ಗುರುತ್ವ ಅಕಾಡೆಮಿ: ಸೈನಿಕ್‌ ಮತ್ತು ಜವಾಹರ ನವೋದಯ ವಿದ್ಯಾಸಂಸ್ಥೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ದೊಡ್ಡಬಳ್ಳಾಪುರ ನಗರದ ಗಾಂಧಿ‌ ವೃತ್ತದ ಬಳಿ ಇರುವ ಕರ್ನಾಟಕ ಬ್ಯಾಂಕ್ ಸಮೀಪದ ಗುರುತ್ವ ಅಕಾಡೆಮಿಯಲ್ಲಿ ತರಬೇತಿ ಪಡೆದು ಸೈನಿಕ್‌ ಮತ್ತು ಜವಾಹರ ನವೋದಯ ವಿದ್ಯಾಸಂಸ್ಥೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಇಬ್ಬರು ನವೋದಯ ವಿದ್ಯಾಸಂಸ್ಥೆಗೆ ಆಯ್ಕೆಯಾದರೆ, ಇನ್ನಿಬ್ಬರು ಸೈನಿಕ್ ಶಾಲೆಗೆ ಆಯ್ಕೆಯಾಗಿದ್ದಾರೆ….

ನವೋದಯ ವಿದ್ಯಾಸಂಸ್ಥೆಗೆ ಆಯ್ಕೆಯಾದ ವಿದ್ಯಾರ್ಥಿಗಳು

* ಅನನ್ಯ ಎಚ್.ಎಸ್

* ಹರ್ಷಿತ್.ವಿ

ಸೈನಿಕ್ ಶಾಲೆಗೆ ಆಯ್ಕೆಯಾದ ವಿದ್ಯಾರ್ಥಿಗಳು

* ಹರಿಪ್ರಿಯ

* ತೇಜಸ್ ರೆಡ್ಡಿ ಪಿ.ಎನ್

ಸೈನಿಕ್‌ ಮತ್ತು ಜವಾಹರ ನವೋದಯ ವಿದ್ಯಾಸಂಸ್ಥೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿದ ಶ್ರೀನಿವಾಸ್ ಮಾತನಾಡಿ, ಗುರುತ್ವ ಅಕಾಡೆಮಿ ಪ್ರಾರಂಭವಾಗಿ ಎರಡು ವರ್ಷವಾಗಿದೆ. ಇಲ್ಲಿಯವರೆಗೆ ಸುಮಾರು 150 ಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತರಬೇತಿ ಪಡೆದಿದ್ದಾರೆ. ಕಳೆದ ವರ್ಷ ಪ್ರತಿಷ್ಟಿತ ಶಾಲೆಗಳಿಗೆ ಇಬ್ಬರು ಮಕ್ಕಳು ಆಯ್ಕೆಯಾಗಿದ್ದರು. ಈ ವರ್ಷ ನಾಲ್ವರು ವಿದ್ಯಾರ್ಥಿಗಳು ಸೈನಿಕ್‌ ಮತ್ತು ಜವಾಹರ ನವೋದಯ ವಿದ್ಯಾಸಂಸ್ಥೆಗಳಿಗೆ ಆಯ್ಕೆಯಾಗಿದ್ದಾರೆ ಎಂದರು.

ಗುರುತ್ವ ಅಕಾಡೆಮಿಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಮಕ್ಕಳಿಗೆ ಅರ್ಥವಾಗುವ ರೀತಿ, ಮಕ್ಕಳ ಬೌದ್ಧಿಕ ಗುಣಮಟ್ಟಕ್ಕೆ ಅನುಗುಣವಾಗಿ ತರಬೇತಿ ನೀಡಲಾಗುತ್ತದೆ. ಶಿಕ್ಷಣ ಅನ್ನೋದು ಮಕ್ಕಳಿಗೆ ಹೊರೆ ಆಗಬಾರದು,‌‌ ಮಕ್ಕಳು ಶಿಕ್ಷಣವನ್ನು ಇಷ್ಟಪಟ್ಟು ಪಡೆಯಬೇಕು. ಆ ನಿಟ್ಟಿನಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ಕಲಿಸಬೇಕು ಎಂದರು.

