಡುತ್ತಿದ್ದರು. ಸ್ಥಳೀಯರೊಂದಿಗೆ ಮಾತನಾಡಿದಾಗ ಒಂದಷ್ಟು ವಿಚಾರ ತಿಳಿಯಿತು. ಅದನ್ನೇ ಚಿತ್ರಕಥೆಯಾಗಿಸಿದ್ದೇನೆ. ವಿದ್ಯಾರ್ಥಿ ಮತ್ತು ಶಿಕ್ಷಕನ ಬಾಂಧವ್ಯ, ಸರ್ಕಾರಿ ಹಾಗೂ ಖಾಸಗಿ ಶಾಲೆಯ ಸಂಘರ್ಷ, ಸರ್ಕಾರಿ ಶಾಲೆಗಳ ಇಂದಿನ ಸ್ಥಿತಿಗತಿ ಮೊದಲಾದ ಅಂಶಗಳು ಚಿತ್ರದಲ್ಲಿವೆ’ ಎಂದು‌ ನಿರ್ದೇಶಕ   ಮಾದಪ್ಪನ್ ತಿಳಿಸಿದ್ದಾರೆ.

ಚಿತ್ರಕ್ಕೆ ವಿಷ್ಣುದುರ್ಗಾ ಪ್ರೊಡಕ್ಷನ್ ಅಡಿಯಲ್ಲಿ ರಾಧಿಕಾ.ಎಸ್.ಆರ್ ಮತ್ತು ಚಿತ್ರಲೇಖಾ.ಎಸ್ ನಿರ್ಮಾಣ ಮಾಡಿದ್ದಾರೆ. ಬಾಲನಟರಾದ ಮಹಾನಿಧಿ, ಟಿ.ಎಸ್.ನಾಗಾಭರಣ, ಅವಿನಾಶ್, ಪವನ್‌ಕುಮಾ‌ರ್, ಜೀವಿತ್‌ಭೂಷಣ್, ಜಯಶ್ರೀ, ಉಗ್ರಂ ಮಂಜು, ಸಂದೀಪ್ ಮಲಾನಿ, ಜಾಕ್ ಮಂಜು ಮನೋಹರ್‌ ಮುಂತಾದವರು ಚಿತ್ರದಲ್ಲಿದ್ದಾರೆ.

ಪಳನಿ ಸೇನಾಪತಿ ಸಂಗೀತವಿದೆ. ನಿರ್ದೇಶಕರೇ ಛಾಯಾಚಿತ್ರಗ್ರಹಣವನ್ನೂ ಮಾಡಿದ್ದಾರೆ. ಕೆ.ಎಂ.ಪ್ರಕಾಶ್ ಸಂಕಲನ, ವಿ.ಮನೋಹರ್, ಮಧುಸೂದನ್ ಸಾಹಿತ್ಯ ಚಿತ್ರಕ್ಕಿದೆ. ಬೆಂಗಳೂರು, ಕೋಲಾರ, ತೇರಳ್ಳಿ ಬೆಟ್ಟ ಮೊದಲಾದೆಡೆ ಚಿತ್ರೀಕರಣಗೊಂಡಿದೆ.

Ramesh Babu

Journalist

Recent Posts

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

6 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

19 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

20 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

21 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

23 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago