“ಗುರಿ” ಇಟ್ಟ ದೊಡ್ಡಬಳ್ಳಾಪುರ ಪ್ರತಿಭೆ ಮಹಾನಿಧಿ

ವಿದ್ಯಾರ್ಥಿ ಮತ್ತು ಶಿಕ್ಷಕನ ಬಾಂಧವ್ಯ, ಸರ್ಕಾರಿ ಶಾಲೆಗಳ ಇಂದಿನ ಸ್ಥಿತಿಗತಿ ಮೊದಲಾದ ಅಂಶಗಳು ಒಳಗೊಂಡಿರುವ ‘ನನ್ನ ಶಾಲೆಯನ್ನು ಪ್ರೀತಿಸುತ್ತೇನೆ’ ಎಂಬ ಅಡಿಬರಹವಿರುವ ಗುರಿ ಸಿನಿಮಾದಲ್ಲಿ ನಟ ಅಚ್ಯುತ್ ಕುಮಾರ್, ನಾಗಾಭರಣ, ಅವಿನಾಶ್ಉಗ್ರಂ ಮಂಜು ಮತ್ತು ಜಯಶ್ರೀ, ದೊಡ್ಡಬಳ್ಳಾಪುರದ ಹೆಮ್ಮೆಯ ಕುವರ ಮಹಾನಿಧಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

‘ಗುರಿ’ ಚಿತ್ರದ ಟೀಸರ್, ಟ್ರೈಲರ್ ಮತ್ತು ಹಾಡುಗಳು ಇತ್ತೀಚೆಗಷ್ಟೇ ಬಿಡುಗಡೆಗೊಂಡಿವೆ. 80ರ ದಶಕದಲ್ಲಿ ರಾಜ್‌ಕುಮಾರ್ ಅಭಿನಯಸಿದ್ದ ‘ಗುರಿ’ ಚಿತ್ರವು ಸೂಪರ್ ಹಿಟ್ ಆಗಿತ್ತು. ಇದೀಗ ಅದೇ ಹೆಸರಿನಲ್ಲಿ ಸಿನಿಮಾವೊಂದು ಸಿದ್ಧಗೊಂಡಿದ್ದು, ಸೆಲ್ವಂ ಮಾದಪ್ಪನ್ ಕಥೆ ಬರೆದು ನಿರ್ದೇಶಿಸಿದ್ದಾರೆ. ಈ ಚಿತ್ರ ಇದೇ ತಿಂಗಳ 12ರಂದು ಅಂದರೆ ನಾಳೆ ಬೆಳ್ಳಿ ಪರದೆ ಮೇಲೆ ತೆರೆ ಕಾಣಲಿದೆ….

ಗುರಿ ಸಿನಿಮಾವು ನೈಜ ಘಟನೆಯನ್ನು ಆಧರಿಸಿದೆ. ಒಮ್ಮೆ ಕೋಲಾರದ ತೇರಳ್ಳಿ ಬೆಟ್ಟಕ್ಕೆ ಹೋಗಿದ್ದಾಗ, ಅಲ್ಲಿ ಸರ್ಕಾರಿ ಶಾಲೆಯನ್ನು ಮುಚ್ಚಲಾಗಿತ್ತು. ಮಕ್ಕಳು ಶಿಕ್ಷಕರೊಂದಿಗೆ ಕೆರೆಯಲ್ಲಿ ಆಟವಾಡುತ್ತಿದ್ದರು. ಸ್ಥಳೀಯರೊಂದಿಗೆ ಮಾತನಾಡಿದಾಗ ಒಂದಷ್ಟು ವಿಚಾರ ತಿಳಿಯಿತು. ಅದನ್ನೇ ಚಿತ್ರಕಥೆಯಾಗಿಸಿದ್ದೇನೆ. ವಿದ್ಯಾರ್ಥಿ ಮತ್ತು ಶಿಕ್ಷಕನ ಬಾಂಧವ್ಯ, ಸರ್ಕಾರಿ ಹಾಗೂ ಖಾಸಗಿ ಶಾಲೆಯ ಸಂಘರ್ಷ, ಸರ್ಕಾರಿ ಶಾಲೆಗಳ ಇಂದಿನ ಸ್ಥಿತಿಗತಿ ಮೊದಲಾದ ಅಂಶಗಳು ಚಿತ್ರದಲ್ಲಿವೆ’ ಎಂದು‌ ನಿರ್ದೇಶಕ   ಮಾದಪ್ಪನ್ ತಿಳಿಸಿದ್ದಾರೆ.

ಚಿತ್ರಕ್ಕೆ ವಿಷ್ಣುದುರ್ಗಾ ಪ್ರೊಡಕ್ಷನ್ ಅಡಿಯಲ್ಲಿ ರಾಧಿಕಾ.ಎಸ್.ಆರ್ ಮತ್ತು ಚಿತ್ರಲೇಖಾ.ಎಸ್ ನಿರ್ಮಾಣ ಮಾಡಿದ್ದಾರೆ. ಬಾಲನಟರಾದ ಮಹಾನಿಧಿ, ಟಿ.ಎಸ್.ನಾಗಾಭರಣ, ಅವಿನಾಶ್, ಪವನ್‌ಕುಮಾ‌ರ್, ಜೀವಿತ್‌ಭೂಷಣ್, ಜಯಶ್ರೀ, ಉಗ್ರಂ ಮಂಜು, ಸಂದೀಪ್ ಮಲಾನಿ, ಜಾಕ್ ಮಂಜು ಮನೋಹರ್‌ ಮುಂತಾದವರು ಚಿತ್ರದಲ್ಲಿದ್ದಾರೆ.

ಪಳನಿ ಸೇನಾಪತಿ ಸಂಗೀತವಿದೆ. ನಿರ್ದೇಶಕರೇ ಛಾಯಾಚಿತ್ರಗ್ರಹಣವನ್ನೂ ಮಾಡಿದ್ದಾರೆ. ಕೆ.ಎಂ.ಪ್ರಕಾಶ್ ಸಂಕಲನ, ವಿ.ಮನೋಹರ್, ಮಧುಸೂದನ್ ಸಾಹಿತ್ಯ ಚಿತ್ರಕ್ಕಿದೆ. ಬೆಂಗಳೂರು, ಕೋಲಾರ, ತೇರಳ್ಳಿ ಬೆಟ್ಟ ಮೊದಲಾದೆಡೆ ಚಿತ್ರೀಕರಣಗೊಂಡಿದೆ.

Ramesh Babu

Journalist

Recent Posts

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

2 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

2 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

5 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

6 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

8 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ ರಾಜಶೇಖರ್ ಆಚಾರ್

  ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

18 hours ago