Categories: ರಾಜ್ಯ

ಗೃಹಜ್ಯೋತಿ: ಆಗಸ್ಟ್ 5ರಂದು ಗೃಹಜ್ಯೋತಿ ಗ್ಯಾರೆಂಟಿಗೆ ಚಾಲನೆ- ಇಂಧನ ಸಚಿವ ಕೆ.ಜೆ.ಜಾರ್ಜ್

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರೆಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಆಗಸ್ಟ್ 5ರಂದು ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯನವರಿಂದ ಚಾಲನೆ ದೊರೆಯಲಿದೆ ಎಂದು ಇಂಧನ ಸಚಿವ ಕೆ‌.ಜೆ.ಜಾರ್ಜ್ ಮಾಹಿತಿ ನೀಡಿದ್ದಾರೆ.

ಜುಲೈ 1 ರಿಂದ ಬಳಸಿದ ವಿದ್ಯುತ್‍ಗೆ ಗೃಹಜ್ಯೋತಿ ಯೋಜನೆಯಡಿ ಶುಲ್ಕ ವಿನಾಯಿತಿ ನೀಡಲಾಗುತ್ತಿದೆ. ಗೃಹಜ್ಯೋತಿ ಯೋಜನೆಯಡಿ ಈವರೆಗೂ 1.40 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದಾರೆ. ಜುಲೈ ತಿಂಗಳಿನ ಬಿಲ್‍ನಲ್ಲಿ ಒಂದಿಷ್ಟು ಗೊಂದಲವಿದೆ. ಜೂನ್‍ನಲ್ಲಿ ಬಳಕೆಯಾದ ವಿದ್ಯುತ್‍ಗೆ ಜುಲೈನಲ್ಲಿ ಬಿಲ್ ನೀಡಲಾಗಿದೆ ಎಂದರು.

ಜುಲೈ 1 ರಿಂದ 15 ರವರೆಗೆ ಬಳಸಿದ ವಿದ್ಯುತ್ ಸೇರಿ ಬಿಲ್ ನೀಡಿರುವುದರಿಂದ ಗ್ರಾಹಕರು ಹಣ ಪಾವತಿ ಮಾಡಿದ್ದಾರೆ. ಯೋಜನೆ ಜುಲೈ 1 ರಿಂದ ಜಾರಿಯಾಗಿರುವುದರಿಂದ ