ಗೂಗಲ್ ರೇಟಿಂಗ್ ನಿಂದ ವಿದ್ಯಾರ್ಥಿಗಳನ್ನು ತನ್ನತ್ತಾ ಸೆಳೆದುಕೊಂಡ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಕಾಲೇಜ್..?: ಪ್ಲೇಸ್ ಮೆಂಟ್, ವಿದೇಶಿ ಪ್ರವಾಸ ಆಮಿಷ: ವಿದ್ಯಾರ್ಥಿಗಳಿಂದ ಲಕ್ಷಲಕ್ಷ ಹಣ ಪೀಕಿ ಕೊನೆಗೆ ಯಾವ ಸೌಲಭ್ಯ ನೀಡದೇ ವಂಚನೆ: ವಿದ್ಯಾರ್ಥಿಗಳ ಆಕ್ರೋಶ

ದೇವನಹಳ್ಳಿ ತಾಲೂಕು ಮುದುಗುರ್ಕಿ ಸಮೀಪ ಇರುವ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನೂರಾರು ವಿದ್ಯಾರ್ಥಿಗಳ ಕೋಟಿಗಟ್ಟಲೇ ಹಣವನ್ನು ಕಾಲೇಜು ಆಡಳಿತ ಮಂಡಳಿ ಲಪಾಟಾಯಿಸಿರುವ ಆರೋಪ ಕೇಳಿಬಂದಿದೆ.

ಇದರ ವಿರುದ್ಧ ಈಗ ವಿದ್ಯಾರ್ಥಿಗಳು ಬೀದಿಗೆ ಬಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಳಕಿಗೆ ಬಂದಿದೆ.

ಹೌದು, ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಸೆಳೆಯುವ ದೃಷ್ಟಿಯಿಂದ ಗೂಗಲ್ ರೇಟಿಂಗ್ ಅಳವಡಿಸಿ ದೇಶದ ಮೂಲೆಮೂಲೆಗಳಿಂದ ವಿದ್ಯಾರ್ಥಿಗಳನ್ನು ತನ್ನತ್ತಾ ಸೆಳೆದುಕೊಂಡು ಉತ್ತಮ ಪ್ಲೇಸ್ ಮೆಂಟ್ ವಿದೇಶಿ ಪ್ರವಾಸ ಎಂದು ವಾರ್ಷಿಕವಾಗಿ ಲಕ್ಷಲಕ್ಷ ಹಣವನ್ನು ವಿದ್ಯಾರ್ಥಿಗಳಿಂದ ಪಡೆದುಕೊಂಡು ಕೊನೆಯದಾಗಿ ಯಾವುದೇ ಸೌಲಭ್ಯಗಳನ್ನು ಕೊಡದೇ ವಿದ್ಯಾರ್ಥಿಗಳಿಗೆ ವಂಚನೆ ಮಾಡಲು ಮುಂದಾಗುತ್ತಿದೆ ಎಂಬ ಆರೋಪ ಬಂದಿದೆ.

ಇನ್ನೂ, ವಾರ್ಷಿಕವಾಗಿ ಒಬ್ಬ ವಿದ್ಯಾರ್ಥಿಯಿಂದ 7.90 ಲಕ್ಷ ಹಣವನ್ನು ಪಡೆದುಕೊಂಡು ವಿದ್ಯಾಭ್ಯಾಸವನ್ನು ನೀಡಲು ಮುಂದಾಗುತ್ತಿದೆ. ಆದರೆ, ಪರೀಕ್ಷೆ ಸಮಯದಲ್ಲಿ ಹಣವನ್ನು ಕಟ್ಟದಿದ್ದರೆ ಬೆದರಿಕೆಗಳನ್ನು ಹಾಕಿ ವಿದ್ಯಾರ್ಥಿಗಳಿಂದ ಹಣವನ್ನು ಪಡೆದುಕೊಂಡು ಕೊಟ್ಟ ಮಾತಿನಂತೆ ಒಳ್ಳೆಯ ಕಂಪನಿಗಳಲ್ಲಿ ಪ್ಲೇಸ್ ಮೆಂಟ್ ಸಿಗದೆ, ಕಾಲೇಜು ಆಡಳಿತ ಮಂಡಳಿ ಹೇಳಿರುವಂತೆ ಮಲೇಶಿಯಾ ಪ್ರವಾಸವು ಇಲ್ಲದೆ ವಿದ್ಯಾರ್ಥಿಗಳಿಗೆ ಬಾರೀ ಮೋಸ ಮಾಡಿ ಕೊಟೀಗಟ್ಟಲೇ ಹಣವನ್ನು ಲಪಟಾಯಿಸಿ ನಮಗೇನು ಸಂಬಂಧವಿಲ್ಲವೆಂಬಂತೆ ವರ್ತನೆ ಮಾಡುತ್ತಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ ತಿಗಳಿನಲ್ಲಿ ನ್ಯಾಕ್ ಆಕಾಡಮಿ ಸಿಬ್ಬಂದಿ ಭೇಟಿ ನೀಡಿದ ವೇಳೆ ಕಾಲೇಜು ಆಡಳಿತ ಮಂಡಳಿ ವಂಚನೆ ಹಾಗೂ ಕಳಪೆ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳು ವರದಿ ಮಾಡಿದರು. ಅದರಂತೆ ನ್ಯಾಕ್ ಸಂಸ್ಥೆ ಕಾಲೇಜು ಆಡಳಿತ ಮಂಡಳಿಗೆ ನೋಟಿಸ್ ಸಹಾ ನೀಡಿ ವರದಿಯನ್ನು ನೀಡುವಂತೆ ಆದೇಶವನ್ನು ಹೊರಡಿಸಿದೆ. ಆದರೆ, ಇದೇ ಸಮಯದಲ್ಲಿ ವಿದ್ಯಾರ್ಥಿಗಳು ಸಹಾ ಕಾಲೇಜು ಆಡಳಿತ ಮಂಡಳಿ ಮಾಡುತ್ತಿರುವ ಮೋಸವನ್ನು ಅರಿತು ನಮಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇನ್ನೂ ಕಾಲೇಜಿನಲ್ಲಿ ಸುಮಾರು 170 ಕ್ಕೂ ವಿದ್ಯಾರ್ಥಿಗಳಿಂದ 8 ಲಕ್ಷದಿಂದ 12 ಲಕ್ಷದವರೆಗೆ ಹಣವನ್ನು ವಸೂಲಿ ಮಾಡಿಕೊಂಡಿದೆ ಆದರೆ, ಯಾವುದೇ ಸೌಲಭ್ಯಗಳನ್ನು ನೀಡದೆ ವಂಚನೆ ಮಾಡುತ್ತಿದ್ದು ಇದರಿಂದ ಸರಿಸುಮಾರು 10 ಕೋಟಿಗು ಅಧಿಕ ಹಣವನ್ನು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಮೋಸ ಮಾಡಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಒಟ್ಟಾರೇ ಕಾಲೇಜು ಆಡಳಿತ ವತಿಯಿಂದ ನೀಡಿರುವ ಭರವಸೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆಯನ್ನು ಕೊಟ್ಟಿದ್ದಾರೆ.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

7 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

8 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

8 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

10 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

13 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

14 hours ago