ಗೂಗಲ್ ರೇಟಿಂಗ್ ನಿಂದ ವಿದ್ಯಾರ್ಥಿಗಳನ್ನು ತನ್ನತ್ತಾ ಸೆಳೆದುಕೊಂಡ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಕಾಲೇಜ್..?: ಪ್ಲೇಸ್ ಮೆಂಟ್, ವಿದೇಶಿ ಪ್ರವಾಸ ಆಮಿಷ: ವಿದ್ಯಾರ್ಥಿಗಳಿಂದ ಲಕ್ಷಲಕ್ಷ ಹಣ ಪೀಕಿ ಕೊನೆಗೆ ಯಾವ ಸೌಲಭ್ಯ ನೀಡದೇ ವಂಚನೆ: ವಿದ್ಯಾರ್ಥಿಗಳ ಆಕ್ರೋಶ

ದೇವನಹಳ್ಳಿ ತಾಲೂಕು ಮುದುಗುರ್ಕಿ ಸಮೀಪ ಇರುವ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನೂರಾರು ವಿದ್ಯಾರ್ಥಿಗಳ ಕೋಟಿಗಟ್ಟಲೇ ಹಣವನ್ನು ಕಾಲೇಜು ಆಡಳಿತ ಮಂಡಳಿ ಲಪಾಟಾಯಿಸಿರುವ ಆರೋಪ ಕೇಳಿಬಂದಿದೆ.

ಇದರ ವಿರುದ್ಧ ಈಗ ವಿದ್ಯಾರ್ಥಿಗಳು ಬೀದಿಗೆ ಬಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಳಕಿಗೆ ಬಂದಿದೆ.

ಹೌದು, ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಸೆಳೆಯುವ ದೃಷ್ಟಿಯಿಂದ ಗೂಗಲ್ ರೇಟಿಂಗ್ ಅಳವಡಿಸಿ ದೇಶದ ಮೂಲೆಮೂಲೆಗಳಿಂದ ವಿದ್ಯಾರ್ಥಿಗಳನ್ನು ತನ್ನತ್ತಾ ಸೆಳೆದುಕೊಂಡು ಉತ್ತಮ ಪ್ಲೇಸ್ ಮೆಂಟ್ ವಿದೇಶಿ ಪ್ರವಾಸ ಎಂದು ವಾರ್ಷಿಕವಾಗಿ ಲಕ್ಷಲಕ್ಷ ಹಣವನ್ನು ವಿದ್ಯಾರ್ಥಿಗಳಿಂದ ಪಡೆದುಕೊಂಡು ಕೊನೆಯದಾಗಿ ಯಾವುದೇ ಸೌಲಭ್ಯಗಳನ್ನು ಕೊಡದೇ ವಿದ್ಯಾರ್ಥಿಗಳಿಗೆ ವಂಚನೆ ಮಾಡಲು ಮುಂದಾಗುತ್ತಿದೆ ಎಂಬ ಆರೋಪ ಬಂದಿದೆ.

