Categories: ಕೊಡಗು

ಗುರುಕುಲ ಮಾದರಿಯ ವಸತಿ ಶಾಲೆಗೆ ಆಕಸ್ಮಿಕ ಬೆಂಕಿ….ಓರ್ವ ವಿದ್ಯಾರ್ಥಿ ಬೆಂಕಿಗೆ ಆಹುತಿ

ಮಡಿಕೇರಿ ಸಮೀಪದ ಕಾಟಕೇರಿ ಹರಿ ಮಂದಿರ್ ವಸತಿ ಶಾಲೆಗೆ ಆಕಸ್ಮಿಕ ಬೆಂಕಿ ತಗುಲಿ ಶಾಲೆಯ ಮೇಲ್ಚಾವಣಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಈ ವಿದ್ಯಾರ್ಥಿ ನಿಲಯದಲ್ಲಿದ್ದ ಒಟ್ಟು 29 ವಿದ್ಯಾರ್ಥಿಗಳು ಸುರಕ್ಷಿತವಾಗಿ ಹೊರ ಬಂದಿದ್ದು, ಓರ್ವ ಎರಡನೇ ಕ್ಲಾಸಿನ ಪುಷ್ಪಕ್ ಎಂಬಾತನು ಬೆಂಕಿಗೆ ಆಹುತಿಯಾಗಿದ್ದಾನೆ ಎಂದು ಹೇಳಲಾಗಿದೆ.

ಕಾಟಕೇರಿ ಹರಿ ಮಂದಿರ್ ವಸತಿ ಶಾಲೆಯಲ್ಲಿ ನಡೆದ ಬೆಂಕಿ ಆಕಸ್ಮಿಕದಲ್ಲಿ ಜೀವ ಕಳೆದುಕೊಂಡ ಎರಡನೇ ತರಗತಿಯ ವಿದ್ಯಾರ್ಥಿ ಪುಷ್ಪಕ್, ಭಾಗಮಂಡಲ ಸಮೀಪದ  ಚೆಟ್ಟಿಮಾನಿ  ನಿವಾಸಿಯಾಗಿದ್ದಾನೆ.

ಈ ಮಗುವಿನ ತಾಯಿ ತ್ರಿವೇಣಿ, ಕುಂದಾಚೇರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರೆ. ಬಾಲಕನ ತಂದೆ ಕೃಷಿಕರಾಗಿದ್ದಾರೆ. ಮಗನ ಸಾವಿನ ಸುದ್ದಿ ಕೇಳಿ ಪೋಷಕರು ಆಘಾತಕ್ಕೆ ಒಳಗಾಗಿದ್ದಾರೆ. ಸಾವಿನ ಸುದ್ದಿ ಚೆಟ್ಟಿಮಾನಿ ಗ್ರಾಮಕ್ಕೆ ಹರಡುತ್ತಿದ್ದಂತೆ ಚಿಟ್ಟಿಮಾನಿ ಗ್ರಾಮದಲ್ಲಿ ನೀರಸ ಮೌನ ಆವರಿಸಿದೆ.

ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಪ್ರಯತ್ನಿಸಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕರಾದ ಚಂದ್ರಶೇಖರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಗುರುಕುಲ ಮಾದರಿಯಲ್ಲಿ ಉಚಿತವಾಗಿ ಈ ಆಶ್ರಮದಲ್ಲಿ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದ್ದು, ಇಲ್ಲಿನ ವಿದ್ಯಾರ್ಥಿಗಳಿಗೆ ಉತ್ತಮ ವ್ಯವಸ್ಥೆ ಕಲ್ಪಿಸಿದ್ದರಿಂದ ಈ ಆಶ್ರಮ ಶಾಲೆಗೆ ಒಳ್ಳೆಯ ಹೆಸರಿತ್ತು.

Ramesh Babu

Journalist

Recent Posts

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

32 minutes ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

17 hours ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

21 hours ago

ಶ್ರಾವಣದ ಹಬ್ಬಗಳಿಗೆ ಮುನ್ನವೇ ಹೂವಿನ ದರದ ಬಿಸಿ! ಇಳುವರಿ ಶೇ.30–40ರಷ್ಟು ಕುಸಿತ: ಹವಾಮಾನ ವೈಪರೀತ್ಯದ ಪರಿಣಾಮ: ಸಾಲುಸಾಲು ಹಬ್ಬಗಳಿಂದ ಬೇಡಿಕೆ ಹೆಚ್ಚಳ

  ಬೆಂಗಳೂರು: ಹಬ್ಬಗಳ ಸೀಸನ್‌ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…

21 hours ago

ಕೂಗೇನಹಳ್ಳಿ ಗೇಟ್ ಬಳಿ ಟೊಮೆಟೊ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ದೊಡ್ಡಬಳ್ಳಾಪುರ: ಟೊಮೆಟೊ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ದಾಬಸ್‌ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯ ಕೂಗೇನಹಳ್ಳಿ ಗೇಟ್ ಸಮೀಪ ಗುರುವಾರ ಬೆಳಗ್ಗೆ…

23 hours ago

ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವ ಹುಡುಕುತ್ತಾ ಹೊರಟಾಗ……

ಸ್ವಾತಂತ್ರ್ಯ........ ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವವನ್ನು ಹುಡುಕುತ್ತಾ ಹೊರಟಾಗ...... ಸ್ವಾತಂತ್ರ್ಯ ಎಂಬುದು... ಮಾನಸಿಕ ಸ್ಥಿತಿಯೇ, ದೈಹಿಕ ವ್ಯಾಪ್ತಿಯೇ, ಇವೆರಡರ…

2 days ago