“ಗುರಿ” ಇಟ್ಟ ದೊಡ್ಡಬಳ್ಳಾಪುರ ಪ್ರತಿಭೆ ಮಹಾನಿಧಿ

ವಿದ್ಯಾರ್ಥಿ ಮತ್ತು ಶಿಕ್ಷಕನ ಬಾಂಧವ್ಯ, ಸರ್ಕಾರಿ ಶಾಲೆಗಳ ಇಂದಿನ ಸ್ಥಿತಿಗತಿ ಮೊದಲಾದ ಅಂಶಗಳು ಒಳಗೊಂಡಿರುವ ‘ನನ್ನ ಶಾಲೆಯನ್ನು ಪ್ರೀತಿಸುತ್ತೇನೆ’ ಎಂಬ ಅಡಿಬರಹವಿರುವ ಗುರಿ ಸಿನಿಮಾದಲ್ಲಿ ನಟ ಅಚ್ಯುತ್ ಕುಮಾರ್, ನಾಗಾಭರಣ, ಅವಿನಾಶ್ಉಗ್ರಂ ಮಂಜು ಮತ್ತು ಜಯಶ್ರೀ, ದೊಡ್ಡಬಳ್ಳಾಪುರದ ಹೆಮ್ಮೆಯ ಕುವರ ಮಹಾನಿಧಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

‘ಗುರಿ’ ಚಿತ್ರದ ಟೀಸರ್, ಟ್ರೈಲರ್ ಮತ್ತು ಹಾಡುಗಳು ಇತ್ತೀಚೆಗಷ್ಟೇ ಬಿಡುಗಡೆಗೊಂಡಿವೆ. 80ರ ದಶಕದಲ್ಲಿ ರಾಜ್‌ಕುಮಾರ್ ಅಭಿನಯಸಿದ್ದ ‘ಗುರಿ’ ಚಿತ್ರವು ಸೂಪರ್ ಹಿಟ್ ಆಗಿತ್ತು. ಇದೀಗ ಅದೇ ಹೆಸರಿನಲ್ಲಿ ಸಿನಿಮಾವೊಂದು ಸಿದ್ಧಗೊಂಡಿದ್ದು, ಸೆಲ್ವಂ ಮಾದಪ್ಪನ್ ಕಥೆ ಬರೆದು ನಿರ್ದೇಶಿಸಿದ್ದಾರೆ. ಈ ಚಿತ್ರ ಇದೇ ತಿಂಗಳ 12ರಂದು ಅಂದರೆ ನಾಳೆ ಬೆಳ್ಳಿ ಪರದೆ ಮೇಲೆ ತೆರೆ ಕಾಣಲಿದೆ….

ಗುರಿ ಸಿನಿಮಾವು ನೈಜ ಘಟನೆಯನ್ನು ಆಧರಿಸಿದೆ. ಒಮ್ಮೆ ಕೋಲಾರದ ತೇರಳ್ಳಿ ಬೆಟ್ಟಕ್ಕೆ ಹೋಗಿದ್ದಾಗ, ಅಲ್ಲಿ ಸರ್ಕಾರಿ ಶಾಲೆಯನ್ನು ಮುಚ್ಚಲಾಗಿತ್ತು. ಮಕ್ಕಳು ಶಿಕ್ಷಕರೊಂದಿಗೆ ಕೆರೆಯಲ್ಲಿ ಆಟವಾಡುತ್ತಿದ್ದರು. ಸ್ಥಳೀಯರೊಂದಿಗೆ ಮಾತನಾಡಿದಾಗ ಒಂದಷ್ಟು ವಿಚಾರ ತಿಳಿಯಿತು. ಅದನ್ನೇ ಚಿತ್ರಕಥೆಯಾಗಿಸಿದ್ದೇನೆ. ವಿದ್ಯಾರ್ಥಿ ಮತ್ತು ಶಿಕ್ಷಕನ ಬಾಂಧವ್ಯ, ಸರ್ಕಾರಿ ಹಾಗೂ ಖಾಸಗಿ ಶಾಲೆಯ ಸಂಘರ್ಷ, ಸರ್ಕಾರಿ ಶಾಲೆಗಳ ಇಂದಿನ ಸ್ಥಿತಿಗತಿ ಮೊದಲಾದ ಅಂಶಗಳು ಚಿತ್ರದಲ್ಲಿವೆ’ ಎಂದು‌ ನಿರ್ದೇಶಕ   ಮಾದಪ್ಪನ್ ತಿಳಿಸಿದ್ದಾರೆ.

ಚಿತ್ರಕ್ಕೆ ವಿಷ್ಣುದುರ್ಗಾ ಪ್ರೊಡಕ್ಷನ್ ಅಡಿಯಲ್ಲಿ ರಾಧಿಕಾ.ಎಸ್.ಆರ್ ಮತ್ತು ಚಿತ್ರಲೇಖಾ.ಎಸ್ ನಿರ್ಮಾಣ ಮಾಡಿದ್ದಾರೆ. ಬಾಲನಟರಾದ ಮಹಾನಿಧಿ, ಟಿ.ಎಸ್.ನಾಗಾಭರಣ, ಅವಿನಾಶ್, ಪವನ್‌ಕುಮಾ‌ರ್, ಜೀವಿತ್‌ಭೂಷಣ್, ಜಯಶ್ರೀ, ಉಗ್ರಂ ಮಂಜು, ಸಂದೀಪ್ ಮಲಾನಿ, ಜಾಕ್ ಮಂಜು ಮನೋಹರ್‌ ಮುಂತಾದವರು ಚಿತ್ರದಲ್ಲಿದ್ದಾರೆ.

ಪಳನಿ ಸೇನಾಪತಿ ಸಂಗೀತವಿದೆ. ನಿರ್ದೇಶಕರೇ ಛಾಯಾಚಿತ್ರಗ್ರಹಣವನ್ನೂ ಮಾಡಿದ್ದಾರೆ. ಕೆ.ಎಂ.ಪ್ರಕಾಶ್ ಸಂಕಲನ, ವಿ.ಮನೋಹರ್, ಮಧುಸೂದನ್ ಸಾಹಿತ್ಯ ಚಿತ್ರಕ್ಕಿದೆ. ಬೆಂಗಳೂರು, ಕೋಲಾರ, ತೇರಳ್ಳಿ ಬೆಟ್ಟ ಮೊದಲಾದೆಡೆ ಚಿತ್ರೀಕರಣಗೊಂಡಿದೆ.

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

14 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

16 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

20 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

2 days ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

3 days ago