ಗುರುಕುಲ ಇಂಟರ್ ನ್ಯಾಷನಲ್ ಶಾಲೆಯ ವಾರ್ಷಿಕ ಕ್ರೀಡಾಕೂಟ: 595 ಅಂಕ ಪಡೆದ ಬ್ಲ್ಯೂ ಹೌಸ್ ಗೆ ಸಮಗ್ರ ಚಾಂಪಿಯನ್ ಪಟ್ಟ

ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಶುಕ್ರವಾರ ಮುಕ್ತಾಯವಾದ 2023-24ನೇ ಸಾಲಿನ ಗುರುಕುಲ ಇಂಟರ್ ನ್ಯಾಷನಲ್ ಶಾಲೆಯ ವಾರ್ಷಿಕ ಕ್ರೀಡಾಕೂಟದಲ್ಲಿ 1000 ವಿದ್ಯಾರ್ಥಿಗಳ ಪೈಕಿ 650 ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡರು.

ಕಿರಿಯ ಬಾಲಕರ ವಿಭಾಗದಲ್ಲಿ 7ನೇ ತರಗತಿಯ  ಎಸ್.ಆರ್.ಧೃವನ್(ಅಗ್ನಿ) ವೈಯಕ್ತಿಕ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಬಾಲಕಿಯರ ವಿಭಾಗದಲ್ಲಿ 7ನೇ ತರಗತಿಯ ಯುಕ್ತಾಶ್ರೀ (ಬ್ರಹ್ಮೋಸ್) ಚಾಂಪಿಯನ್ ಪ್ರಶಸ್ತಿ ಪಡೆದರು.

ಹಿರಿಯ ಬಾಲಕರ ವಿಭಾಗದಲ್ಲಿ 9ನೇ ತರಗತಿಯ ಎನ್.ಎಸ್.ದಿಶಾಂತ್( ಅಗ್ನಿ), ಬಾಲಕಿಯರ ವಿಭಾಗದಲ್ಲಿ 9ನೇ ತರಗತಿಯ ಕೀರ್ತನಾ ಜೆ.ಗೌಡ ಅವರು ಹೆಚ್ಚು ಪದಕಗಳನ್ನು ಪಡೆಯುವ ಮೂಲಕ ವೈಯಕ್ತಿಕ ಚಾಂಪಿಯನ್ ಆಗಿ ಸಂಭ್ರಮಿಸಿದರು.

ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ‌ಮನೋಭಾವ ತುಂಬುವ ಸಲುವಾಗಿ ಕೆಂಪು, ಹಳದಿ, ಹಸಿರು ಹಾಗೂ ನೀಲಿ ಬಣ್ಣದ ಸಮವಸ್ತ್ರಧಾರಿಗಳ  ತಂಡಗಳನ್ನು ರಚಿಸಲಾಗಿತ್ತು. ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಅತಿ ಹೆಚ್ಚು ಪದಕಗಳೊಂದಿಗೆ 595 ಅಂಕ ಪಡೆದ ಬ್ಲ್ಯೂ ಹೌಸ್ ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿತು. ಯೆಲ್ಲೂ ಹೌಸ್ 570 ಅಂಕಗಳೊಂದಿಗೆ ರನ್ನರ್ಸ್ ಅಪ್ ಗೆ ತೃಪ್ತಿಪಟ್ಟುಕೊಂಡಿತು. ಕ್ರಮವಾಗಿ 3 ಮತ್ತು 4ನೇ ಸ್ಥಾನವನ್ನು ಗ್ರೀನ್ ಹೌಸ್ ತಂಡ (505 ಅಂಕ), ರೆಡ್ ಹೌಸ್ ತಂಡ(500 ಅಂಕ) ಪಡೆದುಕೊಂಡಿತು.

ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಎಸ್.ಆರ್.ರಮೇಶ್, ಉಪಾಧ್ಯಕ್ಷ ಎಂ.ಎಚ್.ಗಂಗಮಾರೇಗೌಡ, ಪ್ರಧಾನ ಕಾರ್ಯದರ್ಶಿ ಎ.ಎನ್.ಲೋಕೇಶ್ ಕುಮಾರ್, ಜಂಟಿ ಕಾರ್ಯದರ್ಶಿ ಹೃತಿಕ್ ನರೇಂದ್ರ, ಖಜಾಂಚಿ ಕೆ.ಜಿ.ಶ್ರೀನಿವಾಸಮೂರ್ತಿ, ಪ್ರಾಂಶುಪಾಲ ಲೋಕೇಶ್, ಉಪ ಪ್ರಾಂಶುಪಾಲ ಶರಣ್ ಅವರು ವೇಳೆ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

