ಗುರುರಾಯರ 430ನೇ ಜನ್ಮದಿನದ ವರ್ಧಂತಿ ಉತ್ಸವ

ಕಲಿಯುಗ ಕಾಮಧೇನು ಶ್ರೀಗುರು ರಾಘವೇಂದ್ರ ಸ್ವಾಮಿಯ 430ನೇ ಜನ್ಮದಿನವನ್ನು ಬಾಶೆಟ್ಟಿಹಳ್ಳಿಯ ವಿಜಯನಗರದಲ್ಲಿರುವ ಶ್ರೀಗುರು ರಾಘವೇಂದ್ರ ಸ್ವಾಮಿಯ ಸನ್ನಿಧಿಯಲ್ಲಿ ವರ್ಧಂತಿ ಉತ್ಸವವಾಗಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಈ ವೇಳೆ ಶ್ರೀಗುರು ರಾಘವೇಂದ್ರ ಸ್ವಾಮಿಯ ಆರಾಧಕ, ಅರ್ಚಕ ಗುರುರಾಜಾಚಾರ್ ಮಾತನಾಡಿ, ವರ್ಧಂತಿ ಉತ್ಸವವನ್ನ ಪ್ರತಿ ವರ್ಷದಂತೆ ಈ ವರ್ಷವೂ ಸ್ವಾಮಿಯ‌ ಸನ್ನಿಧಿಯಲ್ಲಿ ಗುರುವೈಭವೋತ್ಸವವಾಗಿ ಅದ್ಧೂರಿಯಿಂದ ಆಚರಿಸಲಾಗುತ್ತಿದೆ. ಇಂದು ಬೆಳಗ್ಗೆಯಿಂದಲೇ ಸ್ವಾಮಿಗೆ ವಿಶೇಷ ಪೂಜೆ ಪುನಸ್ಕಾರ ನಡೆಸಲಾಯಿತು. ಸ್ವಾಮಿಯ ದರ್ಶನ ಪಡೆಯಲು ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ ಎಂದರು.

ಸ್ವಾಮಿಗೆ ಅಭಿಷೇಕ ನಂತರ ವಿವಿಧ ಹೂ ಗಳಿಂದ ಅಲಂಕಾರ ಮಾಡಲಾಗಿದೆ. ರಾಯರು ಸಂಗೀತ ಪ್ರಿಯರಾಗಿದ್ದರು.. ರಾಯರ ವರ್ಧಂತಿ ಮಹೋತ್ಸವ ಪ್ರಯುಕ್ತ ‌ಪ್ರತಿ ವರ್ಷದಂತೆ ಈ ವರ್ಷವೂ ಸಹ ಯಲಹಂಕದ ಬಿಲ್ವ ವಿನಾಯಕ ಭಜನಾತಂಡದವರು ನಾದಾಹಾರ ಕಾರ್ಯಕ್ರಮ ‌ನಡೆಸಿಕೊಟ್ಟಿದ್ದಾರೆ. ರಾಯರ ಅನುಗ್ರಹ ಎಲ್ಲರ ಮೇಲಿರಲಿ. ಸಕಲ ಜೀವಕೋಟಿರಾಶಿಗಳಿಗೆ ಒಳಿತು ಮಾಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.

ದೇವರ ದರ್ಶನಕ್ಕೆ ಬಂದ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.

Ramesh Babu

Journalist

Recent Posts

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 hour ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 hour ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

4 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

6 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

18 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

18 hours ago