ಗುರುಕುಲ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯಲ್ಲಿ ‘ಸಂಭ್ರಮ’‌ ಕಾರ್ಯಕ್ರಮ: ಎಲ್ಲರ ಕಣ್ಮನ ಸೆಳೆದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದ ಸಂಭ್ರಮ

2019 ರಲ್ಲಿ ಪ್ರಾರಂಭವಾದ ಗುರುಕುಲ ಶಾಲೆ ಆಡಳಿತ ಮಂಡಳಿ ಬದ್ಧತೆ, ಶಿಕ್ಷಕರ ಬೋಧನೆಯಿಂದಾಗಿ ಶಾಲೆಗೆ ಉತ್ತಮ ಹೆಸರು ಬಂದಿರುವುದು ಸಂತಸದ ಸಂಗತಿ ಎಂದು ಸಾಹಿತಿ, ನಟ ಮಹದೇವ್ ಚಿಕ್ಕಹೆಜ್ಜಾಜಿ ಹೇಳಿದರು.

ನಗರದ ಪ್ರತಿಷ್ಠಿತ ಗುರುಕುಲ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯ ಸಂಭ್ರಮ 2023-24 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಕಾಲಘಟ್ಟದಲ್ಲಿ ಶಾಲೆ ನಡೆಸುವುದು ತುಂಬಾ ಕಷ್ಟದ ಕೆಲಸ. ಒಂದು ಸಂಸ್ಥೆ ಕಟ್ಟಲು ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಎಂಬ ನಾಲ್ಕು ಪಿಲ್ಲರ್ ಗಳು ಅತ್ಯಗತ್ಯ ಎಂದರು.

ಪ್ರಪಂಚದಲ್ಲಿ ಜ್ಞಾನವೇ ಶ್ರೇಷ್ಠ, ಜ್ಞಾನವಂತರು ಎಲ್ಲಿ‌ ಬೇಕಾದರೂ‌ ಬದುಕಬಹುದು. ಜಗತ್ತಿನ ಸರ್ವಶ್ರೇಷ್ಠ ಎಂಜಿನಿಯರ್ ಆಗಿದ್ದ ಸರ್.ಎಂ.ವಿಶ್ವೇಶ್ವರಯ್ಯ ಅವರು ಜನಿಸಿದ ಈ ಕಾಲಮಾನ ಜ್ಞಾನವಂತರ ಯುಗ ಎನಿಸಿದೆ ಎಂದು ಸಾಹಿತಿ, ನಟ ಮಹದೇವ್ ಚಿಕ್ಕಹೆಜ್ಜಾಜಿ ಅಭಿಪ್ರಾಯಪಟ್ಟರು.

ಮಕ್ಕಳಿಗೆ ಉತ್ತಮ ವಿದ್ಯೆ ನೀಡುವ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹೆಚ್ಚು ತರಬೇತಿ ನೀಡುತ್ತಿದೆ. ಮುಂಬರುವ ದಿನಗಳಲ್ಲಿ ಶಾಲೆಗೆ ಉತ್ತಮ ಭವಿಷ್ಯವಿದೆ ಎಂದು ಹೇಳಿದರು.

ಮಕ್ಕಳ‌ ಎದುರು ಪೋಷಕರು ಜಗಳ ಆಡವಾಡಬಾರದು. ಜಗಳದ ವೇಳೆ ಬಳಸುವ ಕೆಟ್ಟ ಪದಗಳನ್ನು ಕೇಳುವ ಮಕ್ಕಳು ಶಾಲೆಯಲ್ಲಿ ಪ್ರಯೋಗಿಸುವ ಸಾಧ್ಯತೆ ಇರುತ್ತದೆ. ಸಾಂಸಾರಿಕ ಜೀವನದಲ್ಲಿ ಕಷ್ಟ‌ ಸುಖ ಎಲ್ಲರಿಗೂ ಇರುತ್ತದೆ. ಹಾಗಾಗಿ ಜಗಳ ಆಡುವಾಗ ಮಕ್ಕಳಿರುವುದನ್ನು ಮರೆಯಬಾರದು. ಇನ್ನು ಶಾಲೆಯಲ್ಲಿ ಪೋಷಕರ ಸಭೆಗೆ ತಪ್ಪದೇ ಹಾಜರಾಗಿ ಮಗುವಿನ ಶೈಕ್ಷಣಿಕ ಪ್ರಗತಿ ವಿಚಾರಿಸಬೇಕು. ಮನೆಯ ಒಳಗೆ, ಹೊರಗೆ ಮಕಳ ಚಲನವಲನದ ಮೇಲೆ ಪೋಷಕರು ಸದಾ ಕಣ್ಣಿಡಬೇಕು ಎಂದು ಸಲಹೆ ನೀಡಿದರು.

