ದೇವನಹಳ್ಳಿ ತಾಲೂಕು ಮುದುಗುರ್ಕಿ ಸಮೀಪ ಇರುವ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನೂರಾರು ವಿದ್ಯಾರ್ಥಿಗಳ ಕೋಟಿಗಟ್ಟಲೇ ಹಣವನ್ನು ಕಾಲೇಜು ಆಡಳಿತ ಮಂಡಳಿ ಲಪಾಟಾಯಿಸಿರುವ ಆರೋಪ ಕೇಳಿಬಂದಿದೆ.
ಇದರ ವಿರುದ್ಧ ಈಗ ವಿದ್ಯಾರ್ಥಿಗಳು ಬೀದಿಗೆ ಬಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಳಕಿಗೆ ಬಂದಿದೆ.
ಹೌದು, ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಸೆಳೆಯುವ ದೃಷ್ಟಿಯಿಂದ ಗೂಗಲ್ ರೇಟಿಂಗ್ ಅಳವಡಿಸಿ ದೇಶದ ಮೂಲೆಮೂಲೆಗಳಿಂದ ವಿದ್ಯಾರ್ಥಿಗಳನ್ನು ತನ್ನತ್ತಾ ಸೆಳೆದುಕೊಂಡು ಉತ್ತಮ ಪ್ಲೇಸ್ ಮೆಂಟ್ ವಿದೇಶಿ ಪ್ರವಾಸ ಎಂದು ವಾರ್ಷಿಕವಾಗಿ ಲಕ್ಷಲಕ್ಷ ಹಣವನ್ನು ವಿದ್ಯಾರ್ಥಿಗಳಿಂದ ಪಡೆದುಕೊಂಡು ಕೊನೆಯದಾಗಿ ಯಾವುದೇ ಸೌಲಭ್ಯಗಳನ್ನು ಕೊಡದೇ ವಿದ್ಯಾರ್ಥಿಗಳಿಗೆ ವಂಚನೆ ಮಾಡಲು ಮುಂದಾಗುತ್ತಿದೆ ಎಂಬ ಆರೋಪ ಬಂದಿದೆ.
ಇನ್ನೂ, ವಾರ್ಷಿಕವಾಗಿ ಒಬ್ಬ ವಿದ್ಯಾರ್ಥಿಯಿಂದ 7.90 ಲಕ್ಷ ಹಣವನ್ನು ಪಡೆದುಕೊಂಡು ವಿದ್ಯಾಭ್ಯಾಸವನ್ನು ನೀಡಲು ಮುಂದಾಗುತ್ತಿದೆ. ಆದರೆ, ಪರೀಕ್ಷೆ ಸಮಯದಲ್ಲಿ ಹಣವನ್ನು ಕಟ್ಟದಿದ್ದರೆ ಬೆದರಿಕೆಗಳನ್ನು ಹಾಕಿ ವಿದ್ಯಾರ್ಥಿಗಳಿಂದ ಹಣವನ್ನು ಪಡೆದುಕೊಂಡು ಕೊಟ್ಟ ಮಾತಿನಂತೆ ಒಳ್ಳೆಯ ಕಂಪನಿಗಳಲ್ಲಿ ಪ್ಲೇಸ್ ಮೆಂಟ್ ಸಿಗದೆ, ಕಾಲೇಜು ಆಡಳಿತ ಮಂಡಳಿ ಹೇಳಿರುವಂತೆ ಮಲೇಶಿಯಾ ಪ್ರವಾಸವು ಇಲ್ಲದೆ ವಿದ್ಯಾರ್ಥಿಗಳಿಗೆ ಬಾರೀ ಮೋಸ ಮಾಡಿ ಕೊಟೀಗಟ್ಟಲೇ ಹಣವನ್ನು ಲಪಟಾಯಿಸಿ ನಮಗೇನು ಸಂಬಂಧವಿಲ್ಲವೆಂಬಂತೆ ವರ್ತನೆ ಮಾಡುತ್ತಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಕಳೆದ ತಿಗಳಿನಲ್ಲಿ ನ್ಯಾಕ್ ಆಕಾಡಮಿ ಸಿಬ್ಬಂದಿ ಭೇಟಿ ನೀಡಿದ ವೇಳೆ ಕಾಲೇಜು ಆಡಳಿತ ಮಂಡಳಿ ವಂಚನೆ ಹಾಗೂ ಕಳಪೆ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳು ವರದಿ ಮಾಡಿದರು. ಅದರಂತೆ ನ್ಯಾಕ್ ಸಂಸ್ಥೆ ಕಾಲೇಜು ಆಡಳಿತ ಮಂಡಳಿಗೆ ನೋಟಿಸ್ ಸಹಾ ನೀಡಿ ವರದಿಯನ್ನು ನೀಡುವಂತೆ ಆದೇಶವನ್ನು ಹೊರಡಿಸಿದೆ. ಆದರೆ, ಇದೇ ಸಮಯದಲ್ಲಿ ವಿದ್ಯಾರ್ಥಿಗಳು ಸಹಾ ಕಾಲೇಜು ಆಡಳಿತ ಮಂಡಳಿ ಮಾಡುತ್ತಿರುವ ಮೋಸವನ್ನು ಅರಿತು ನಮಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಇನ್ನೂ ಕಾಲೇಜಿನಲ್ಲಿ ಸುಮಾರು 170 ಕ್ಕೂ ವಿದ್ಯಾರ್ಥಿಗಳಿಂದ 8 ಲಕ್ಷದಿಂದ 12 ಲಕ್ಷದವರೆಗೆ ಹಣವನ್ನು ವಸೂಲಿ ಮಾಡಿಕೊಂಡಿದೆ ಆದರೆ, ಯಾವುದೇ ಸೌಲಭ್ಯಗಳನ್ನು ನೀಡದೆ ವಂಚನೆ ಮಾಡುತ್ತಿದ್ದು ಇದರಿಂದ ಸರಿಸುಮಾರು 10 ಕೋಟಿಗು ಅಧಿಕ ಹಣವನ್ನು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಮೋಸ ಮಾಡಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಒಟ್ಟಾರೇ ಕಾಲೇಜು ಆಡಳಿತ ವತಿಯಿಂದ ನೀಡಿರುವ ಭರವಸೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆಯನ್ನು ಕೊಟ್ಟಿದ್ದಾರೆ.
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…
ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…
ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…
ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…
ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…