ಗೂಗಲ್ ರೇಟಿಂಗ್ ನಿಂದ ವಿದ್ಯಾರ್ಥಿಗಳನ್ನು ತನ್ನತ್ತಾ ಸೆಳೆದುಕೊಂಡ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಕಾಲೇಜ್..?: ಪ್ಲೇಸ್ ಮೆಂಟ್, ವಿದೇಶಿ ಪ್ರವಾಸ ಆಮಿಷ: ವಿದ್ಯಾರ್ಥಿಗಳಿಂದ ಲಕ್ಷಲಕ್ಷ ಹಣ ಪೀಕಿ ಕೊನೆಗೆ ಯಾವ ಸೌಲಭ್ಯ ನೀಡದೇ ವಂಚನೆ: ವಿದ್ಯಾರ್ಥಿಗಳ ಆಕ್ರೋಶ

ದೇವನಹಳ್ಳಿ ತಾಲೂಕು ಮುದುಗುರ್ಕಿ ಸಮೀಪ ಇರುವ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನೂರಾರು ವಿದ್ಯಾರ್ಥಿಗಳ ಕೋಟಿಗಟ್ಟಲೇ ಹಣವನ್ನು ಕಾಲೇಜು ಆಡಳಿತ ಮಂಡಳಿ ಲಪಾಟಾಯಿಸಿರುವ ಆರೋಪ ಕೇಳಿಬಂದಿದೆ.

ಇದರ ವಿರುದ್ಧ ಈಗ ವಿದ್ಯಾರ್ಥಿಗಳು ಬೀದಿಗೆ ಬಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಳಕಿಗೆ ಬಂದಿದೆ.

ಹೌದು, ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಸೆಳೆಯುವ ದೃಷ್ಟಿಯಿಂದ ಗೂಗಲ್ ರೇಟಿಂಗ್ ಅಳವಡಿಸಿ ದೇಶದ ಮೂಲೆಮೂಲೆಗಳಿಂದ ವಿದ್ಯಾರ್ಥಿಗಳನ್ನು ತನ್ನತ್ತಾ ಸೆಳೆದುಕೊಂಡು ಉತ್ತಮ ಪ್ಲೇಸ್ ಮೆಂಟ್ ವಿದೇಶಿ ಪ್ರವಾಸ ಎಂದು ವಾರ್ಷಿಕವಾಗಿ ಲಕ್ಷಲಕ್ಷ ಹಣವನ್ನು ವಿದ್ಯಾರ್ಥಿಗಳಿಂದ ಪಡೆದುಕೊಂಡು ಕೊನೆಯದಾಗಿ ಯಾವುದೇ ಸೌಲಭ್ಯಗಳನ್ನು ಕೊಡದೇ ವಿದ್ಯಾರ್ಥಿಗಳಿಗೆ ವಂಚನೆ ಮಾಡಲು ಮುಂದಾಗುತ್ತಿದೆ ಎಂಬ ಆರೋಪ ಬಂದಿದೆ.

