ಗೂಗಲ್ ರೇಟಿಂಗ್ ನಿಂದ ವಿದ್ಯಾರ್ಥಿಗಳನ್ನು ತನ್ನತ್ತಾ ಸೆಳೆದುಕೊಂಡ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಕಾಲೇಜ್..?: ಪ್ಲೇಸ್ ಮೆಂಟ್, ವಿದೇಶಿ ಪ್ರವಾಸ ಆಮಿಷ: ವಿದ್ಯಾರ್ಥಿಗಳಿಂದ ಲಕ್ಷಲಕ್ಷ ಹಣ ಪೀಕಿ ಕೊನೆಗೆ ಯಾವ ಸೌಲಭ್ಯ ನೀಡದೇ ವಂಚನೆ: ವಿದ್ಯಾರ್ಥಿಗಳ ಆಕ್ರೋಶ

ದೇವನಹಳ್ಳಿ ತಾಲೂಕು ಮುದುಗುರ್ಕಿ ಸಮೀಪ ಇರುವ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನೂರಾರು ವಿದ್ಯಾರ್ಥಿಗಳ ಕೋಟಿಗಟ್ಟಲೇ ಹಣವನ್ನು ಕಾಲೇಜು ಆಡಳಿತ ಮಂಡಳಿ ಲಪಾಟಾಯಿಸಿರುವ ಆರೋಪ ಕೇಳಿಬಂದಿದೆ.

ಇದರ ವಿರುದ್ಧ ಈಗ ವಿದ್ಯಾರ್ಥಿಗಳು ಬೀದಿಗೆ ಬಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಳಕಿಗೆ ಬಂದಿದೆ.

ಹೌದು, ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಸೆಳೆಯುವ ದೃಷ್ಟಿಯಿಂದ ಗೂಗಲ್ ರೇಟಿಂಗ್ ಅಳವಡಿಸಿ ದೇಶದ ಮೂಲೆಮೂಲೆಗಳಿಂದ ವಿದ್ಯಾರ್ಥಿಗಳನ್ನು ತನ್ನತ್ತಾ ಸೆಳೆದುಕೊಂಡು ಉತ್ತಮ ಪ್ಲೇಸ್ ಮೆಂಟ್ ವಿದೇಶಿ ಪ್ರವಾಸ ಎಂದು ವಾರ್ಷಿಕವಾಗಿ ಲಕ್ಷಲಕ್ಷ ಹಣವನ್ನು ವಿದ್ಯಾರ್ಥಿಗಳಿಂದ ಪಡೆದುಕೊಂಡು ಕೊನೆಯದಾಗಿ ಯಾವುದೇ ಸೌಲಭ್ಯಗಳನ್ನು ಕೊಡದೇ ವಿದ್ಯಾರ್ಥಿಗಳಿಗೆ ವಂಚನೆ ಮಾಡಲು ಮುಂದಾಗುತ್ತಿದೆ ಎಂಬ ಆರೋಪ ಬಂದಿದೆ.

ಇನ್ನೂ, ವಾರ್ಷಿಕವಾಗಿ ಒಬ್ಬ ವಿದ್ಯಾರ್ಥಿಯಿಂದ 7.90 ಲಕ್ಷ ಹಣವನ್ನು ಪಡೆದುಕೊಂಡು ವಿದ್ಯಾಭ್ಯಾಸವನ್ನು ನೀಡಲು ಮುಂದಾಗುತ್ತಿದೆ. ಆದರೆ, ಪರೀಕ್ಷೆ ಸಮಯದಲ್ಲಿ ಹಣವನ್ನು ಕಟ್ಟದಿದ್ದರೆ ಬೆದರಿಕೆಗಳನ್ನು ಹಾಕಿ ವಿದ್ಯಾರ್ಥಿಗಳಿಂದ ಹಣವನ್ನು ಪಡೆದುಕೊಂಡು ಕೊಟ್ಟ ಮಾತಿನಂತೆ ಒಳ್ಳೆಯ ಕಂಪನಿಗಳಲ್ಲಿ ಪ್ಲೇಸ್ ಮೆಂಟ್ ಸಿಗದೆ, ಕಾಲೇಜು ಆಡಳಿತ ಮಂಡಳಿ ಹೇಳಿರುವಂತೆ ಮಲೇಶಿಯಾ ಪ್ರವಾಸವು ಇಲ್ಲದೆ ವಿದ್ಯಾರ್ಥಿಗಳಿಗೆ ಬಾರೀ ಮೋಸ ಮಾಡಿ ಕೊಟೀಗಟ್ಟಲೇ ಹಣವನ್ನು ಲಪಟಾಯಿಸಿ ನಮಗೇನು ಸಂಬಂಧವಿಲ್ಲವೆಂಬಂತೆ ವರ್ತನೆ ಮಾಡುತ್ತಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ ತಿಗಳಿನಲ್ಲಿ ನ್ಯಾಕ್ ಆಕಾಡಮಿ ಸಿಬ್ಬಂದಿ ಭೇಟಿ ನೀಡಿದ ವೇಳೆ ಕಾಲೇಜು ಆಡಳಿತ ಮಂಡಳಿ ವಂಚನೆ ಹಾಗೂ ಕಳಪೆ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳು ವರದಿ ಮಾಡಿದರು. ಅದರಂತೆ ನ್ಯಾಕ್ ಸಂಸ್ಥೆ ಕಾಲೇಜು ಆಡಳಿತ ಮಂಡಳಿಗೆ ನೋಟಿಸ್ ಸಹಾ ನೀಡಿ ವರದಿಯನ್ನು ನೀಡುವಂತೆ ಆದೇಶವನ್ನು ಹೊರಡಿಸಿದೆ. ಆದರೆ, ಇದೇ ಸಮಯದಲ್ಲಿ ವಿದ್ಯಾರ್ಥಿಗಳು ಸಹಾ ಕಾಲೇಜು ಆಡಳಿತ ಮಂಡಳಿ ಮಾಡುತ್ತಿರುವ ಮೋಸವನ್ನು ಅರಿತು ನಮಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇನ್ನೂ ಕಾಲೇಜಿನಲ್ಲಿ ಸುಮಾರು 170 ಕ್ಕೂ ವಿದ್ಯಾರ್ಥಿಗಳಿಂದ 8 ಲಕ್ಷದಿಂದ 12 ಲಕ್ಷದವರೆಗೆ ಹಣವನ್ನು ವಸೂಲಿ ಮಾಡಿಕೊಂಡಿದೆ ಆದರೆ, ಯಾವುದೇ ಸೌಲಭ್ಯಗಳನ್ನು ನೀಡದೆ ವಂಚನೆ ಮಾಡುತ್ತಿದ್ದು ಇದರಿಂದ ಸರಿಸುಮಾರು 10 ಕೋಟಿಗು ಅಧಿಕ ಹಣವನ್ನು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಮೋಸ ಮಾಡಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಒಟ್ಟಾರೇ ಕಾಲೇಜು ಆಡಳಿತ ವತಿಯಿಂದ ನೀಡಿರುವ ಭರವಸೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆಯನ್ನು ಕೊಟ್ಟಿದ್ದಾರೆ.

Ramesh Babu

Journalist

Recent Posts

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

4 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

5 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

16 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

17 hours ago

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…

17 hours ago