ಗುರುತ್ವ ಅಕಾಡೆಮಿ: ಸೈನಿಕ್‌ ಮತ್ತು ಜವಾಹರ ನವೋದಯ ವಿದ್ಯಾಸಂಸ್ಥೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ದೊಡ್ಡಬಳ್ಳಾಪುರ ನಗರದ ಗಾಂಧಿ‌ ವೃತ್ತದ ಬಳಿ ಇರುವ ಕರ್ನಾಟಕ ಬ್ಯಾಂಕ್ ಸಮೀಪದ ಗುರುತ್ವ ಅಕಾಡೆಮಿಯಲ್ಲಿ ತರಬೇತಿ ಪಡೆದು ಸೈನಿಕ್‌ ಮತ್ತು ಜವಾಹರ ನವೋದಯ ವಿದ್ಯಾಸಂಸ್ಥೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಇಬ್ಬರು ನವೋದಯ ವಿದ್ಯಾಸಂಸ್ಥೆಗೆ ಆಯ್ಕೆಯಾದರೆ, ಇನ್ನಿಬ್ಬರು ಸೈನಿಕ್ ಶಾಲೆಗೆ ಆಯ್ಕೆಯಾಗಿದ್ದಾರೆ….

ನವೋದಯ ವಿದ್ಯಾಸಂಸ್ಥೆಗೆ ಆಯ್ಕೆಯಾದ ವಿದ್ಯಾರ್ಥಿಗಳು

* ಅನನ್ಯ ಎಚ್.ಎಸ್

* ಹರ್ಷಿತ್.ವಿ

ಸೈನಿಕ್ ಶಾಲೆಗೆ ಆಯ್ಕೆಯಾದ ವಿದ್ಯಾರ್ಥಿಗಳು

* ಹರಿಪ್ರಿಯ

* ತೇಜಸ್ ರೆಡ್ಡಿ ಪಿ.ಎನ್

ಸೈನಿಕ್‌ ಮತ್ತು ಜವಾಹರ ನವೋದಯ ವಿದ್ಯಾಸಂಸ್ಥೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿದ ಶ್ರೀನಿವಾಸ್ ಮಾತನಾಡಿ, ಗುರುತ್ವ ಅಕಾಡೆಮಿ ಪ್ರಾರಂಭವಾಗಿ ಎರಡು ವರ್ಷವಾಗಿದೆ. ಇಲ್ಲಿಯವರೆಗೆ ಸುಮಾರು 150 ಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತರಬೇತಿ ಪಡೆದಿದ್ದಾರೆ. ಕಳೆದ ವರ್ಷ ಪ್ರತಿಷ್ಟಿತ ಶಾಲೆಗಳಿಗೆ ಇಬ್ಬರು ಮಕ್ಕಳು ಆಯ್ಕೆಯಾಗಿದ್ದರು. ಈ ವರ್ಷ ನಾಲ್ವರು ವಿದ್ಯಾರ್ಥಿಗಳು ಸೈನಿಕ್‌ ಮತ್ತು ಜವಾಹರ ನವೋದಯ ವಿದ್ಯಾಸಂಸ್ಥೆಗಳಿಗೆ ಆಯ್ಕೆಯಾಗಿದ್ದಾರೆ ಎಂದರು.

ಗುರುತ್ವ ಅಕಾಡೆಮಿಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಮಕ್ಕಳಿಗೆ ಅರ್ಥವಾಗುವ ರೀತಿ, ಮಕ್ಕಳ ಬೌದ್ಧಿಕ ಗುಣಮಟ್ಟಕ್ಕೆ ಅನುಗುಣವಾಗಿ ತರಬೇತಿ ನೀಡಲಾಗುತ್ತದೆ. ಶಿಕ್ಷಣ ಅನ್ನೋದು ಮಕ್ಕಳಿಗೆ ಹೊರೆ ಆಗಬಾರದು,‌‌ ಮಕ್ಕಳು ಶಿಕ್ಷಣವನ್ನು ಇಷ್ಟಪಟ್ಟು ಪಡೆಯಬೇಕು. ಆ ನಿಟ್ಟಿನಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ಕಲಿಸಬೇಕು ಎಂದರು.

