Categories: ಕೊಡಗು

ಗುರುಕುಲ ಮಾದರಿಯ ವಸತಿ ಶಾಲೆಗೆ ಆಕಸ್ಮಿಕ ಬೆಂಕಿ….ಓರ್ವ ವಿದ್ಯಾರ್ಥಿ ಬೆಂಕಿಗೆ ಆಹುತಿ

ಮಡಿಕೇರಿ ಸಮೀಪದ ಕಾಟಕೇರಿ ಹರಿ ಮಂದಿರ್ ವಸತಿ ಶಾಲೆಗೆ ಆಕಸ್ಮಿಕ ಬೆಂಕಿ ತಗುಲಿ ಶಾಲೆಯ ಮೇಲ್ಚಾವಣಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಈ ವಿದ್ಯಾರ್ಥಿ ನಿಲಯದಲ್ಲಿದ್ದ ಒಟ್ಟು 29 ವಿದ್ಯಾರ್ಥಿಗಳು ಸುರಕ್ಷಿತವಾಗಿ ಹೊರ ಬಂದಿದ್ದು, ಓರ್ವ ಎರಡನೇ ಕ್ಲಾಸಿನ ಪುಷ್ಪಕ್ ಎಂಬಾತನು ಬೆಂಕಿಗೆ ಆಹುತಿಯಾಗಿದ್ದಾನೆ ಎಂದು ಹೇಳಲಾಗಿದೆ.

ಕಾಟಕೇರಿ ಹರಿ ಮಂದಿರ್ ವಸತಿ ಶಾಲೆಯಲ್ಲಿ ನಡೆದ ಬೆಂಕಿ ಆಕಸ್ಮಿಕದಲ್ಲಿ ಜೀವ ಕಳೆದುಕೊಂಡ ಎರಡನೇ ತರಗತಿಯ ವಿದ್ಯಾರ್ಥಿ ಪುಷ್ಪಕ್, ಭಾಗಮಂಡಲ ಸಮೀಪದ  ಚೆಟ್ಟಿಮಾನಿ  ನಿವಾಸಿಯಾಗಿದ್ದಾನೆ.

ಈ ಮಗುವಿನ ತಾಯಿ ತ್ರಿವೇಣಿ, ಕುಂದಾಚೇರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರೆ. ಬಾಲಕನ ತಂದೆ ಕೃಷಿಕರಾಗಿದ್ದಾರೆ. ಮಗನ ಸಾವಿನ ಸುದ್ದಿ ಕೇಳಿ ಪೋಷಕರು ಆಘಾತಕ್ಕೆ ಒಳಗಾಗಿದ್ದಾರೆ. ಸಾವಿನ ಸುದ್ದಿ ಚೆಟ್ಟಿಮಾನಿ ಗ್ರಾಮಕ್ಕೆ ಹರಡುತ್ತಿದ್ದಂತೆ ಚಿಟ್ಟಿಮಾನಿ ಗ್ರಾಮದಲ್ಲಿ ನೀರಸ ಮೌನ ಆವರಿಸಿದೆ.

ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಪ್ರಯತ್ನಿಸಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕರಾದ ಚಂದ್ರಶೇಖರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಗುರುಕುಲ ಮಾದರಿಯಲ್ಲಿ ಉಚಿತವಾಗಿ ಈ ಆಶ್ರಮದಲ್ಲಿ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದ್ದು, ಇಲ್ಲಿನ ವಿದ್ಯಾರ್ಥಿಗಳಿಗೆ ಉತ್ತಮ ವ್ಯವಸ್ಥೆ ಕಲ್ಪಿಸಿದ್ದರಿಂದ ಈ ಆಶ್ರಮ ಶಾಲೆಗೆ ಒಳ್ಳೆಯ ಹೆಸರಿತ್ತು.

Ramesh Babu

Journalist

Recent Posts

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

1 hour ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

3 hours ago

Facharbeit Schreiben_ Ein Leitfaden für Schüler und Studenten(2)

Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…

3 hours ago

Ideal Online Slot Machine Online Casinos: A Comprehensive Guide

Welcome to our thorough overview on the very best online slots online casinos. If you're…

8 hours ago

ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿರ್ಧಾರ- ಸಿಎಂ ಸಿದ್ದರಾಮಯ್ಯ

ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಎಡ, ಬಲ…

9 hours ago

How To Choose The Best Real Money Casino Sites And Utilize Them

There are many benefits to playing at real money casino sites. Whether you are looking…

17 hours ago