Categories: ಲೇಖನ

ಗುರು ಪೂರ್ಣಿಮೆ…ಗುರುವೆಂದರೆ…?

ಗುರು ಪೂರ್ಣಿಮೆ…

ಅರಿವೇ ಗುರು……

ಅರಿತವಂಗೆ ಎಲ್ಲವೂ – ಎಲ್ಲರೂ ಗುರುಗಳೇ…..

ಅರಿಯದವಂಗೆ ಅಹಂಕಾರ ಅಜ್ಞಾನವೇ ಗುರು…..

ಅರಿವೆಂಬುದು ಒಂದು ಪ್ರಜ್ಞೆ. ಆದರೆ ಆ ಅರಿವು ಎಷ್ಟು ಆಳವಾದದ್ದು, ಎಷ್ಟು ತೀವ್ರವಾದದ್ದು, ಎಷ್ಟು ವಿಶಾಲವಾದದ್ದು, ಎಷ್ಟು ಸಹಜವಾದದ್ದು, ಎಷ್ಟು ಸ್ಥಿತಿಸ್ಥಾಪಕ ಗುಣವುಳ್ಳದ್ದು, ಎಷ್ಟು ಬಾಲಿಶವಾದದ್ದು, ಎಷ್ಟು ಸತ್ಯವಾದದ್ದು, ಎಷ್ಟು ವಾಸ್ತವವಾದದ್ದು, ಎಷ್ಟು ಪ್ರಯೋಜನಕಾರಿಯಾದದ್ದು, ಎಷ್ಟು ಅಪಾಯಕಾರಿಯಾದದ್ದು, ಎಷ್ಟು ಮಾನವೀಯವಾದದ್ದು, ಎಷ್ಟು ಸಂಕುಚಿತವಾದದ್ದು ಎಂಬ ಅನೇಕ ಅಂಶಗಳನ್ನು ಒಳಗೊಂಡಿರುತ್ತದೆ…

ಅರಿವೇ ಗುರು, ಅರಿವೇ ಜ್ಯೋತಿರ್ಲಿಂಗ, ನಾನೆಂಬುದು ಅರಿವಿ ನೆಂಜಲು ಮುಂತಾದ ಅರಿವಿನ ವಿಮರ್ಶೆಗಳು ಅರಿವಿನ ಅರಿವನ್ನು ತಿಳುವಳಿಕೆ, ಜ್ಞಾನಾರ್ಜನೆಯ ಮಾರ್ಗ ಮತ್ತು ಗುರಿ ಮುಂತಾದ ರೀತಿಯಲ್ಲಿ ವ್ಯಾಖ್ಯಾನಿಸುತ್ತದೆ. ಈ ಅರಿವು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮುಂತಾದ ಎಲ್ಲಾ ಕ್ಷೇತ್ರಗಳಿಗೆ ಅನ್ವಯಿಸಿ ಒಟ್ಟು ವ್ಯಕ್ತಿತ್ವ ಮತ್ತು ಸಾಮಾಜಿಕ ಹಾಗೂ ವೈಯಕ್ತಿಕ ಜೀವನದ ಗುಣಮಟ್ಟವನ್ನು ನಿರ್ಧರಿಸುತ್ತದೆ…

ಅರಿವು ಕೇವಲ ಸಕಾರಾತ್ಮಕ ಮಾತ್ರವಲ್ಲದೆ ನಕಾರಾತ್ಮಕವೂ ಆಗಿರಬಹುದು. ಆದರೆ ಸಾಮಾನ್ಯವಾಗಿ ಅರಿವನ್ನು ತಿಳುವಳಿಕೆಯ ಉತ್ಕೃಷ್ಟ ಮಟ್ಟ ಎಂದೇ ಉಪಯೋಗಿಸಲಾಗುತ್ತದೆ ಅಥವಾ ಭವಬಂಧನಗಳಿಂದ ಮುಕ್ತವಾಗುವ ಪ್ರಕ್ರಿಯೆ ಅಥವಾ ನೆಮ್ಮದಿಯಿಂದ ಸ್ವಾತಂತ್ರ್ಯದಿಂದ ಬದುಕುವ ಪ್ರಜ್ಞೆ ಎಂಬಂತೆಯೂ ಅರ್ಥೈಸಿಕೊಳ್ಳಬಹುದು.

ಅರಿವೆಂಬುದು ಭಾವನಾತ್ಮಕವಾಗಬಾರದು, ಮೌಢ್ಯವಾಗಬಾರದು. ಅದೊಂದು ಸಮಗ್ರತೆಯ ಮತ್ತು ವೈಚಾರಿಕ ಪ್ರಜ್ಞೆಯಾದರೆ ಹೆಚ್ಚು ಉಪಯುಕ್ತವಾಗುತ್ತದೆ, ಮುಕ್ತವಾಗುತ್ತದೆ. ಇಲ್ಲದಿದ್ದರೆ ಜ್ಞಾನದ ಮಿತಿಗೆ ಒಳಪಟ್ಟು ಕೇವಲ ಸಾಹಿತ್ಯಕ ಪರಿಭಾಷೆಯಾಗಿ ಉಳಿದುಬಿಡುತ್ತದೆ.