ನಂತರ ನವೋದಯ ವಿದ್ಯಾಸಂಸ್ಥೆಗೆ ಆಯ್ಕೆಯಾದ ಎಚ್.ಎಸ್ ಅನನ್ಯ ಮಾತನಾಡಿ, ಗುರುತ್ವ ಅಕಾಡೆಮಿಯಲ್ಲಿ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಉತ್ತಮ ತರಬೇತಿ ನೀಡಲಾಗುತ್ತಿದೆ. ಇಲ್ಲಿ ನಾನು ತರಬೇತಿ ಪಡೆದಿದ್ದರಿಂದ ನವೋದಯ ಶಾಲೆಗೆ ಆಯ್ಕೆಯಾಗಿದ್ದಾನೆ. ಇಂಗ್ಲಿಷ್, ಹಿಂದಿ ಭಾಷೆ ಕಲಿಸಿ ಭಾಷಾ ಜ್ಞಾನ ವೃದ್ಧಿ ಮಾಡುತ್ತಿದ್ದಾರೆ. ಈ ಅಕಾಡೆಮೆಯಲ್ಲಿ ನಾನು ಸಾಕಷ್ಟು ಕಲಿತಿದ್ದೇನೆ ಎಂದರು.

ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ರಾಜಘಟ್ಟ ರವಿ, ಪೋಷಕರು, ಗಣ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ತಿಪ್ಪೂರು ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ…

3 hours ago

ಹಕ್ಕಿಜ್ವರ ಶಂಕೆ: ನವಿಲುಗಳ ಮಾರಣ ಹೋಮ…

ನೆಲಮಂಗಲ: ನೆಲಮಂಗಲದಲ್ಲಿ ನವಿಲುಗಳ ಸಾಮೂಹಿಕ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಹಕ್ಕಿಜ್ವರ (Bird Flu)ಶಂಕೆಯಿಂದ ಸುಮಾರು 10-15 ನವಿಲುಗಳು ಸಾವನ್ನಪ್ಪಿದ…

4 hours ago

ಮೇ.21ಕ್ಕೆ ಭೂಸ್ವಾಧೀನ ವಿರೋಧಿಸಿ ಡಿಸಿ ಕಚೇರಿಗೆ ಟ್ರ್ಯಾಕರ್ ಮೆರವಣಿಗೆ

ದೊಡ್ಡಬೆಳವಂಗಲ ಹೋಬಳಿಯ 2100 ಎಕರೆಯ ಭೂಸ್ವಾಧೀನ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಗೆ ದೊಡ್ಡಬೆಳವಂಗಲ,‌ ಚಿಕ್ಕಬೆಳವಂಗಲ, ಸೊಣ್ಣೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳ ರೈತರಿಂದ…

5 hours ago

ಸ್ನೇಹಿತನ ಬರ್ತಡೇ ಪಾರ್ಟಿಗೆ ಬಂದಿದ್ದ ಯುವಕ ಈಜುಕೊಳಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಸ್ನೇಹಿತನ ಬರ್ತಡೇ ಪಾರ್ಟಿಗೆಂದು ಖಾಸಗಿ ರೆಸಾರ್ಟ್‌ಗೆ ಬಂದಿದ್ದ ಯುವಕನೊಬ್ಬ ನಿದ್ದೆಗಣ್ಣಿನಲ್ಲಿ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

7 hours ago

ದಶಕಗಳುರುಳಿದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಿಲ್ಲ ಜಿಲ್ಲಾ ಕೇಂದ್ರ

ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…

17 hours ago

ದೇವೇಗೌಡರ ವ್ಯಕ್ತಿತ್ವವನ್ನು ವಿಮರ್ಶೆಗೆ ಒಳಪಡಿಸುವುದು ಸಹ ಅಷ್ಟೇ ಸಂಕೀರ್ಣ….

ಸನ್ಮಾನ್ಯ ಶ್ರೀ ಎಚ್. ಡಿ. ದೇವೇಗೌಡ,... 94, ನಾಟ್ ಔಟ್, ಶತಕಕ್ಕೆ 6 ಮಾತ್ರ ಬಾಕಿ, ಅವರು ಶತಕವನ್ನು ಪೂರೈಸಲಿ…

17 hours ago