ಗೂಗಲ್ ರೇಟಿಂಗ್ ನಿಂದ ವಿದ್ಯಾರ್ಥಿಗಳನ್ನು ತನ್ನತ್ತಾ ಸೆಳೆದುಕೊಂಡ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಕಾಲೇಜ್..?: ಪ್ಲೇಸ್ ಮೆಂಟ್, ವಿದೇಶಿ ಪ್ರವಾಸ ಆಮಿಷ: ವಿದ್ಯಾರ್ಥಿಗಳಿಂದ ಲಕ್ಷಲಕ್ಷ ಹಣ ಪೀಕಿ ಕೊನೆಗೆ ಯಾವ ಸೌಲಭ್ಯ ನೀಡದೇ ವಂಚನೆ: ವಿದ್ಯಾರ್ಥಿಗಳ ಆಕ್ರೋಶ

ದೇವನಹಳ್ಳಿ ತಾಲೂಕು ಮುದುಗುರ್ಕಿ ಸಮೀಪ ಇರುವ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನೂರಾರು ವಿದ್ಯಾರ್ಥಿಗಳ ಕೋಟಿಗಟ್ಟಲೇ ಹಣವನ್ನು ಕಾಲೇಜು ಆಡಳಿತ ಮಂಡಳಿ ಲಪಾಟಾಯಿಸಿರುವ ಆರೋಪ ಕೇಳಿಬಂದಿದೆ.

ಇದರ ವಿರುದ್ಧ ಈಗ ವಿದ್ಯಾರ್ಥಿಗಳು ಬೀದಿಗೆ ಬಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಳಕಿಗೆ ಬಂದಿದೆ.

ಹೌದು, ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಸೆಳೆಯುವ ದೃಷ್ಟಿಯಿಂದ ಗೂಗಲ್ ರೇಟಿಂಗ್ ಅಳವಡಿಸಿ ದೇಶದ ಮೂಲೆಮೂಲೆಗಳಿಂದ ವಿದ್ಯಾರ್ಥಿಗಳನ್ನು ತನ್ನತ್ತಾ ಸೆಳೆದುಕೊಂಡು ಉತ್ತಮ ಪ್ಲೇಸ್ ಮೆಂಟ್ ವಿದೇಶಿ ಪ್ರವಾಸ ಎಂದು ವಾರ್ಷಿಕವಾಗಿ ಲಕ್ಷಲಕ್ಷ ಹಣವನ್ನು ವಿದ್ಯಾರ್ಥಿಗಳಿಂದ ಪಡೆದುಕೊಂಡು ಕೊನೆಯದಾಗಿ ಯಾವುದೇ ಸೌಲಭ್ಯಗಳನ್ನು ಕೊಡದೇ ವಿದ್ಯಾರ್ಥಿಗಳಿಗೆ ವಂಚನೆ ಮಾಡಲು ಮುಂದಾಗುತ್ತಿದೆ ಎಂಬ ಆರೋಪ ಬಂದಿದೆ.

ಇನ್ನೂ, ವಾರ್ಷಿಕವಾಗಿ ಒಬ್ಬ ವಿದ್ಯಾರ್ಥಿಯಿಂದ 7.90 ಲಕ್ಷ ಹಣವನ್ನು ಪಡೆದುಕೊಂಡು ವಿದ್ಯಾಭ್ಯಾಸವನ್ನು ನೀಡಲು ಮುಂದಾಗುತ್ತಿದೆ. ಆದರೆ, ಪರೀಕ್ಷೆ ಸಮಯದಲ್ಲಿ ಹಣವನ್ನು ಕಟ್ಟದಿದ್ದರೆ ಬೆದರಿಕೆಗಳನ್ನು ಹಾಕಿ ವಿದ್ಯಾರ್ಥಿಗಳಿಂದ ಹಣವನ್ನು ಪಡೆದುಕೊಂಡು ಕೊಟ್ಟ ಮಾತಿನಂತೆ ಒಳ್ಳೆಯ ಕಂಪನಿಗಳಲ್ಲಿ ಪ್ಲೇಸ್ ಮೆಂಟ್ ಸಿಗದೆ, ಕಾಲೇಜು ಆಡಳಿತ ಮಂಡಳಿ ಹೇಳಿರುವಂತೆ ಮಲೇಶಿಯಾ ಪ್ರವಾಸವು ಇಲ್ಲದೆ ವಿದ್ಯಾರ್ಥಿಗಳಿಗೆ ಬಾರೀ ಮೋಸ ಮಾಡಿ ಕೊಟೀಗಟ್ಟಲೇ ಹಣವನ್ನು ಲಪಟಾಯಿಸಿ ನಮಗೇನು ಸಂಬಂಧವಿಲ್ಲವೆಂಬಂತೆ ವರ್ತನೆ ಮಾಡುತ್ತಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ ತಿಗಳಿನಲ್ಲಿ ನ್ಯಾಕ್ ಆಕಾಡಮಿ ಸಿಬ್ಬಂದಿ ಭೇಟಿ ನೀಡಿದ ವೇಳೆ ಕಾಲೇಜು ಆಡಳಿತ ಮಂಡಳಿ ವಂಚನೆ ಹಾಗೂ ಕಳಪೆ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳು ವರದಿ ಮಾಡಿದರು. ಅದರಂತೆ ನ್ಯಾಕ್ ಸಂಸ್ಥೆ ಕಾಲೇಜು ಆಡಳಿತ ಮಂಡಳಿಗೆ ನೋಟಿಸ್ ಸಹಾ ನೀಡಿ ವರದಿಯನ್ನು ನೀಡುವಂತೆ ಆದೇಶವನ್ನು ಹೊರಡಿಸಿದೆ. ಆದರೆ, ಇದೇ ಸಮಯದಲ್ಲಿ ವಿದ್ಯಾರ್ಥಿಗಳು ಸಹಾ ಕಾಲೇಜು ಆಡಳಿತ ಮಂಡಳಿ ಮಾಡುತ್ತಿರುವ ಮೋಸವನ್ನು ಅರಿತು ನಮಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇನ್ನೂ ಕಾಲೇಜಿನಲ್ಲಿ ಸುಮಾರು 170 ಕ್ಕೂ ವಿದ್ಯಾರ್ಥಿಗಳಿಂದ 8 ಲಕ್ಷದಿಂದ 12 ಲಕ್ಷದವರೆಗೆ ಹಣವನ್ನು ವಸೂಲಿ ಮಾಡಿಕೊಂಡಿದೆ ಆದರೆ, ಯಾವುದೇ ಸೌಲಭ್ಯಗಳನ್ನು ನೀಡದೆ ವಂಚನೆ ಮಾಡುತ್ತಿದ್ದು ಇದರಿಂದ ಸರಿಸುಮಾರು 10 ಕೋಟಿಗು ಅಧಿಕ ಹಣವನ್ನು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಮೋಸ ಮಾಡಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಒಟ್ಟಾರೇ ಕಾಲೇಜು ಆಡಳಿತ ವತಿಯಿಂದ ನೀಡಿರುವ ಭರವಸೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆಯನ್ನು ಕೊಟ್ಟಿದ್ದಾರೆ.

Ramesh Babu

Journalist

Recent Posts

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

2 hours ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

12 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

12 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

14 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

15 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

17 hours ago