ನನ್ನ ದೇಹವೇ ನನ್ನ ಗುರು………

ಪಂಚೇಂದ್ರಿಯಗಳನ್ನು ಒಳಗೊಂಡ ಇಡೀ ಶರೀರವೇ ನನ್ನ ಗುರು,

ನನ್ನ ತಂದೆ ತಾಯಿ ಬಂಧು ಬಳಗವೇ ನನ್ನ ಗುರುಗಳು,

ಶಿಕ್ಷಕ, ಗೆಳೆಯ, ವೈದ್ಯ, ಚಾಲಕ, ಕ್ಷೌರಿಕ, ಅಗಸ, ಚಮ್ಮಾರ, ಪೂಜಾರಿ, ರೈತ, ದಾದಿ, ಪೋಲೀಸ್ ಮುಂತಾದ ಎಲ್ಲರೂ ಗುರುಗಳೇ,

ಪುಸ್ತಕ, ಬಳಪ, ವಾಹನ, ಪ್ರಾಣಿ, ಪಕ್ಷಿ, ಆಕಾಶ, ಭೂಮಿ, ನೀರು, ಕಾಡುಗಳು ಇತ್ಯಾದಿಗಳು ಗುರುಗಳೇ,

ಊಟ, ಬಟ್ಟೆ, ಜಗಳ, ಕೋಪ, ಜ್ವರ, ನೋವು, ಪ್ರೀತಿ, ಪ್ರೇಮ, ಪ್ರಣಯ, ಕಷ್ಟ, ಸುಖ ಎಲ್ಲವೂ ಗುರುಗಳೇ,

ಧರ್ಮ, ಕಾನೂನು, ಇತಿಹಾಸ, ವಿಜ್ಞಾನ, ಸಂಘರ್ಷ, ಟೀಕೆ, ಹೊಗಳಿಕೆಗಳು ಗುರುಗಳೇ,

ಕೊಲೆ, ಸುಲಿಗೆ, ವಂಚನೆ, ಅತ್ಯಾಚಾರ, ತ್ಯಾಗ, ಸೌಹಾರ್ದ, ಸಹಕಾರಗಳು ಗುರುಗಳೇ,

ಎಲ್ಲಾ ರೀತಿಯ ಸಾಮಾಜಿಕ ಜಾಲತಾಣಗಳು ಗುರುಗಳೇ,

ನೀವು, ನಿಮ್ಮ ಅಭಿಪ್ರಾಯಗಳು, ಸಲಹೆಗಳು ಎಲ್ಲವೂ ಗುರುಗಳೇ,

ಇಡೀ ಸಮಾಜವೇ ನನ್ನ ಗುರು………

ನನ್ನ ಅನುಭವವೇ ನನ್ನ ಗುರು………

ಗುರುವೆಂದರೆ,
ಅದೊಂದು, ವ್ಯಕ್ತಿ, ಶಕ್ತಿ, ಅರಿವು, ಗ್ರಹಿಕೆ, ದಾರಿ, ಮಾರ್ಗದರ್ಶನ ಹೀಗೆ ಎಲ್ಲವೂ ಹೌದು, ರೂಪಗಳು ಬೇರೆ ಬೇರೆ,

ಗುರು ಪೂರ್ಣಿಮೆ ಕೇವಲ ಒಂದು ಸಾಂಕೇತಿಕ ದಿನ ಮಾತ್ರ, ಪ್ರತಿಕ್ಷಣವೂ ಗುರು ನಮ್ಮೊಂದಿಗೆ ಇರುತ್ತಾರೆ.

ಇಂದು ಭಯ ಭಕ್ತಿಗಳಿಂದ, ನಿರೀಕ್ಷೆಗಳಿಂದ ದೇವಸ್ಥಾನಗಳಿಗೆ ಹೋಗಿ ಕೈಮುಗಿದು ಪ್ರಾರ್ಥಿಸಿ ಪ್ರಸಾದ ತಿಂದು ಬರುವುದರ ಜೊತೆಗೆ ಅರಿವಿನ, ಗುರುವಿನ ಬಗ್ಗೆ ಆತ್ಮಾವಲೋಕನವಾಗಲಿ. ಏಕೆಂದರೆ ನಮ್ಮ ತಿಳಿವಳಿಕೆಗಳು ನಡವಳಿಕೆಗಳಾಗದೆ ಕೇವಲ ಆಚರಣೆಗಳಿಗೆ ಮಾತ್ರ ಸೀಮಿತವಾದರೆ ಇಂತಹ ಹಬ್ಬಗಳಿಗೆ ಅರ್ಥವೇ ಇರುವುದಿಲ್ಲ.

ಈ ಹಬ್ಬಗಳಲ್ಲಿ, ಈ ಸಂಭ್ರಮಗಳಲ್ಲಿ ನಮ್ಮ ಅಂತರಂಗದ ಶುದ್ಧೀಕರಣವಾದರೆ, ಆ ಮೂಲಕ ನಮ್ಮ ಸಾಮಾಜಿಕ ವ್ಯವಸ್ಥೆ ಒಳ್ಳೆಯ ಹಾದಿಯಲ್ಲಿ ಪರಿವರ್ತನೆ ಹೊಂದಿದರೆ ಗುರು ಪೂರ್ಣಿಮಾ ಎಂಬ ಹಬ್ಬಕ್ಕೆ ಸಾರ್ಥಕತೆ ಸಿಗುತ್ತದೆ. ಕೇವಲ ಅದ್ದೂರಿತನದ ಪ್ರದರ್ಶನವಾಗಲಿ , ಭಕ್ತಿಯ ಪ್ರದರ್ಶನವಾಗಲಿ, ಸಂಭ್ರಮವಾಗಲಿ ಮೌಡ್ಯವಾಗದೆ ಜ್ಞಾನವಾಗುವ, ಗುರುವಾಗುವ ಪ್ರಕ್ರಿಯೆ ಹೆಚ್ಚು ಅರ್ಥಪೂರ್ಣ.

ಈ ಸಂದರ್ಭದಲ್ಲಿ ಎಲ್ಲಾ ಗುರುಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ನಾವೂ ಗುರುವಾಗುವತ್ತ ಮುನ್ನಡೆಯೋಣ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

4 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

5 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

6 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

7 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

14 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago