ಗುರುರಾಯರ 430ನೇ ಜನ್ಮದಿನದ ವರ್ಧಂತಿ ಉತ್ಸವ

ಕಲಿಯುಗ ಕಾಮಧೇನು ಶ್ರೀಗುರು ರಾಘವೇಂದ್ರ ಸ್ವಾಮಿಯ 430ನೇ ಜನ್ಮದಿನವನ್ನು ಬಾಶೆಟ್ಟಿಹಳ್ಳಿಯ ವಿಜಯನಗರದಲ್ಲಿರುವ ಶ್ರೀಗುರು ರಾಘವೇಂದ್ರ ಸ್ವಾಮಿಯ ಸನ್ನಿಧಿಯಲ್ಲಿ ವರ್ಧಂತಿ ಉತ್ಸವವಾಗಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಈ ವೇಳೆ ಶ್ರೀಗುರು ರಾಘವೇಂದ್ರ ಸ್ವಾಮಿಯ ಆರಾಧಕ, ಅರ್ಚಕ ಗುರುರಾಜಾಚಾರ್ ಮಾತನಾಡಿ, ವರ್ಧಂತಿ ಉತ್ಸವವನ್ನ ಪ್ರತಿ ವರ್ಷದಂತೆ ಈ ವರ್ಷವೂ ಸ್ವಾಮಿಯ‌ ಸನ್ನಿಧಿಯಲ್ಲಿ ಗುರುವೈಭವೋತ್ಸವವಾಗಿ ಅದ್ಧೂರಿಯಿಂದ ಆಚರಿಸಲಾಗುತ್ತಿದೆ. ಇಂದು ಬೆಳಗ್ಗೆಯಿಂದಲೇ ಸ್ವಾಮಿಗೆ ವಿಶೇಷ ಪೂಜೆ ಪುನಸ್ಕಾರ ನಡೆಸಲಾಯಿತು. ಸ್ವಾಮಿಯ ದರ್ಶನ ಪಡೆಯಲು ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ ಎಂದರು.

ಸ್ವಾಮಿಗೆ ಅಭಿಷೇಕ ನಂತರ ವಿವಿಧ ಹೂ ಗಳಿಂದ ಅಲಂಕಾರ ಮಾಡಲಾಗಿದೆ. ರಾಯರು ಸಂಗೀತ ಪ್ರಿಯರಾಗಿದ್ದರು.. ರಾಯರ ವರ್ಧಂತಿ ಮಹೋತ್ಸವ ಪ್ರಯುಕ್ತ ‌ಪ್ರತಿ ವರ್ಷದಂತೆ ಈ ವರ್ಷವೂ ಸಹ ಯಲಹಂಕದ ಬಿಲ್ವ ವಿನಾಯಕ ಭಜನಾತಂಡದವರು ನಾದಾಹಾರ ಕಾರ್ಯಕ್ರಮ ‌ನಡೆಸಿಕೊಟ್ಟಿದ್ದಾರೆ. ರಾಯರ ಅನುಗ್ರಹ ಎಲ್ಲರ ಮೇಲಿರಲಿ. ಸಕಲ ಜೀವಕೋಟಿರಾಶಿಗಳಿಗೆ ಒಳಿತು ಮಾಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.

ದೇವರ ದರ್ಶನಕ್ಕೆ ಬಂದ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.

Ramesh Babu

Journalist

Recent Posts

ಹೊಸ ವರ್ಷ ದಿನದಂದೇ ದೊಡ್ಡಬಳ್ಳಾಪುರದಲ್ಲಿ ಯುವಕನ ಕೊಲೆ…? ನ್ಯೂ ಇಯರ್ ಸೆಲೆಬ್ರೇಷನ್ ನೆಪದಲ್ಲಿ ರೂಮಿನಲ್ಲಿ ಎಣ್ಣೆ ಪಾರ್ಟಿ ಅರೆಂಜ್: ನ್ಯೂ ಇಯರ್ ಪಾರ್ಟಿ ಮಾಡೋಣ ಬಾ ಎಂದು ಫ್ರೆಂಡ್ನ ಕರೆಸಿಕೊಂಡು ಜೀವ ತೆಗೆದ್ನಾ ಆಸಾಮಿ….?

ಒರಿಸ್ಸಾದಿಂದ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯಲ್ಲಿ ಕೆಲಸಕ್ಕೆಂದು ಬಂದು ಹೊಸ ವರ್ಷ ದಿನದಂದೇ ತನ್ನ ಸ್ನೇಹಿತನಿಂದಲೇ ಕೊಲೆಯಾದ್ನಾ ಯುವಕ....? 2025ರ ಡಿಸೆಂಬರ್ 31…

11 hours ago

ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ 300ಕ್ಕೂ ಹೆಚ್ಚು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಪೂರ್ಣ- ನೇತ್ರ ತಜ್ಞ ಡಾ. ಅರುಣ್ ಹನುಮಂತರಾಯ

ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ 2025ನೇ ಸಾಲಿನಲ್ಲಿ 300ಕ್ಕೂ ಹೆಚ್ಚು ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸುವ ಮೂಲಕ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳಲ್ಲಿ…

12 hours ago

800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರ ದಂಡು

ಇಂದು ಹೊಸ ವರ್ಷ ಹಿನ್ನೆಲೆ 800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ…

14 hours ago

12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ: ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸುವುದು ಸರ್ಕಾರದ ಕರ್ತವ್ಯ- ಸಿಎಂ ಸಿದ್ದರಾಮಯ್ಯ

ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ ಪದ್ಧತಿಯಲ್ಲಿ ಯುಗಾದಿ ಹೊಸ ವರ್ಷವಾಗಿದ್ದರೂ,…

15 hours ago

ಬೆಂ. ಗ್ರಾ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಚಂದ್ರಕಾಂತ್ ಎಂ.ವಿ ಅಧಿಕಾರ ಸ್ವೀಕಾರ

ಇಂದು ಬೆಂಗಳೂರಿನ ಎಸ್ಪಿ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಚಂದ್ರಕಾಂತ್ ಎಂ.ವಿ ಅಧಿಕಾರ ವಹಿಸಿಕೊಂಡಿದ್ದಾರೆ.... ​ಬೆಂಗಳೂರು…

16 hours ago

ಬಾಶೆಟ್ಟಿಹಳ್ಳಿ ಅಜಾಕ್ಸ್ ಶಾಲೆ ಹಿಂಭಾಗ ಯುವಕನ ಶವ ಪತ್ತೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಅಜಾಕ್ಸ್ ಶಾಲೆ ಹಿಂಭಾಗ ಶವ ಪತ್ತೆಯಾಗಿದೆ... ಮೃತ ದುರ್ದೈವಿಯನ್ನು ಒರಿಸ್ಸಾ ಮೂಲದ ಸುಮಂತ್(24) ಎಂದು ಗುರುತಿಸಲಾಗಿದೆ....…

21 hours ago