Categories: ಲೇಖನ

ಗುರು ಪೂರ್ಣಿಮೆ…ಗುರುವೆಂದರೆ…?

ಗುರು ಪೂರ್ಣಿಮೆ…

ಅರಿವೇ ಗುರು……

ಅರಿತವಂಗೆ ಎಲ್ಲವೂ – ಎಲ್ಲರೂ ಗುರುಗಳೇ…..

ಅರಿಯದವಂಗೆ ಅಹಂಕಾರ ಅಜ್ಞಾನವೇ ಗುರು…..

ಅರಿವೆಂಬುದು ಒಂದು ಪ್ರಜ್ಞೆ. ಆದರೆ ಆ ಅರಿವು ಎಷ್ಟು ಆಳವಾದದ್ದು, ಎಷ್ಟು ತೀವ್ರವಾದದ್ದು, ಎಷ್ಟು ವಿಶಾಲವಾದದ್ದು, ಎಷ್ಟು ಸಹಜವಾದದ್ದು, ಎಷ್ಟು ಸ್ಥಿತಿಸ್ಥಾಪಕ ಗುಣವುಳ್ಳದ್ದು, ಎಷ್ಟು ಬಾಲಿಶವಾದದ್ದು, ಎಷ್ಟು ಸತ್ಯವಾದದ್ದು, ಎಷ್ಟು ವಾಸ್ತವವಾದದ್ದು, ಎಷ್ಟು ಪ್ರಯೋಜನಕಾರಿಯಾದದ್ದು, ಎಷ್ಟು ಅಪಾಯಕಾರಿಯಾದದ್ದು, ಎಷ್ಟು ಮಾನವೀಯವಾದದ್ದು, ಎಷ್ಟು ಸಂಕುಚಿತವಾದದ್ದು ಎಂಬ ಅನೇಕ ಅಂಶಗಳನ್ನು ಒಳಗೊಂಡಿರುತ್ತದೆ…

ಅರಿವೇ ಗುರು, ಅರಿವೇ ಜ್ಯೋತಿರ್ಲಿಂಗ, ನಾನೆಂಬುದು ಅರಿವಿ ನೆಂಜಲು ಮುಂತಾದ ಅರಿವಿನ ವಿಮರ್ಶೆಗಳು ಅರಿವಿನ ಅರಿವನ್ನು ತಿಳುವಳಿಕೆ, ಜ್ಞಾನಾರ್ಜನೆಯ ಮಾರ್ಗ ಮತ್ತು ಗುರಿ ಮುಂತಾದ ರೀತಿಯಲ್ಲಿ ವ್ಯಾಖ್ಯಾನಿಸುತ್ತದೆ. ಈ ಅರಿವು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮುಂತಾದ ಎಲ್ಲಾ ಕ್ಷೇತ್ರಗಳಿಗೆ ಅನ್ವಯಿಸಿ ಒಟ್ಟು ವ್ಯಕ್ತಿತ್ವ ಮತ್ತು ಸಾಮಾಜಿಕ ಹಾಗೂ ವೈಯಕ್ತಿಕ ಜೀವನದ ಗುಣಮಟ್ಟವನ್ನು ನಿರ್ಧರಿಸುತ್ತದೆ…

ಅರಿವು ಕೇವಲ ಸಕಾರಾತ್ಮಕ ಮಾತ್ರವಲ್ಲದೆ ನಕಾರಾತ್ಮಕವೂ ಆಗಿರಬಹುದು. ಆದರೆ ಸಾಮಾನ್ಯವಾಗಿ ಅರಿವನ್ನು ತಿಳುವಳಿಕೆಯ ಉತ್ಕೃಷ್ಟ ಮಟ್ಟ ಎಂದೇ ಉಪಯೋಗಿಸಲಾಗುತ್ತದೆ ಅಥವಾ ಭವಬಂಧನಗಳಿಂದ ಮುಕ್ತವಾಗುವ ಪ್ರಕ್ರಿಯೆ ಅಥವಾ ನೆಮ್ಮದಿಯಿಂದ ಸ್ವಾತಂತ್ರ್ಯದಿಂದ ಬದುಕುವ ಪ್ರಜ್ಞೆ ಎಂಬಂತೆಯೂ ಅರ್ಥೈಸಿಕೊಳ್ಳಬಹುದು.

ಅರಿವೆಂಬುದು ಭಾವನಾತ್ಮಕವಾಗಬಾರದು, ಮೌಢ್ಯವಾಗಬಾರದು. ಅದೊಂದು ಸಮಗ್ರತೆಯ ಮತ್ತು ವೈಚಾರಿಕ ಪ್ರಜ್ಞೆಯಾದರೆ ಹೆಚ್ಚು ಉಪಯುಕ್ತವಾಗುತ್ತದೆ, ಮುಕ್ತವಾಗುತ್ತದೆ. ಇಲ್ಲದಿದ್ದರೆ ಜ್ಞಾನದ ಮಿತಿಗೆ ಒಳಪಟ್ಟು ಕೇವಲ ಸಾಹಿತ್ಯಕ ಪರಿಭಾಷೆಯಾಗಿ ಉಳಿದುಬಿಡುತ್ತದೆ.

