Categories: ಕೊಡಗು

ಗುರುಕುಲ ಮಾದರಿಯ ವಸತಿ ಶಾಲೆಗೆ ಆಕಸ್ಮಿಕ ಬೆಂಕಿ….ಓರ್ವ ವಿದ್ಯಾರ್ಥಿ ಬೆಂಕಿಗೆ ಆಹುತಿ

ಮಡಿಕೇರಿ ಸಮೀಪದ ಕಾಟಕೇರಿ ಹರಿ ಮಂದಿರ್ ವಸತಿ ಶಾಲೆಗೆ ಆಕಸ್ಮಿಕ ಬೆಂಕಿ ತಗುಲಿ ಶಾಲೆಯ ಮೇಲ್ಚಾವಣಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಈ ವಿದ್ಯಾರ್ಥಿ ನಿಲಯದಲ್ಲಿದ್ದ ಒಟ್ಟು 29 ವಿದ್ಯಾರ್ಥಿಗಳು ಸುರಕ್ಷಿತವಾಗಿ ಹೊರ ಬಂದಿದ್ದು, ಓರ್ವ ಎರಡನೇ ಕ್ಲಾಸಿನ ಪುಷ್ಪಕ್ ಎಂಬಾತನು ಬೆಂಕಿಗೆ ಆಹುತಿಯಾಗಿದ್ದಾನೆ ಎಂದು ಹೇಳಲಾಗಿದೆ.

ಕಾಟಕೇರಿ ಹರಿ ಮಂದಿರ್ ವಸತಿ ಶಾಲೆಯಲ್ಲಿ ನಡೆದ ಬೆಂಕಿ ಆಕಸ್ಮಿಕದಲ್ಲಿ ಜೀವ ಕಳೆದುಕೊಂಡ ಎರಡನೇ ತರಗತಿಯ ವಿದ್ಯಾರ್ಥಿ ಪುಷ್ಪಕ್, ಭಾಗಮಂಡಲ ಸಮೀಪದ  ಚೆಟ್ಟಿಮಾನಿ  ನಿವಾಸಿಯಾಗಿದ್ದಾನೆ.

ಈ ಮಗುವಿನ ತಾಯಿ ತ್ರಿವೇಣಿ, ಕುಂದಾಚೇರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರೆ. ಬಾಲಕನ ತಂದೆ ಕೃಷಿಕರಾಗಿದ್ದಾರೆ. ಮಗನ ಸಾವಿನ ಸುದ್ದಿ ಕೇಳಿ ಪೋಷಕರು ಆಘಾತಕ್ಕೆ ಒಳಗಾಗಿದ್ದಾರೆ. ಸಾವಿನ ಸುದ್ದಿ ಚೆಟ್ಟಿಮಾನಿ ಗ್ರಾಮಕ್ಕೆ ಹರಡುತ್ತಿದ್ದಂತೆ ಚಿಟ್ಟಿಮಾನಿ ಗ್ರಾಮದಲ್ಲಿ ನೀರಸ ಮೌನ ಆವರಿಸಿದೆ.

ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಪ್ರಯತ್ನಿಸಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕರಾದ ಚಂದ್ರಶೇಖರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಗುರುಕುಲ ಮಾದರಿಯಲ್ಲಿ ಉಚಿತವಾಗಿ ಈ ಆಶ್ರಮದಲ್ಲಿ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದ್ದು, ಇಲ್ಲಿನ ವಿದ್ಯಾರ್ಥಿಗಳಿಗೆ ಉತ್ತಮ ವ್ಯವಸ್ಥೆ ಕಲ್ಪಿಸಿದ್ದರಿಂದ ಈ ಆಶ್ರಮ ಶಾಲೆಗೆ ಒಳ್ಳೆಯ ಹೆಸರಿತ್ತು.

Ramesh Babu

Journalist

Recent Posts

ರೈತರು ಒಂದು ವರ್ಷದಲ್ಲಿ 5 ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ- ಪಿಡಿಒ ರಮೇಶ್

ಚಿಕ್ಕನಾಯಕನಹಳ್ಳಿ: ರೈತರು ಒಂದು ವರ್ಷದಲ್ಲಿ 5 ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ,  ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ…

1 hour ago

ಹಣದ ಹರಿವು

ಹೊರಹೋಗುವ ಸುಲಭ ದಾರಿಗಳು, ಒಳಬರುವ ಕಠಿಣ ಹಾದಿಗಳು....... ಖರ್ಚು ಮಾಡುವ ಸುಲಭ ಮಾರ್ಗಗಳು, ಸಂಪಾದನೆ ಮಾಡಲು ಕಠಿಣ ಹಾದಿಗಳು...... ಆಧುನಿಕತೆ…

2 hours ago

ಸೆ.6ರಂದು ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 220/66/11 ಕೆ.ವಿ. ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ದೊಡ್ಡಬಳ್ಳಾಪುರ…

20 hours ago

ದೌರ್ಬಲ್ಯ – ಶೋಷಣೆ – ಸ್ವಾಭಿಮಾನ……

ಈ ಸಮಾಜ ಯಾವಾಗಲೂ ಬಹುತೇಕ ದುರ್ಬಲರ ಮೇಲೆ ಸವಾರಿ ಮಾಡುತ್ತದೆ. ಅದರಲ್ಲೂ ಈ ಹಣ ಕೇಂದ್ರೀಕೃತ ಆಧುನಿಕ ಸಮಾಜದಲ್ಲಿ ದುರ್ಬಲರೇ…

1 day ago

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

3 days ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

3 days ago