ಇನ್ನೂ, ವಾರ್ಷಿಕವಾಗಿ ಒಬ್ಬ ವಿದ್ಯಾರ್ಥಿಯಿಂದ 7.90 ಲಕ್ಷ ಹಣವನ್ನು ಪಡೆದುಕೊಂಡು ವಿದ್ಯಾಭ್ಯಾಸವನ್ನು ನೀಡಲು ಮುಂದಾಗುತ್ತಿದೆ. ಆದರೆ, ಪರೀಕ್ಷೆ ಸಮಯದಲ್ಲಿ ಹಣವನ್ನು ಕಟ್ಟದಿದ್ದರೆ ಬೆದರಿಕೆಗಳನ್ನು ಹಾಕಿ ವಿದ್ಯಾರ್ಥಿಗಳಿಂದ ಹಣವನ್ನು ಪಡೆದುಕೊಂಡು ಕೊಟ್ಟ ಮಾತಿನಂತೆ ಒಳ್ಳೆಯ ಕಂಪನಿಗಳಲ್ಲಿ ಪ್ಲೇಸ್ ಮೆಂಟ್ ಸಿಗದೆ, ಕಾಲೇಜು ಆಡಳಿತ ಮಂಡಳಿ ಹೇಳಿರುವಂತೆ ಮಲೇಶಿಯಾ ಪ್ರವಾಸವು ಇಲ್ಲದೆ ವಿದ್ಯಾರ್ಥಿಗಳಿಗೆ ಬಾರೀ ಮೋಸ ಮಾಡಿ ಕೊಟೀಗಟ್ಟಲೇ ಹಣವನ್ನು ಲಪಟಾಯಿಸಿ ನಮಗೇನು ಸಂಬಂಧವಿಲ್ಲವೆಂಬಂತೆ ವರ್ತನೆ ಮಾಡುತ್ತಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ ತಿಗಳಿನಲ್ಲಿ ನ್ಯಾಕ್ ಆಕಾಡಮಿ ಸಿಬ್ಬಂದಿ ಭೇಟಿ ನೀಡಿದ ವೇಳೆ ಕಾಲೇಜು ಆಡಳಿತ ಮಂಡಳಿ ವಂಚನೆ ಹಾಗೂ ಕಳಪೆ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳು ವರದಿ ಮಾಡಿದರು. ಅದರಂತೆ ನ್ಯಾಕ್ ಸಂಸ್ಥೆ ಕಾಲೇಜು ಆಡಳಿತ ಮಂಡಳಿಗೆ ನೋಟಿಸ್ ಸಹಾ ನೀಡಿ ವರದಿಯನ್ನು ನೀಡುವಂತೆ ಆದೇಶವನ್ನು ಹೊರಡಿಸಿದೆ. ಆದರೆ, ಇದೇ ಸಮಯದಲ್ಲಿ ವಿದ್ಯಾರ್ಥಿಗಳು ಸಹಾ ಕಾಲೇಜು ಆಡಳಿತ ಮಂಡಳಿ ಮಾಡುತ್ತಿರುವ ಮೋಸವನ್ನು ಅರಿತು ನಮಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇನ್ನೂ ಕಾಲೇಜಿನಲ್ಲಿ ಸುಮಾರು 170 ಕ್ಕೂ ವಿದ್ಯಾರ್ಥಿಗಳಿಂದ 8 ಲಕ್ಷದಿಂದ 12 ಲಕ್ಷದವರೆಗೆ ಹಣವನ್ನು ವಸೂಲಿ ಮಾಡಿಕೊಂಡಿದೆ ಆದರೆ, ಯಾವುದೇ ಸೌಲಭ್ಯಗಳನ್ನು ನೀಡದೆ ವಂಚನೆ ಮಾಡುತ್ತಿದ್ದು ಇದರಿಂದ ಸರಿಸುಮಾರು 10 ಕೋಟಿಗು ಅಧಿಕ ಹಣವನ್ನು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಮೋಸ ಮಾಡಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಒಟ್ಟಾರೇ ಕಾಲೇಜು ಆಡಳಿತ ವತಿಯಿಂದ ನೀಡಿರುವ ಭರವಸೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆಯನ್ನು ಕೊಟ್ಟಿದ್ದಾರೆ.

Ramesh Babu

Journalist

Recent Posts

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

17 hours ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

18 hours ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

1 day ago

ಫುಟ್ ಪಾತ್…… (ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ….)

Footpath...... ಫುಟ್ ಪಾತ್...... ( ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ....) ಫುಟ್ ಪಾತ್ ಎಂದು ಆಂಗ್ಲ ಭಾಷೆಯಲ್ಲಿ ಕರೆಯಲ್ಪಡುವ…

1 day ago

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿ ವಿಸ್ತರಣೆ

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಜೊತೆಗೆ, ಈಗಾಗಲೇ…

2 days ago

ಪೂರ್ವ ವೈಷಮ್ಯದ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

ದೊಡ್ಡಬಳ್ಳಾಪುರ: 2019ರ ಜನವರಿಯಲ್ಲಿ ದೊಡ್ಡಬಳ್ಳಾಪುರ ನಗರದ ಕೊರಚರಹಟ್ಟಿಯ ಪ್ರೀತಿ ವೈನ್ಸ್ ವೃತ್ತದ ಸಮೀಪ ನಡೆದಿದ್ದ ಗಂಗಾಧರ್ ಅಲಿಯಾಸ್ ದಾಸ್ ಕೊಲೆ…

2 days ago