ಶಾಲೆಯ ಅಧ್ಯಕ್ಷ ಎಸ್.ಆರ್.ರಮೇಶ್ ಮಾತನಾಡಿ, ಆಡಳಿತ ಮಂಡಳಿ ಮೇಲೆ‌ ಪೋಷಕರು ಇಟ್ಟಿರುವ ನಂಬಿಕೆ‌ಯನ್ನು ಉಳಿಸಿಕೊಳ್ಳುತ್ತೇವೆ. ಮಕ್ಕಳಿಗೆ ಅತ್ಯುನ್ನತ ವಿದ್ಯಾಭ್ಯಾಸದೊಂದಿಗೆ ಜಿವನಶೈಲಿಯನ್ನೇ ಬದಲಿಸಬೇಕೆಂದು ಪಣ ತೊಟ್ಟಿದ್ದೇವೆ. ತಾಲೂಕಿನಲ್ಲೇ ಗುರುಕುಲ ಶಾಲೆಯನ್ನು ನಂ.1 ಶಾಲೆಯನ್ನಾಗಿ ಮಾಡಿ ತೋರಿಸುತ್ತೇವೆ ಎಂದು ಹೇಳಿದರು.

ಶಾಲೆಯ ಕಾರ್ಯದರ್ಶಿ ಎ.ಎನ್.ಲೋಕೇಶ್ ಕುಮಾರ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕೋವಿಡ್ ಸಂಕಷ್ಟ ಕಾಲದಲ್ಲಿ ಶ್ರೀ ರಾಜಘಟ್ಟ ಆಂಜನೇಯ ಸ್ವಾಮಿ‌ ದೇವಾಲಯದ ಬಳಿ‌ ಸಮಾನ‌ ಮನಸ್ಕರು ಸೇರಿ ಶಾಲೆ ಕಟ್ಟುವ ನಿರ್ಧಾರ‌ ಮಾಡಲಾಯಿತು.

ರಾಜ್ಯವಲ್ಲದೇ ಬೇರೆ ರಾಜ್ಯಗಳ ನುರಿತ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ಕೊಡಿಸುವ ಜೊತೆಗೆ ಮಕ್ಕಳಿಗೆ ಅಗತ್ಯ ಮೂಲ‌ಸೌಕರ್ಯ ಕಲ್ಪಿಸಿದ ಪರಿಣಾಮ ಶಾಲಾ ವಿದ್ಯಾರ್ಥಿಗಳ‌ ಸಂಖ್ಯೆ 1000ಕ್ಕೂ ಅಧಿಕವಾಗಿದೆ ಎಂದರು.

ಪ್ರಾಂಶುಪಾಲ ಕೆ.ಎಸ್.ಲೋಕೇಶ್ ವಾರ್ಷಿಕ ವರದಿ ಮಂಡನೆ ಮಾಡಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ‌ ನಿರ್ದೇಶಕರಾದ ಗಂಗಮಾರೇಗೌಡ, ಋತಿಕ್ ನರೇಂದ್ರ, ಕೆ.ಜಿ. ಶ್ರೀನಿವಾಸಮೂರ್ತಿ, ಉಪಪ್ರಾಂಶುಪಾಲ ಶರಣ್ ಬಿ.ವೈ ಇದ್ದರು.

ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವಾರ್ಷಿಕೋತ್ಸವದ ಸಂಭ್ರಮವನ್ನು ಇಮ್ಮಡಿಗೊಳಿಸಿತು. ಕನ್ನಡದ ಜಾನಪದ ಸೊಗಡು, ಕರಾವಳಿ ಭೂತಾರಾಧನೆಯ ಕಂಪು, ಅಮ್ಮನ ಮಹತ್ವ ಸಾರುವ ಹಾಡುಗಳಿಗೆ ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು.

ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ವೇದಿಕೆ ಮೇಲೆ ನೃತ್ಯದ ಜೊತೆಗೆ ತಮ್ಮ ಪ್ರತಿಭೆ ಪ್ರದರ್ಶಿಸಿ ಪೋಷಕರ‌ ಮೆಚ್ಚುಗೆಗೆ ಪಾತ್ರರಾದರು.

ಎಸ್ಸೆಸ್ಸೆಲ್ಸಿ ಬಾಲಕ-ಬಾಲಕಿಯರ ಪೈಪೋಟಿಯ ನೃತ್ಯಕ್ಕೆ ಪ್ರೇಕ್ಷಕರು ಚಪ್ಪಾಳೆ, ಶಿಳ್ಳೆಯ ಮೂಲಕ ಪ್ರೋತ್ಸಾಹ ನೀಡಿದರು. ಆ ಬಳಿಕ ಆಡಳಿತ ಮಂಡಳಿ ನಿರ್ದೇಶಕರು, ಶಿಕ್ಷಕರೊಂದಿಗೆ ಶಾಲೆಯ ನೆನಪು ಸಾರುವ ಚಾಮಯ್ಯ ಮೇಸ್ಟ್ರು ಹಾಡಿಗೆ ವಿದ್ಯಾರ್ಥಿಗಳು ಹೆಜ್ಜೆಗೂಡಿಸಿ, ಆಡಳಿತ ಮಂಡಳಿಗೆ ಸ್ಮರಣಿಕೆ ನೀಡಿದರು.

Ramesh Babu

Journalist

Recent Posts

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

39 minutes ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

2 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

4 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

5 hours ago

ಅಧಿಕಾರಕ್ಕೇರುವ ಮುನ್ನವೇ ಟ್ರಬಲ್ ಶೂಟರ್ ಚಾಣಾಕ್ಷ ನಡೆ: ದೇವೇಗೌಡ-ಯಡಿಯೂರಪ್ಪ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…

6 hours ago

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

8 hours ago