2019 ರಲ್ಲಿ ಪ್ರಾರಂಭವಾದ ಗುರುಕುಲ ಶಾಲೆ ಆಡಳಿತ ಮಂಡಳಿ ಬದ್ಧತೆ, ಶಿಕ್ಷಕರ ಬೋಧನೆಯಿಂದಾಗಿ ಶಾಲೆಗೆ ಉತ್ತಮ ಹೆಸರು ಬಂದಿರುವುದು ಸಂತಸದ ಸಂಗತಿ ಎಂದು ಸಾಹಿತಿ, ನಟ ಮಹದೇವ್ ಚಿಕ್ಕಹೆಜ್ಜಾಜಿ ಹೇಳಿದರು.
ನಗರದ ಪ್ರತಿಷ್ಠಿತ ಗುರುಕುಲ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯ ಸಂಭ್ರಮ 2023-24 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಕಾಲಘಟ್ಟದಲ್ಲಿ ಶಾಲೆ ನಡೆಸುವುದು ತುಂಬಾ ಕಷ್ಟದ ಕೆಲಸ. ಒಂದು ಸಂಸ್ಥೆ ಕಟ್ಟಲು ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಎಂಬ ನಾಲ್ಕು ಪಿಲ್ಲರ್ ಗಳು ಅತ್ಯಗತ್ಯ ಎಂದರು.
ಮಕ್ಕಳಿಗೆ ಉತ್ತಮ ವಿದ್ಯೆ ನೀಡುವ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹೆಚ್ಚು ತರಬೇತಿ ನೀಡುತ್ತಿದೆ. ಮುಂಬರುವ ದಿನಗಳಲ್ಲಿ ಶಾಲೆಗೆ ಉತ್ತಮ ಭವಿಷ್ಯವಿದೆ ಎಂದು ಹೇಳಿದರು.
ಶಾಲೆಯ ಅಧ್ಯಕ್ಷ ಎಸ್.ಆರ್.ರಮೇಶ್ ಮಾತನಾಡಿ, ಆಡಳಿತ ಮಂಡಳಿ ಮೇಲೆ ಪೋಷಕರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇವೆ. ಮಕ್ಕಳಿಗೆ ಅತ್ಯುನ್ನತ ವಿದ್ಯಾಭ್ಯಾಸದೊಂದಿಗೆ ಜಿವನಶೈಲಿಯನ್ನೇ ಬದಲಿಸಬೇಕೆಂದು ಪಣ ತೊಟ್ಟಿದ್ದೇವೆ. ತಾಲೂಕಿನಲ್ಲೇ ಗುರುಕುಲ ಶಾಲೆಯನ್ನು ನಂ.1 ಶಾಲೆಯನ್ನಾಗಿ ಮಾಡಿ ತೋರಿಸುತ್ತೇವೆ ಎಂದು ಹೇಳಿದರು.
ರಾಜ್ಯವಲ್ಲದೇ ಬೇರೆ ರಾಜ್ಯಗಳ ನುರಿತ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ಕೊಡಿಸುವ ಜೊತೆಗೆ ಮಕ್ಕಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಿದ ಪರಿಣಾಮ ಶಾಲಾ ವಿದ್ಯಾರ್ಥಿಗಳ ಸಂಖ್ಯೆ 1000ಕ್ಕೂ ಅಧಿಕವಾಗಿದೆ ಎಂದರು.
ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವಾರ್ಷಿಕೋತ್ಸವದ ಸಂಭ್ರಮವನ್ನು ಇಮ್ಮಡಿಗೊಳಿಸಿತು. ಕನ್ನಡದ ಜಾನಪದ ಸೊಗಡು, ಕರಾವಳಿ ಭೂತಾರಾಧನೆಯ ಕಂಪು, ಅಮ್ಮನ ಮಹತ್ವ ಸಾರುವ ಹಾಡುಗಳಿಗೆ ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು.
ಎಸ್ಸೆಸ್ಸೆಲ್ಸಿ ಬಾಲಕ-ಬಾಲಕಿಯರ ಪೈಪೋಟಿಯ ನೃತ್ಯಕ್ಕೆ ಪ್ರೇಕ್ಷಕರು ಚಪ್ಪಾಳೆ, ಶಿಳ್ಳೆಯ ಮೂಲಕ ಪ್ರೋತ್ಸಾಹ ನೀಡಿದರು. ಆ ಬಳಿಕ ಆಡಳಿತ ಮಂಡಳಿ ನಿರ್ದೇಶಕರು, ಶಿಕ್ಷಕರೊಂದಿಗೆ ಶಾಲೆಯ ನೆನಪು ಸಾರುವ ಚಾಮಯ್ಯ ಮೇಸ್ಟ್ರು ಹಾಡಿಗೆ ವಿದ್ಯಾರ್ಥಿಗಳು ಹೆಜ್ಜೆಗೂಡಿಸಿ, ಆಡಳಿತ ಮಂಡಳಿಗೆ ಸ್ಮರಣಿಕೆ ನೀಡಿದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…