ಇನ್ನೂ, ವಾರ್ಷಿಕವಾಗಿ ಒಬ್ಬ ವಿದ್ಯಾರ್ಥಿಯಿಂದ 7.90 ಲಕ್ಷ ಹಣವನ್ನು ಪಡೆದುಕೊಂಡು ವಿದ್ಯಾಭ್ಯಾಸವನ್ನು ನೀಡಲು ಮುಂದಾಗುತ್ತಿದೆ. ಆದರೆ, ಪರೀಕ್ಷೆ ಸಮಯದಲ್ಲಿ ಹಣವನ್ನು ಕಟ್ಟದಿದ್ದರೆ ಬೆದರಿಕೆಗಳನ್ನು ಹಾಕಿ ವಿದ್ಯಾರ್ಥಿಗಳಿಂದ ಹಣವನ್ನು ಪಡೆದುಕೊಂಡು ಕೊಟ್ಟ ಮಾತಿನಂತೆ ಒಳ್ಳೆಯ ಕಂಪನಿಗಳಲ್ಲಿ ಪ್ಲೇಸ್ ಮೆಂಟ್ ಸಿಗದೆ, ಕಾಲೇಜು ಆಡಳಿತ ಮಂಡಳಿ ಹೇಳಿರುವಂತೆ ಮಲೇಶಿಯಾ ಪ್ರವಾಸವು ಇಲ್ಲದೆ ವಿದ್ಯಾರ್ಥಿಗಳಿಗೆ ಬಾರೀ ಮೋಸ ಮಾಡಿ ಕೊಟೀಗಟ್ಟಲೇ ಹಣವನ್ನು ಲಪಟಾಯಿಸಿ ನಮಗೇನು ಸಂಬಂಧವಿಲ್ಲವೆಂಬಂತೆ ವರ್ತನೆ ಮಾಡುತ್ತಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ ತಿಗಳಿನಲ್ಲಿ ನ್ಯಾಕ್ ಆಕಾಡಮಿ ಸಿಬ್ಬಂದಿ ಭೇಟಿ ನೀಡಿದ ವೇಳೆ ಕಾಲೇಜು ಆಡಳಿತ ಮಂಡಳಿ ವಂಚನೆ ಹಾಗೂ ಕಳಪೆ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳು ವರದಿ ಮಾಡಿದರು. ಅದರಂತೆ ನ್ಯಾಕ್ ಸಂಸ್ಥೆ ಕಾಲೇಜು ಆಡಳಿತ ಮಂಡಳಿಗೆ ನೋಟಿಸ್ ಸಹಾ ನೀಡಿ ವರದಿಯನ್ನು ನೀಡುವಂತೆ ಆದೇಶವನ್ನು ಹೊರಡಿಸಿದೆ. ಆದರೆ, ಇದೇ ಸಮಯದಲ್ಲಿ ವಿದ್ಯಾರ್ಥಿಗಳು ಸಹಾ ಕಾಲೇಜು ಆಡಳಿತ ಮಂಡಳಿ ಮಾಡುತ್ತಿರುವ ಮೋಸವನ್ನು ಅರಿತು ನಮಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇನ್ನೂ ಕಾಲೇಜಿನಲ್ಲಿ ಸುಮಾರು 170 ಕ್ಕೂ ವಿದ್ಯಾರ್ಥಿಗಳಿಂದ 8 ಲಕ್ಷದಿಂದ 12 ಲಕ್ಷದವರೆಗೆ ಹಣವನ್ನು ವಸೂಲಿ ಮಾಡಿಕೊಂಡಿದೆ ಆದರೆ, ಯಾವುದೇ ಸೌಲಭ್ಯಗಳನ್ನು ನೀಡದೆ ವಂಚನೆ ಮಾಡುತ್ತಿದ್ದು ಇದರಿಂದ ಸರಿಸುಮಾರು 10 ಕೋಟಿಗು ಅಧಿಕ ಹಣವನ್ನು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಮೋಸ ಮಾಡಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಒಟ್ಟಾರೇ ಕಾಲೇಜು ಆಡಳಿತ ವತಿಯಿಂದ ನೀಡಿರುವ ಭರವಸೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆಯನ್ನು ಕೊಟ್ಟಿದ್ದಾರೆ.

Ramesh Babu

Journalist

Recent Posts

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

6 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

6 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

6 hours ago

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

10 hours ago

ಕರ್ನಾಟಕ ವಿರೋಧಿ ‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಬಿಟ್ಟು ತೊಲಗಲಿ’- ಕರ್ನಾಟಕ ರಕ್ಷಣಾ ವೇದಿಕೆ‌ ಜಿಲ್ಲಾಧ್ಯಕ್ಷ ಪುರುಷೋತ್ತಮಗೌಡ ಆಗ್ರಹ

ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…

12 hours ago

ಮಾನಸಿಕ ಗುಣಮಟ್ಟ ಪರೀಕ್ಷಿಸಿಕೊಳ್ಳುವ ಆತ್ಮಾವಲೋಕನ ನಡೆಯಲಿ…

ಭಾವ ಬಯಲಿನ‌ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…

17 hours ago