ಗೂಗಲ್ ರೇಟಿಂಗ್ ನಿಂದ ವಿದ್ಯಾರ್ಥಿಗಳನ್ನು ತನ್ನತ್ತಾ ಸೆಳೆದುಕೊಂಡ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಕಾಲೇಜ್..?: ಪ್ಲೇಸ್ ಮೆಂಟ್, ವಿದೇಶಿ ಪ್ರವಾಸ ಆಮಿಷ: ವಿದ್ಯಾರ್ಥಿಗಳಿಂದ ಲಕ್ಷಲಕ್ಷ ಹಣ ಪೀಕಿ ಕೊನೆಗೆ ಯಾವ ಸೌಲಭ್ಯ ನೀಡದೇ ವಂಚನೆ: ವಿದ್ಯಾರ್ಥಿಗಳ ಆಕ್ರೋಶ

ದೇವನಹಳ್ಳಿ ತಾಲೂಕು ಮುದುಗುರ್ಕಿ ಸಮೀಪ ಇರುವ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನೂರಾರು ವಿದ್ಯಾರ್ಥಿಗಳ ಕೋಟಿಗಟ್ಟಲೇ ಹಣವನ್ನು ಕಾಲೇಜು ಆಡಳಿತ ಮಂಡಳಿ ಲಪಾಟಾಯಿಸಿರುವ ಆರೋಪ ಕೇಳಿಬಂದಿದೆ.

ಇದರ ವಿರುದ್ಧ ಈಗ ವಿದ್ಯಾರ್ಥಿಗಳು ಬೀದಿಗೆ ಬಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಳಕಿಗೆ ಬಂದಿದೆ.

ಹೌದು, ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಸೆಳೆಯುವ ದೃಷ್ಟಿಯಿಂದ ಗೂಗಲ್ ರೇಟಿಂಗ್ ಅಳವಡಿಸಿ ದೇಶದ ಮೂಲೆಮೂಲೆಗಳಿಂದ ವಿದ್ಯಾರ್ಥಿಗಳನ್ನು ತನ್ನತ್ತಾ ಸೆಳೆದುಕೊಂಡು ಉತ್ತಮ ಪ್ಲೇಸ್ ಮೆಂಟ್ ವಿದೇಶಿ ಪ್ರವಾಸ ಎಂದು ವಾರ್ಷಿಕವಾಗಿ ಲಕ್ಷಲಕ್ಷ ಹಣವನ್ನು ವಿದ್ಯಾರ್ಥಿಗಳಿಂದ ಪಡೆದುಕೊಂಡು ಕೊನೆಯದಾಗಿ ಯಾವುದೇ ಸೌಲಭ್ಯಗಳನ್ನು ಕೊಡದೇ ವಿದ್ಯಾರ್ಥಿಗಳಿಗೆ ವಂಚನೆ ಮಾಡಲು ಮುಂದಾಗುತ್ತಿದೆ ಎಂಬ ಆರೋಪ ಬಂದಿದೆ.

