Categories: ಕೊಡಗು

ಗುರುಕುಲ ಮಾದರಿಯ ವಸತಿ ಶಾಲೆಗೆ ಆಕಸ್ಮಿಕ ಬೆಂಕಿ….ಓರ್ವ ವಿದ್ಯಾರ್ಥಿ ಬೆಂಕಿಗೆ ಆಹುತಿ

ಮಡಿಕೇರಿ ಸಮೀಪದ ಕಾಟಕೇರಿ ಹರಿ ಮಂದಿರ್ ವಸತಿ ಶಾಲೆಗೆ ಆಕಸ್ಮಿಕ ಬೆಂಕಿ ತಗುಲಿ ಶಾಲೆಯ ಮೇಲ್ಚಾವಣಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಈ ವಿದ್ಯಾರ್ಥಿ ನಿಲಯದಲ್ಲಿದ್ದ ಒಟ್ಟು 29 ವಿದ್ಯಾರ್ಥಿಗಳು ಸುರಕ್ಷಿತವಾಗಿ ಹೊರ ಬಂದಿದ್ದು, ಓರ್ವ ಎರಡನೇ ಕ್ಲಾಸಿನ ಪುಷ್ಪಕ್ ಎಂಬಾತನು ಬೆಂಕಿಗೆ ಆಹುತಿಯಾಗಿದ್ದಾನೆ ಎಂದು ಹೇಳಲಾಗಿದೆ.

ಕಾಟಕೇರಿ ಹರಿ ಮಂದಿರ್ ವಸತಿ ಶಾಲೆಯಲ್ಲಿ ನಡೆದ ಬೆಂಕಿ ಆಕಸ್ಮಿಕದಲ್ಲಿ ಜೀವ ಕಳೆದುಕೊಂಡ ಎರಡನೇ ತರಗತಿಯ ವಿದ್ಯಾರ್ಥಿ ಪುಷ್ಪಕ್, ಭಾಗಮಂಡಲ ಸಮೀಪದ  ಚೆಟ್ಟಿಮಾನಿ  ನಿವಾಸಿಯಾಗಿದ್ದಾನೆ.

ಈ ಮಗುವಿನ ತಾಯಿ ತ್ರಿವೇಣಿ, ಕುಂದಾಚೇರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರೆ. ಬಾಲಕನ ತಂದೆ ಕೃಷಿಕರಾಗಿದ್ದಾರೆ. ಮಗನ ಸಾವಿನ ಸುದ್ದಿ ಕೇಳಿ ಪೋಷಕರು ಆಘಾತಕ್ಕೆ ಒಳಗಾಗಿದ್ದಾರೆ. ಸಾವಿನ ಸುದ್ದಿ ಚೆಟ್ಟಿಮಾನಿ ಗ್ರಾಮಕ್ಕೆ ಹರಡುತ್ತಿದ್ದಂತೆ ಚಿಟ್ಟಿಮಾನಿ ಗ್ರಾಮದಲ್ಲಿ ನೀರಸ ಮೌನ ಆವರಿಸಿದೆ.

ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಪ್ರಯತ್ನಿಸಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕರಾದ ಚಂದ್ರಶೇಖರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಗುರುಕುಲ ಮಾದರಿಯಲ್ಲಿ ಉಚಿತವಾಗಿ ಈ ಆಶ್ರಮದಲ್ಲಿ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದ್ದು, ಇಲ್ಲಿನ ವಿದ್ಯಾರ್ಥಿಗಳಿಗೆ ಉತ್ತಮ ವ್ಯವಸ್ಥೆ ಕಲ್ಪಿಸಿದ್ದರಿಂದ ಈ ಆಶ್ರಮ ಶಾಲೆಗೆ ಒಳ್ಳೆಯ ಹೆಸರಿತ್ತು.

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

5 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

5 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

1 day ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

1 day ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

1 day ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

1 day ago