ನಂತರ ನವೋದಯ ವಿದ್ಯಾಸಂಸ್ಥೆಗೆ ಆಯ್ಕೆಯಾದ ಎಚ್.ಎಸ್ ಅನನ್ಯ ಮಾತನಾಡಿ, ಗುರುತ್ವ ಅಕಾಡೆಮಿಯಲ್ಲಿ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಉತ್ತಮ ತರಬೇತಿ ನೀಡಲಾಗುತ್ತಿದೆ. ಇಲ್ಲಿ ನಾನು ತರಬೇತಿ ಪಡೆದಿದ್ದರಿಂದ ನವೋದಯ ಶಾಲೆಗೆ ಆಯ್ಕೆಯಾಗಿದ್ದಾನೆ. ಇಂಗ್ಲಿಷ್, ಹಿಂದಿ ಭಾಷೆ ಕಲಿಸಿ ಭಾಷಾ ಜ್ಞಾನ ವೃದ್ಧಿ ಮಾಡುತ್ತಿದ್ದಾರೆ. ಈ ಅಕಾಡೆಮೆಯಲ್ಲಿ ನಾನು ಸಾಕಷ್ಟು ಕಲಿತಿದ್ದೇನೆ ಎಂದರು.

ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ರಾಜಘಟ್ಟ ರವಿ, ಪೋಷಕರು, ಗಣ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆ

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆಯಾಗಿದೆ. ಕ್ಯಾಂಟೀನ್ ನೌಕರ 100ಕ್ಕೂ ಹೆಚ್ಚು ಐಪಿಎಲ್ ಟಿಕೆಟ್‌ಗಳನ್ನು…

52 minutes ago

ಲವ್ ಜಿಹಾದ್ ಮತ್ತೊಮ್ಮೆ ಇಡೀ ದೇಶಾದ್ಯಂತ ಮಾಧ್ಯಮಗಳಲ್ಲಿ ಚರ್ಚೆ

ಲವ್ ಜಿಹಾದ್....... ಪ್ರೀತಿ - ಪ್ರೇಮದ ಧರ್ಮ ಯುದ್ಧ..... ಒಂದು ಆತ್ಮಾವಲೋಕನ,..... ನಿಜ ಪ್ರೀತಿಯನ್ನು ಅನುಮಾನದಿಂದ ನೋಡುವ ಅತ್ಯಂತ ಕೆಟ್ಟ,…

9 hours ago

ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ಜಾನುವಾರುಗಳ…

20 hours ago

LKG, UKG ತರಗತಿಗಳಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

2026-27ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ನಿದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು (ವಿಜಯಪುರ) ದಲ್ಲಿ ಕಾರ್ಯನಿರ್ವಹಿಸುತ್ತಿರುವ…

22 hours ago

ಏ.19ಕ್ಕೆ ಸಾಸಲು ಚಿನ್ನಮ್ಮ ಉತ್ಸವ-2026

ಸಾಸಲು ಚಿನ್ನಮ್ಮ ಉತ್ಸವ ಸಮಿತಿ ವತಿಯಿಂದ ಸಾಸಲು ಚಿನ್ನಮ್ಮ ಉತ್ಸವ-2026 ಕಾರ್ಯಕ್ರಮವನ್ನು ಏ.19ರ ಭಾನುವಾರದಂದು ತಾಲೂಕಿನ ಸಾಸಲು ಗ್ರಾಮದ ಡಾ.ಬಿ.ಆರ್…

1 day ago

ಇಸ್ರೇಲ್ ಮತ್ತು ಬೆಂಜಮಿನ್ ನೆತನ್ಯಾಹು……

ಶೌರ್ಯ, ಕ್ರೌರ್ಯ, ಆದರ್ಶ ಮತ್ತು ಎಚ್ಚರಿಕೆ....... ಇಸ್ರೇಲ್ ದೇಶದ ದ್ವೇಷದ ಬೆಂಕಿ ತನ್ನ ತಾನು ಸುಡುವುದಲ್ಲದೆ ಇತರರನ್ನೂ ಸುಡುತ್ತಿದೆ..... ಇಸ್ರೇಲ್…

1 day ago