ಇನ್ನೂ, ವಾರ್ಷಿಕವಾಗಿ ಒಬ್ಬ ವಿದ್ಯಾರ್ಥಿಯಿಂದ 7.90 ಲಕ್ಷ ಹಣವನ್ನು ಪಡೆದುಕೊಂಡು ವಿದ್ಯಾಭ್ಯಾಸವನ್ನು ನೀಡಲು ಮುಂದಾಗುತ್ತಿದೆ. ಆದರೆ, ಪರೀಕ್ಷೆ ಸಮಯದಲ್ಲಿ ಹಣವನ್ನು ಕಟ್ಟದಿದ್ದರೆ ಬೆದರಿಕೆಗಳನ್ನು ಹಾಕಿ ವಿದ್ಯಾರ್ಥಿಗಳಿಂದ ಹಣವನ್ನು ಪಡೆದುಕೊಂಡು ಕೊಟ್ಟ ಮಾತಿನಂತೆ ಒಳ್ಳೆಯ ಕಂಪನಿಗಳಲ್ಲಿ ಪ್ಲೇಸ್ ಮೆಂಟ್ ಸಿಗದೆ, ಕಾಲೇಜು ಆಡಳಿತ ಮಂಡಳಿ ಹೇಳಿರುವಂತೆ ಮಲೇಶಿಯಾ ಪ್ರವಾಸವು ಇಲ್ಲದೆ ವಿದ್ಯಾರ್ಥಿಗಳಿಗೆ ಬಾರೀ ಮೋಸ ಮಾಡಿ ಕೊಟೀಗಟ್ಟಲೇ ಹಣವನ್ನು ಲಪಟಾಯಿಸಿ ನಮಗೇನು ಸಂಬಂಧವಿಲ್ಲವೆಂಬಂತೆ ವರ್ತನೆ ಮಾಡುತ್ತಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ ತಿಗಳಿನಲ್ಲಿ ನ್ಯಾಕ್ ಆಕಾಡಮಿ ಸಿಬ್ಬಂದಿ ಭೇಟಿ ನೀಡಿದ ವೇಳೆ ಕಾಲೇಜು ಆಡಳಿತ ಮಂಡಳಿ ವಂಚನೆ ಹಾಗೂ ಕಳಪೆ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳು ವರದಿ ಮಾಡಿದರು. ಅದರಂತೆ ನ್ಯಾಕ್ ಸಂಸ್ಥೆ ಕಾಲೇಜು ಆಡಳಿತ ಮಂಡಳಿಗೆ ನೋಟಿಸ್ ಸಹಾ ನೀಡಿ ವರದಿಯನ್ನು ನೀಡುವಂತೆ ಆದೇಶವನ್ನು ಹೊರಡಿಸಿದೆ. ಆದರೆ, ಇದೇ ಸಮಯದಲ್ಲಿ ವಿದ್ಯಾರ್ಥಿಗಳು ಸಹಾ ಕಾಲೇಜು ಆಡಳಿತ ಮಂಡಳಿ ಮಾಡುತ್ತಿರುವ ಮೋಸವನ್ನು ಅರಿತು ನಮಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇನ್ನೂ ಕಾಲೇಜಿನಲ್ಲಿ ಸುಮಾರು 170 ಕ್ಕೂ ವಿದ್ಯಾರ್ಥಿಗಳಿಂದ 8 ಲಕ್ಷದಿಂದ 12 ಲಕ್ಷದವರೆಗೆ ಹಣವನ್ನು ವಸೂಲಿ ಮಾಡಿಕೊಂಡಿದೆ ಆದರೆ, ಯಾವುದೇ ಸೌಲಭ್ಯಗಳನ್ನು ನೀಡದೆ ವಂಚನೆ ಮಾಡುತ್ತಿದ್ದು ಇದರಿಂದ ಸರಿಸುಮಾರು 10 ಕೋಟಿಗು ಅಧಿಕ ಹಣವನ್ನು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಮೋಸ ಮಾಡಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಒಟ್ಟಾರೇ ಕಾಲೇಜು ಆಡಳಿತ ವತಿಯಿಂದ ನೀಡಿರುವ ಭರವಸೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆಯನ್ನು ಕೊಟ್ಟಿದ್ದಾರೆ.

Ramesh Babu

Journalist

Recent Posts

ಸ್ಲೋಚ್ ಕ್ಯಾಪ್ ಗೆ ವಿದಾಯ: ನೀಲಿ ಬಣ್ಣದ ಪೀಕ್ ಕ್ಯಾಪ್ ಧರಿಸಿ ಮಿಂಚಿದ ಬೆಂ ಗ್ರಾ ಜಿಲ್ಲಾ ಪೊಲೀಸ್ ಸಿಬ್ಬಂದಿ

1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…

4 hours ago

ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆಗೆ ಮುನ್ನೆಚ್ಚರಿಕೆ ಕ್ರಮ ಪೊಲೀಸ್ ಇಲಾಖೆ ಕೈಗೊಳ್ಳಬೇಕು- ಸಿಎಂ ಸಿದ್ದರಾಮಯ್ಯ

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು…

4 hours ago

ಜ.1ರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲೈಟ್ ಕಡ್ಡಾಯ – ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ- ಡಿವೈಎಸ್ಪಿ ಪಾಂಡುರಂಗ

ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…

7 hours ago

ಹಿಟ್ & ರನ್: ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು: ಸಿಮೆಂಟ್ ಬಲ್ಕರ್ ಪರಾರಿ

ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು…

10 hours ago

“ಕುವೆಂಪು”….. ಸಾಹಿತ್ಯ – ವಿಶ್ವ ಮಾನವ ಪ್ರಜ್ಞೆ……

ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…

16 hours ago

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

2 days ago