ಗುರುತ್ವ ಅಕಾಡೆಮಿ: ಸೈನಿಕ್‌ ಮತ್ತು ಜವಾಹರ ನವೋದಯ ವಿದ್ಯಾಸಂಸ್ಥೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ದೊಡ್ಡಬಳ್ಳಾಪುರ ನಗರದ ಗಾಂಧಿ‌ ವೃತ್ತದ ಬಳಿ ಇರುವ ಕರ್ನಾಟಕ ಬ್ಯಾಂಕ್ ಸಮೀಪದ ಗುರುತ್ವ ಅಕಾಡೆಮಿಯಲ್ಲಿ ತರಬೇತಿ ಪಡೆದು ಸೈನಿಕ್‌ ಮತ್ತು ಜವಾಹರ ನವೋದಯ ವಿದ್ಯಾಸಂಸ್ಥೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಇಬ್ಬರು ನವೋದಯ ವಿದ್ಯಾಸಂಸ್ಥೆಗೆ ಆಯ್ಕೆಯಾದರೆ, ಇನ್ನಿಬ್ಬರು ಸೈನಿಕ್ ಶಾಲೆಗೆ ಆಯ್ಕೆಯಾಗಿದ್ದಾರೆ….

ನವೋದಯ ವಿದ್ಯಾಸಂಸ್ಥೆಗೆ ಆಯ್ಕೆಯಾದ ವಿದ್ಯಾರ್ಥಿಗಳು

* ಅನನ್ಯ ಎಚ್.ಎಸ್

* ಹರ್ಷಿತ್.ವಿ

ಸೈನಿಕ್ ಶಾಲೆಗೆ ಆಯ್ಕೆಯಾದ ವಿದ್ಯಾರ್ಥಿಗಳು

* ಹರಿಪ್ರಿಯ

* ತೇಜಸ್ ರೆಡ್ಡಿ ಪಿ.ಎನ್

ಸೈನಿಕ್‌ ಮತ್ತು ಜವಾಹರ ನವೋದಯ ವಿದ್ಯಾಸಂಸ್ಥೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿದ ಶ್ರೀನಿವಾಸ್ ಮಾತನಾಡಿ, ಗುರುತ್ವ ಅಕಾಡೆಮಿ ಪ್ರಾರಂಭವಾಗಿ ಎರಡು ವರ್ಷವಾಗಿದೆ. ಇಲ್ಲಿಯವರೆಗೆ ಸುಮಾರು 150 ಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತರಬೇತಿ ಪಡೆದಿದ್ದಾರೆ. ಕಳೆದ ವರ್ಷ ಪ್ರತಿಷ್ಟಿತ ಶಾಲೆಗಳಿಗೆ ಇಬ್ಬರು ಮಕ್ಕಳು ಆಯ್ಕೆಯಾಗಿದ್ದರು. ಈ ವರ್ಷ ನಾಲ್ವರು ವಿದ್ಯಾರ್ಥಿಗಳು ಸೈನಿಕ್‌ ಮತ್ತು ಜವಾಹರ ನವೋದಯ ವಿದ್ಯಾಸಂಸ್ಥೆಗಳಿಗೆ ಆಯ್ಕೆಯಾಗಿದ್ದಾರೆ ಎಂದರು.

ಗುರುತ್ವ ಅಕಾಡೆಮಿಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಮಕ್ಕಳಿಗೆ ಅರ್ಥವಾಗುವ ರೀತಿ, ಮಕ್ಕಳ ಬೌದ್ಧಿಕ ಗುಣಮಟ್ಟಕ್ಕೆ ಅನುಗುಣವಾಗಿ ತರಬೇತಿ ನೀಡಲಾಗುತ್ತದೆ. ಶಿಕ್ಷಣ ಅನ್ನೋದು ಮಕ್ಕಳಿಗೆ ಹೊರೆ ಆಗಬಾರದು,‌‌ ಮಕ್ಕಳು ಶಿಕ್ಷಣವನ್ನು ಇಷ್ಟಪಟ್ಟು ಪಡೆಯಬೇಕು. ಆ ನಿಟ್ಟಿನಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ಕಲಿಸಬೇಕು ಎಂದರು.

ನಂತರ ನವೋದಯ ವಿದ್ಯಾಸಂಸ್ಥೆಗೆ ಆಯ್ಕೆಯಾದ ಎಚ್.ಎಸ್ ಅನನ್ಯ ಮಾತನಾಡಿ, ಗುರುತ್ವ ಅಕಾಡೆಮಿಯಲ್ಲಿ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಉತ್ತಮ ತರಬೇತಿ ನೀಡಲಾಗುತ್ತಿದೆ. ಇಲ್ಲಿ ನಾನು ತರಬೇತಿ ಪಡೆದಿದ್ದರಿಂದ ನವೋದಯ ಶಾಲೆಗೆ ಆಯ್ಕೆಯಾಗಿದ್ದಾನೆ. ಇಂಗ್ಲಿಷ್, ಹಿಂದಿ ಭಾಷೆ ಕಲಿಸಿ ಭಾಷಾ ಜ್ಞಾನ ವೃದ್ಧಿ ಮಾಡುತ್ತಿದ್ದಾರೆ. ಈ ಅಕಾಡೆಮೆಯಲ್ಲಿ ನಾನು ಸಾಕಷ್ಟು ಕಲಿತಿದ್ದೇನೆ ಎಂದರು.

ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ರಾಜಘಟ್ಟ ರವಿ, ಪೋಷಕರು, ಗಣ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

2 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

3 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

16 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

20 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago