2019 ರಲ್ಲಿ ಪ್ರಾರಂಭವಾದ ಗುರುಕುಲ ಶಾಲೆ ಆಡಳಿತ ಮಂಡಳಿ ಬದ್ಧತೆ, ಶಿಕ್ಷಕರ ಬೋಧನೆಯಿಂದಾಗಿ ಶಾಲೆಗೆ ಉತ್ತಮ ಹೆಸರು ಬಂದಿರುವುದು ಸಂತಸದ ಸಂಗತಿ ಎಂದು ಸಾಹಿತಿ, ನಟ ಮಹದೇವ್ ಚಿಕ್ಕಹೆಜ್ಜಾಜಿ ಹೇಳಿದರು.
ನಗರದ ಪ್ರತಿಷ್ಠಿತ ಗುರುಕುಲ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯ ಸಂಭ್ರಮ 2023-24 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಕಾಲಘಟ್ಟದಲ್ಲಿ ಶಾಲೆ ನಡೆಸುವುದು ತುಂಬಾ ಕಷ್ಟದ ಕೆಲಸ. ಒಂದು ಸಂಸ್ಥೆ ಕಟ್ಟಲು ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಎಂಬ ನಾಲ್ಕು ಪಿಲ್ಲರ್ ಗಳು ಅತ್ಯಗತ್ಯ ಎಂದರು.
ಮಕ್ಕಳಿಗೆ ಉತ್ತಮ ವಿದ್ಯೆ ನೀಡುವ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹೆಚ್ಚು ತರಬೇತಿ ನೀಡುತ್ತಿದೆ. ಮುಂಬರುವ ದಿನಗಳಲ್ಲಿ ಶಾಲೆಗೆ ಉತ್ತಮ ಭವಿಷ್ಯವಿದೆ ಎಂದು ಹೇಳಿದರು.
ಶಾಲೆಯ ಅಧ್ಯಕ್ಷ ಎಸ್.ಆರ್.ರಮೇಶ್ ಮಾತನಾಡಿ, ಆಡಳಿತ ಮಂಡಳಿ ಮೇಲೆ ಪೋಷಕರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇವೆ. ಮಕ್ಕಳಿಗೆ ಅತ್ಯುನ್ನತ ವಿದ್ಯಾಭ್ಯಾಸದೊಂದಿಗೆ ಜಿವನಶೈಲಿಯನ್ನೇ ಬದಲಿಸಬೇಕೆಂದು ಪಣ ತೊಟ್ಟಿದ್ದೇವೆ. ತಾಲೂಕಿನಲ್ಲೇ ಗುರುಕುಲ ಶಾಲೆಯನ್ನು ನಂ.1 ಶಾಲೆಯನ್ನಾಗಿ ಮಾಡಿ ತೋರಿಸುತ್ತೇವೆ ಎಂದು ಹೇಳಿದರು.
ರಾಜ್ಯವಲ್ಲದೇ ಬೇರೆ ರಾಜ್ಯಗಳ ನುರಿತ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ಕೊಡಿಸುವ ಜೊತೆಗೆ ಮಕ್ಕಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಿದ ಪರಿಣಾಮ ಶಾಲಾ ವಿದ್ಯಾರ್ಥಿಗಳ ಸಂಖ್ಯೆ 1000ಕ್ಕೂ ಅಧಿಕವಾಗಿದೆ ಎಂದರು.
ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವಾರ್ಷಿಕೋತ್ಸವದ ಸಂಭ್ರಮವನ್ನು ಇಮ್ಮಡಿಗೊಳಿಸಿತು. ಕನ್ನಡದ ಜಾನಪದ ಸೊಗಡು, ಕರಾವಳಿ ಭೂತಾರಾಧನೆಯ ಕಂಪು, ಅಮ್ಮನ ಮಹತ್ವ ಸಾರುವ ಹಾಡುಗಳಿಗೆ ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು.
ಎಸ್ಸೆಸ್ಸೆಲ್ಸಿ ಬಾಲಕ-ಬಾಲಕಿಯರ ಪೈಪೋಟಿಯ ನೃತ್ಯಕ್ಕೆ ಪ್ರೇಕ್ಷಕರು ಚಪ್ಪಾಳೆ, ಶಿಳ್ಳೆಯ ಮೂಲಕ ಪ್ರೋತ್ಸಾಹ ನೀಡಿದರು. ಆ ಬಳಿಕ ಆಡಳಿತ ಮಂಡಳಿ ನಿರ್ದೇಶಕರು, ಶಿಕ್ಷಕರೊಂದಿಗೆ ಶಾಲೆಯ ನೆನಪು ಸಾರುವ ಚಾಮಯ್ಯ ಮೇಸ್ಟ್ರು ಹಾಡಿಗೆ ವಿದ್ಯಾರ್ಥಿಗಳು ಹೆಜ್ಜೆಗೂಡಿಸಿ, ಆಡಳಿತ ಮಂಡಳಿಗೆ ಸ್ಮರಣಿಕೆ ನೀಡಿದರು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…