ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರೆಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಆಗಸ್ಟ್ 5ರಂದು ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯನವರಿಂದ ಚಾಲನೆ ದೊರೆಯಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಮಾಹಿತಿ ನೀಡಿದ್ದಾರೆ.
ಜುಲೈ 1 ರಿಂದ ಬಳಸಿದ ವಿದ್ಯುತ್ಗೆ ಗೃಹಜ್ಯೋತಿ ಯೋಜನೆಯಡಿ ಶುಲ್ಕ ವಿನಾಯಿತಿ ನೀಡಲಾಗುತ್ತಿದೆ. ಗೃಹಜ್ಯೋತಿ ಯೋಜನೆಯಡಿ ಈವರೆಗೂ 1.40 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದಾರೆ. ಜುಲೈ ತಿಂಗಳಿನ ಬಿಲ್ನಲ್ಲಿ ಒಂದಿಷ್ಟು ಗೊಂದಲವಿದೆ. ಜೂನ್ನಲ್ಲಿ ಬಳಕೆಯಾದ ವಿದ್ಯುತ್ಗೆ ಜುಲೈನಲ್ಲಿ ಬಿಲ್ ನೀಡಲಾಗಿದೆ ಎಂದರು.
ಜುಲೈ 1 ರಿಂದ 15 ರವರೆಗೆ ಬಳಸಿದ ವಿದ್ಯುತ್ ಸೇರಿ ಬಿಲ್ ನೀಡಿರುವುದರಿಂದ ಗ್ರಾಹಕರು ಹಣ ಪಾವತಿ ಮಾಡಿದ್ದಾರೆ. ಯೋಜನೆ ಜುಲೈ 1 ರಿಂದ ಜಾರಿಯಾಗಿರುವುದರಿಂದ ಗ್ರಾಹಕರು ಪಾವತಿಸಿದ 15 ದಿನಗಳ ವಿದ್ಯುತ್ ಶುಲ್ಕವನ್ನು ಮರು ಪಾವತಿಸಲಾಗುವುದು ಎಂದು ಗ್ರಾಹಕರ ವಿದ್ಯುತ್ ಬಾಕಿಗೆ ಇದನ್ನು ಹೊಂದಾಣಿಕೆ ಮಾಡಿಕೊಳ್ಳಲಾಗುತ್ತದೆ. ಒಂದು ವೇಳೆ ಯಾವುದೇ ಬಾಕಿ ಉಳಿದಿಲ್ಲವಾದರೆ, ಪಾವತಿಸಿದ ಹಣವನ್ನು ಗ್ರಾಹಕರಿಗೆ ಮರು ನಗದೀಕರಿಸುವುದಾಗಿ ಎಂದು ಹೇಳಿದ್ದಾರೆ.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…