2019 ರಲ್ಲಿ ಪ್ರಾರಂಭವಾದ ಗುರುಕುಲ ಶಾಲೆ ಆಡಳಿತ ಮಂಡಳಿ ಬದ್ಧತೆ, ಶಿಕ್ಷಕರ ಬೋಧನೆಯಿಂದಾಗಿ ಶಾಲೆಗೆ ಉತ್ತಮ ಹೆಸರು ಬಂದಿರುವುದು ಸಂತಸದ ಸಂಗತಿ ಎಂದು ಸಾಹಿತಿ, ನಟ ಮಹದೇವ್ ಚಿಕ್ಕಹೆಜ್ಜಾಜಿ ಹೇಳಿದರು.
ನಗರದ ಪ್ರತಿಷ್ಠಿತ ಗುರುಕುಲ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯ ಸಂಭ್ರಮ 2023-24 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಕಾಲಘಟ್ಟದಲ್ಲಿ ಶಾಲೆ ನಡೆಸುವುದು ತುಂಬಾ ಕಷ್ಟದ ಕೆಲಸ. ಒಂದು ಸಂಸ್ಥೆ ಕಟ್ಟಲು ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಎಂಬ ನಾಲ್ಕು ಪಿಲ್ಲರ್ ಗಳು ಅತ್ಯಗತ್ಯ ಎಂದರು.
ಮಕ್ಕಳಿಗೆ ಉತ್ತಮ ವಿದ್ಯೆ ನೀಡುವ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹೆಚ್ಚು ತರಬೇತಿ ನೀಡುತ್ತಿದೆ. ಮುಂಬರುವ ದಿನಗಳಲ್ಲಿ ಶಾಲೆಗೆ ಉತ್ತಮ ಭವಿಷ್ಯವಿದೆ ಎಂದು ಹೇಳಿದರು.
ಶಾಲೆಯ ಅಧ್ಯಕ್ಷ ಎಸ್.ಆರ್.ರಮೇಶ್ ಮಾತನಾಡಿ, ಆಡಳಿತ ಮಂಡಳಿ ಮೇಲೆ ಪೋಷಕರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇವೆ. ಮಕ್ಕಳಿಗೆ ಅತ್ಯುನ್ನತ ವಿದ್ಯಾಭ್ಯಾಸದೊಂದಿಗೆ ಜಿವನಶೈಲಿಯನ್ನೇ ಬದಲಿಸಬೇಕೆಂದು ಪಣ ತೊಟ್ಟಿದ್ದೇವೆ. ತಾಲೂಕಿನಲ್ಲೇ ಗುರುಕುಲ ಶಾಲೆಯನ್ನು ನಂ.1 ಶಾಲೆಯನ್ನಾಗಿ ಮಾಡಿ ತೋರಿಸುತ್ತೇವೆ ಎಂದು ಹೇಳಿದರು.
ರಾಜ್ಯವಲ್ಲದೇ ಬೇರೆ ರಾಜ್ಯಗಳ ನುರಿತ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ಕೊಡಿಸುವ ಜೊತೆಗೆ ಮಕ್ಕಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಿದ ಪರಿಣಾಮ ಶಾಲಾ ವಿದ್ಯಾರ್ಥಿಗಳ ಸಂಖ್ಯೆ 1000ಕ್ಕೂ ಅಧಿಕವಾಗಿದೆ ಎಂದರು.
ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವಾರ್ಷಿಕೋತ್ಸವದ ಸಂಭ್ರಮವನ್ನು ಇಮ್ಮಡಿಗೊಳಿಸಿತು. ಕನ್ನಡದ ಜಾನಪದ ಸೊಗಡು, ಕರಾವಳಿ ಭೂತಾರಾಧನೆಯ ಕಂಪು, ಅಮ್ಮನ ಮಹತ್ವ ಸಾರುವ ಹಾಡುಗಳಿಗೆ ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು.
ಎಸ್ಸೆಸ್ಸೆಲ್ಸಿ ಬಾಲಕ-ಬಾಲಕಿಯರ ಪೈಪೋಟಿಯ ನೃತ್ಯಕ್ಕೆ ಪ್ರೇಕ್ಷಕರು ಚಪ್ಪಾಳೆ, ಶಿಳ್ಳೆಯ ಮೂಲಕ ಪ್ರೋತ್ಸಾಹ ನೀಡಿದರು. ಆ ಬಳಿಕ ಆಡಳಿತ ಮಂಡಳಿ ನಿರ್ದೇಶಕರು, ಶಿಕ್ಷಕರೊಂದಿಗೆ ಶಾಲೆಯ ನೆನಪು ಸಾರುವ ಚಾಮಯ್ಯ ಮೇಸ್ಟ್ರು ಹಾಡಿಗೆ ವಿದ್ಯಾರ್ಥಿಗಳು ಹೆಜ್ಜೆಗೂಡಿಸಿ, ಆಡಳಿತ ಮಂಡಳಿಗೆ ಸ್ಮರಣಿಕೆ ನೀಡಿದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…