ನನ್ನ ದೇಹವೇ ನನ್ನ ಗುರು………

ಪಂಚೇಂದ್ರಿಯಗಳನ್ನು ಒಳಗೊಂಡ ಇಡೀ ಶರೀರವೇ ನನ್ನ ಗುರು,

ನನ್ನ ತಂದೆ ತಾಯಿ ಬಂಧು ಬಳಗವೇ ನನ್ನ ಗುರುಗಳು,

ಶಿಕ್ಷಕ, ಗೆಳೆಯ, ವೈದ್ಯ, ಚಾಲಕ, ಕ್ಷೌರಿಕ, ಅಗಸ, ಚಮ್ಮಾರ, ಪೂಜಾರಿ, ರೈತ, ದಾದಿ, ಪೋಲೀಸ್ ಮುಂತಾದ ಎಲ್ಲರೂ ಗುರುಗಳೇ,

ಪುಸ್ತಕ, ಬಳಪ, ವಾಹನ, ಪ್ರಾಣಿ, ಪಕ್ಷಿ, ಆಕಾಶ, ಭೂಮಿ, ನೀರು, ಕಾಡುಗಳು ಇತ್ಯಾದಿಗಳು ಗುರುಗಳೇ,

ಊಟ, ಬಟ್ಟೆ, ಜಗಳ, ಕೋಪ, ಜ್ವರ, ನೋವು, ಪ್ರೀತಿ, ಪ್ರೇಮ, ಪ್ರಣಯ, ಕಷ್ಟ, ಸುಖ ಎಲ್ಲವೂ ಗುರುಗಳೇ,

ಧರ್ಮ, ಕಾನೂನು, ಇತಿಹಾಸ, ವಿಜ್ಞಾನ, ಸಂಘರ್ಷ, ಟೀಕೆ, ಹೊಗಳಿಕೆಗಳು ಗುರುಗಳೇ,

ಕೊಲೆ, ಸುಲಿಗೆ, ವಂಚನೆ, ಅತ್ಯಾಚಾರ, ತ್ಯಾಗ, ಸೌಹಾರ್ದ, ಸಹಕಾರಗಳು ಗುರುಗಳೇ,

ಎಲ್ಲಾ ರೀತಿಯ ಸಾಮಾಜಿಕ ಜಾಲತಾಣಗಳು ಗುರುಗಳೇ,

ನೀವು, ನಿಮ್ಮ ಅಭಿಪ್ರಾಯಗಳು, ಸಲಹೆಗಳು ಎಲ್ಲವೂ ಗುರುಗಳೇ,

ಇಡೀ ಸಮಾಜವೇ ನನ್ನ ಗುರು………

ನನ್ನ ಅನುಭವವೇ ನನ್ನ ಗುರು………

ಗುರುವೆಂದರೆ,
ಅದೊಂದು, ವ್ಯಕ್ತಿ, ಶಕ್ತಿ, ಅರಿವು, ಗ್ರಹಿಕೆ, ದಾರಿ, ಮಾರ್ಗದರ್ಶನ ಹೀಗೆ ಎಲ್ಲವೂ ಹೌದು, ರೂಪಗಳು ಬೇರೆ ಬೇರೆ,

ಗುರು ಪೂರ್ಣಿಮೆ ಕೇವಲ ಒಂದು ಸಾಂಕೇತಿಕ ದಿನ ಮಾತ್ರ, ಪ್ರತಿಕ್ಷಣವೂ ಗುರು ನಮ್ಮೊಂದಿಗೆ ಇರುತ್ತಾರೆ.

ಇಂದು ಭಯ ಭಕ್ತಿಗಳಿಂದ, ನಿರೀಕ್ಷೆಗಳಿಂದ ದೇವಸ್ಥಾನಗಳಿಗೆ ಹೋಗಿ ಕೈಮುಗಿದು ಪ್ರಾರ್ಥಿಸಿ ಪ್ರಸಾದ ತಿಂದು ಬರುವುದರ ಜೊತೆಗೆ ಅರಿವಿನ, ಗುರುವಿನ ಬಗ್ಗೆ ಆತ್ಮಾವಲೋಕನವಾಗಲಿ. ಏಕೆಂದರೆ ನಮ್ಮ ತಿಳಿವಳಿಕೆಗಳು ನಡವಳಿಕೆಗಳಾಗದೆ ಕೇವಲ ಆಚರಣೆಗಳಿಗೆ ಮಾತ್ರ ಸೀಮಿತವಾದರೆ ಇಂತಹ ಹಬ್ಬಗಳಿಗೆ ಅರ್ಥವೇ ಇರುವುದಿಲ್ಲ.

ಈ ಹಬ್ಬಗಳಲ್ಲಿ, ಈ ಸಂಭ್ರಮಗಳಲ್ಲಿ ನಮ್ಮ ಅಂತರಂಗದ ಶುದ್ಧೀಕರಣವಾದರೆ, ಆ ಮೂಲಕ ನಮ್ಮ ಸಾಮಾಜಿಕ ವ್ಯವಸ್ಥೆ ಒಳ್ಳೆಯ ಹಾದಿಯಲ್ಲಿ ಪರಿವರ್ತನೆ ಹೊಂದಿದರೆ ಗುರು ಪೂರ್ಣಿಮಾ ಎಂಬ ಹಬ್ಬಕ್ಕೆ ಸಾರ್ಥಕತೆ ಸಿಗುತ್ತದೆ. ಕೇವಲ ಅದ್ದೂರಿತನದ ಪ್ರದರ್ಶನವಾಗಲಿ , ಭಕ್ತಿಯ ಪ್ರದರ್ಶನವಾಗಲಿ, ಸಂಭ್ರಮವಾಗಲಿ ಮೌಡ್ಯವಾಗದೆ ಜ್ಞಾನವಾಗುವ, ಗುರುವಾಗುವ ಪ್ರಕ್ರಿಯೆ ಹೆಚ್ಚು ಅರ್ಥಪೂರ್ಣ.

ಈ ಸಂದರ್ಭದಲ್ಲಿ ಎಲ್ಲಾ ಗುರುಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ನಾವೂ ಗುರುವಾಗುವತ್ತ ಮುನ್ನಡೆಯೋಣ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

55 minutes ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

2 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

15 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

15 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

15 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

16 hours ago