ಗುರುತ್ವ ಅಕಾಡೆಮಿ: ಸೈನಿಕ್‌ ಮತ್ತು ಜವಾಹರ ನವೋದಯ ವಿದ್ಯಾಸಂಸ್ಥೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ದೊಡ್ಡಬಳ್ಳಾಪುರ ನಗರದ ಗಾಂಧಿ‌ ವೃತ್ತದ ಬಳಿ ಇರುವ ಕರ್ನಾಟಕ ಬ್ಯಾಂಕ್ ಸಮೀಪದ ಗುರುತ್ವ ಅಕಾಡೆಮಿಯಲ್ಲಿ ತರಬೇತಿ ಪಡೆದು ಸೈನಿಕ್‌ ಮತ್ತು ಜವಾಹರ ನವೋದಯ ವಿದ್ಯಾಸಂಸ್ಥೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಇಬ್ಬರು ನವೋದಯ ವಿದ್ಯಾಸಂಸ್ಥೆಗೆ ಆಯ್ಕೆಯಾದರೆ, ಇನ್ನಿಬ್ಬರು ಸೈನಿಕ್ ಶಾಲೆಗೆ ಆಯ್ಕೆಯಾಗಿದ್ದಾರೆ….

ನವೋದಯ ವಿದ್ಯಾಸಂಸ್ಥೆಗೆ ಆಯ್ಕೆಯಾದ ವಿದ್ಯಾರ್ಥಿಗಳು

* ಅನನ್ಯ ಎಚ್.ಎಸ್

* ಹರ್ಷಿತ್.ವಿ

ಸೈನಿಕ್ ಶಾಲೆಗೆ ಆಯ್ಕೆಯಾದ ವಿದ್ಯಾರ್ಥಿಗಳು

* ಹರಿಪ್ರಿಯ

* ತೇಜಸ್ ರೆಡ್ಡಿ ಪಿ.ಎನ್

ಸೈನಿಕ್‌ ಮತ್ತು ಜವಾಹರ ನವೋದಯ ವಿದ್ಯಾಸಂಸ್ಥೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿದ ಶ್ರೀನಿವಾಸ್ ಮಾತನಾಡಿ, ಗುರುತ್ವ ಅಕಾಡೆಮಿ ಪ್ರಾರಂಭವಾಗಿ ಎರಡು ವರ್ಷವಾಗಿದೆ. ಇಲ್ಲಿಯವರೆಗೆ ಸುಮಾರು 150 ಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತರಬೇತಿ ಪಡೆದಿದ್ದಾರೆ. ಕಳೆದ ವರ್ಷ ಪ್ರತಿಷ್ಟಿತ ಶಾಲೆಗಳಿಗೆ ಇಬ್ಬರು ಮಕ್ಕಳು ಆಯ್ಕೆಯಾಗಿದ್ದರು. ಈ ವರ್ಷ ನಾಲ್ವರು ವಿದ್ಯಾರ್ಥಿಗಳು ಸೈನಿಕ್‌ ಮತ್ತು ಜವಾಹರ ನವೋದಯ ವಿದ್ಯಾಸಂಸ್ಥೆಗಳಿಗೆ ಆಯ್ಕೆಯಾಗಿದ್ದಾರೆ ಎಂದರು.

ಗುರುತ್ವ ಅಕಾಡೆಮಿಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಮಕ್ಕಳಿಗೆ ಅರ್ಥವಾಗುವ ರೀತಿ, ಮಕ್ಕಳ ಬೌದ್ಧಿಕ ಗುಣಮಟ್ಟಕ್ಕೆ ಅನುಗುಣವಾಗಿ ತರಬೇತಿ ನೀಡಲಾಗುತ್ತದೆ. ಶಿಕ್ಷಣ ಅನ್ನೋದು ಮಕ್ಕಳಿಗೆ ಹೊರೆ ಆಗಬಾರದು,‌‌ ಮಕ್ಕಳು ಶಿಕ್ಷಣವನ್ನು ಇಷ್ಟಪಟ್ಟು ಪಡೆಯಬೇಕು. ಆ ನಿಟ್ಟಿನಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ಕಲಿಸಬೇಕು ಎಂದರು.

ನಂತರ ನವೋದಯ ವಿದ್ಯಾಸಂಸ್ಥೆಗೆ ಆಯ್ಕೆಯಾದ ಎಚ್.ಎಸ್ ಅನನ್ಯ ಮಾತನಾಡಿ, ಗುರುತ್ವ ಅಕಾಡೆಮಿಯಲ್ಲಿ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಉತ್ತಮ ತರಬೇತಿ ನೀಡಲಾಗುತ್ತಿದೆ. ಇಲ್ಲಿ ನಾನು ತರಬೇತಿ ಪಡೆದಿದ್ದರಿಂದ ನವೋದಯ ಶಾಲೆಗೆ ಆಯ್ಕೆಯಾಗಿದ್ದಾನೆ. ಇಂಗ್ಲಿಷ್, ಹಿಂದಿ ಭಾಷೆ ಕಲಿಸಿ ಭಾಷಾ ಜ್ಞಾನ ವೃದ್ಧಿ ಮಾಡುತ್ತಿದ್ದಾರೆ. ಈ ಅಕಾಡೆಮೆಯಲ್ಲಿ ನಾನು ಸಾಕಷ್ಟು ಕಲಿತಿದ್ದೇನೆ ಎಂದರು.

ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ರಾಜಘಟ್ಟ ರವಿ, ಪೋಷಕರು, ಗಣ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 hour ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 hour ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

4 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

5 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

9 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

13 hours ago