ದೇವನಹಳ್ಳಿ ತಾಲೂಕು ಮುದುಗುರ್ಕಿ ಸಮೀಪ ಇರುವ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನೂರಾರು ವಿದ್ಯಾರ್ಥಿಗಳ ಕೋಟಿಗಟ್ಟಲೇ ಹಣವನ್ನು ಕಾಲೇಜು ಆಡಳಿತ ಮಂಡಳಿ ಲಪಾಟಾಯಿಸಿರುವ ಆರೋಪ ಕೇಳಿಬಂದಿದೆ.
ಇದರ ವಿರುದ್ಧ ಈಗ ವಿದ್ಯಾರ್ಥಿಗಳು ಬೀದಿಗೆ ಬಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಳಕಿಗೆ ಬಂದಿದೆ.
ಹೌದು, ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಸೆಳೆಯುವ ದೃಷ್ಟಿಯಿಂದ ಗೂಗಲ್ ರೇಟಿಂಗ್ ಅಳವಡಿಸಿ ದೇಶದ ಮೂಲೆಮೂಲೆಗಳಿಂದ ವಿದ್ಯಾರ್ಥಿಗಳನ್ನು ತನ್ನತ್ತಾ ಸೆಳೆದುಕೊಂಡು ಉತ್ತಮ ಪ್ಲೇಸ್ ಮೆಂಟ್ ವಿದೇಶಿ ಪ್ರವಾಸ ಎಂದು ವಾರ್ಷಿಕವಾಗಿ ಲಕ್ಷಲಕ್ಷ ಹಣವನ್ನು ವಿದ್ಯಾರ್ಥಿಗಳಿಂದ ಪಡೆದುಕೊಂಡು ಕೊನೆಯದಾಗಿ ಯಾವುದೇ ಸೌಲಭ್ಯಗಳನ್ನು ಕೊಡದೇ ವಿದ್ಯಾರ್ಥಿಗಳಿಗೆ ವಂಚನೆ ಮಾಡಲು ಮುಂದಾಗುತ್ತಿದೆ ಎಂಬ ಆರೋಪ ಬಂದಿದೆ.
ಇನ್ನೂ, ವಾರ್ಷಿಕವಾಗಿ ಒಬ್ಬ ವಿದ್ಯಾರ್ಥಿಯಿಂದ 7.90 ಲಕ್ಷ ಹಣವನ್ನು ಪಡೆದುಕೊಂಡು ವಿದ್ಯಾಭ್ಯಾಸವನ್ನು ನೀಡಲು ಮುಂದಾಗುತ್ತಿದೆ. ಆದರೆ, ಪರೀಕ್ಷೆ ಸಮಯದಲ್ಲಿ ಹಣವನ್ನು ಕಟ್ಟದಿದ್ದರೆ ಬೆದರಿಕೆಗಳನ್ನು ಹಾಕಿ ವಿದ್ಯಾರ್ಥಿಗಳಿಂದ ಹಣವನ್ನು ಪಡೆದುಕೊಂಡು ಕೊಟ್ಟ ಮಾತಿನಂತೆ ಒಳ್ಳೆಯ ಕಂಪನಿಗಳಲ್ಲಿ ಪ್ಲೇಸ್ ಮೆಂಟ್ ಸಿಗದೆ, ಕಾಲೇಜು ಆಡಳಿತ ಮಂಡಳಿ ಹೇಳಿರುವಂತೆ ಮಲೇಶಿಯಾ ಪ್ರವಾಸವು ಇಲ್ಲದೆ ವಿದ್ಯಾರ್ಥಿಗಳಿಗೆ ಬಾರೀ ಮೋಸ ಮಾಡಿ ಕೊಟೀಗಟ್ಟಲೇ ಹಣವನ್ನು ಲಪಟಾಯಿಸಿ ನಮಗೇನು ಸಂಬಂಧವಿಲ್ಲವೆಂಬಂತೆ ವರ್ತನೆ ಮಾಡುತ್ತಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಕಳೆದ ತಿಗಳಿನಲ್ಲಿ ನ್ಯಾಕ್ ಆಕಾಡಮಿ ಸಿಬ್ಬಂದಿ ಭೇಟಿ ನೀಡಿದ ವೇಳೆ ಕಾಲೇಜು ಆಡಳಿತ ಮಂಡಳಿ ವಂಚನೆ ಹಾಗೂ ಕಳಪೆ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳು ವರದಿ ಮಾಡಿದರು. ಅದರಂತೆ ನ್ಯಾಕ್ ಸಂಸ್ಥೆ ಕಾಲೇಜು ಆಡಳಿತ ಮಂಡಳಿಗೆ ನೋಟಿಸ್ ಸಹಾ ನೀಡಿ ವರದಿಯನ್ನು ನೀಡುವಂತೆ ಆದೇಶವನ್ನು ಹೊರಡಿಸಿದೆ. ಆದರೆ, ಇದೇ ಸಮಯದಲ್ಲಿ ವಿದ್ಯಾರ್ಥಿಗಳು ಸಹಾ ಕಾಲೇಜು ಆಡಳಿತ ಮಂಡಳಿ ಮಾಡುತ್ತಿರುವ ಮೋಸವನ್ನು ಅರಿತು ನಮಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ ರೀಜನಲ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಇನ್ನೂ ಕಾಲೇಜಿನಲ್ಲಿ ಸುಮಾರು 170 ಕ್ಕೂ ವಿದ್ಯಾರ್ಥಿಗಳಿಂದ 8 ಲಕ್ಷದಿಂದ 12 ಲಕ್ಷದವರೆಗೆ ಹಣವನ್ನು ವಸೂಲಿ ಮಾಡಿಕೊಂಡಿದೆ ಆದರೆ, ಯಾವುದೇ ಸೌಲಭ್ಯಗಳನ್ನು ನೀಡದೆ ವಂಚನೆ ಮಾಡುತ್ತಿದ್ದು ಇದರಿಂದ ಸರಿಸುಮಾರು 10 ಕೋಟಿಗು ಅಧಿಕ ಹಣವನ್ನು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಮೋಸ ಮಾಡಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಒಟ್ಟಾರೇ ಕಾಲೇಜು ಆಡಳಿತ ವತಿಯಿಂದ ನೀಡಿರುವ ಭರವಸೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆಯನ್ನು ಕೊಟ್ಟಿದ್ದಾರೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…