ಕ್ರೀಡಾಕೂಟದ ಉದ್ಘಾಟನೆಯನ್ನು ಕೊಂಗಾಡಿಯಪ್ಪ ಪಿಯು ಕಾಲೇಜಿನ‌ ನಿವೃತ್ತ ಪ್ರಾಂಶುಪಾಲರಾದ ಮೇಜರ್ ಎಸ್.ಮಹಾಬಲೇಶ್ವರ್ ಅವರು ನೆರವೇರಿಸಿದರು. ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ, ಕ್ರೀಡಾ ಜ್ಯೋತಿ ಪ್ರಜ್ವಲನ, ಪುಟಾಣಿ ಮಕ್ಕಳ ಮ್ಯಾರಥಾನ್ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಕ್ರೀಡಾ ಮಹೋತ್ಸವಕ್ಕೆ ಮೆರಗು ತಂದವು.

ವಾರ್ಷಿಕ ಕ್ರೀಡಾಕೂಟದಲ್ಲಿ ಹೊರಾಂಗಣ ಕ್ರೀಡೆಗಳಾದ ಖೋ ಖೋ, ಕಬ್ಬಡಿ, ವಾಲಿಬಾಲ್, ಮ್ಯೂಸಿಕಲ್ ಚೇರ್, ಥ್ರೋಬಾಲ್, ರಿಲೇ, ಓಟದ ಸ್ಪರ್ಧೆ, ಲಾಂಗ್ ಜಂಪ್, ಹೈ ಜಂಪ್, ಗುಂಡು ಎಸೆತ, ತಟ್ಟೆ ಎಸೆತ ಸೇರಿದಂತೆ ಒಳಾಂಗಣ ಕ್ರೀಡೆಗಳಾದ ಶೆಟಲ್ ಬ್ಯಾಡ್ಮಿಂಟನ್  ನಡೆಯಿತು.

ಶಾಲೆಯ ವತಿಯಿಂದ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಒಟ್ಟು 1000 ಮಂದಿ ವಿದ್ಯಾರ್ಥಿಗಳು ಬಹಳ ಉತ್ಸುಕದಿಂದ ಭಾಗವಹಿಸಿದ್ದರು. ಅದರಲ್ಲಿ 650 ಮಂದಿ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಗೆದ್ದು ಪ್ರಶಸ್ತಿಗಳಿಗೆ ಭಾಜನರಾಗಿರುವುದು ಹೆಮ್ಮೆಯ ವಿಷಯ ಎಂದು ಶಾಲಾ ಪ್ರಾಂಶುಪಾಲ ಲೋಕೇಶ್ ಮಾಧ್ಯಮಗಳಿಗೆ ತಿಳಿಸಿದರು.

ಎರಡು ದಿನಗಳ ಕ್ರೀಡಾಕೂಟವು ಆರೋಗ್ಯಕರ ಹಾಗೂ ಯಶಸ್ವಿಯಾಗಿ ನಡೆಯಲು ಸಹಕರಿಸಿದ ಪೋಷಕರು, ಶಾಲಾ ಶಿಕ್ಷಕರು, ಶಾಲಾ ಆಡಳಿತ ಮಂಡಳಿ, ಸಿಬ್ಬಂದಿಗೆ ಧನ್ಯವಾದ ತಿಳಿಸಿದರು.

ಉಪ ಪ್ರಾಂಶುಪಾಲರಾದ ಶರಣ್ ಮಾತನಾಡಿ, ಶಾಲೆಯ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡಿ ಕೀರ್ತಿ ತಂದಿದ್ದಾರೆ. ಶಾಲೆಯ ಆಡಳಿತ ಮಂಡಳಿ ಪದಾಧಿಕಾರಿಗಳು ಕ್ರೀಡಾ ಹಿನ್ನೆಲೆ ಹೊಂದಿರುವುದರಿಂದ ಮಕ್ಕಳ ಸಾಧನೆಗೆ ಹೆಚ್ಚು ಸ್ಫೂರ್ತಿ ಸಿಗುತ್ತಿದೆ. ಕಳೆದ ವರ್ಷ‌ ಶಾಲೆಯ ವಿದ್ಯಾರ್ಥಿಗಳು ಬಿಹಾರದಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ‌ ಭಾಗವಹಿಸಿ ಶಾಲೆಯ ಕೀರ್ತಿಪತಾಕೆಯನ್ನು ರಾಷ್ಟ್ರಮಟ್ಟದಲ್ಲಿ ಹಾರಿಸಿದ್ದರು. ಈ ವರ್ಷ ಕೂಡ ಶಾಲೆಯ ವಿದ್ಯಾರ್ಥಿಗಳು ಯೋಗ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಅಸ್ಸಾಂನಲ್ಲಿ ನಡೆಯುವ ರಾಷ್ಟ್ರಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

5 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

9 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

16 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

17 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago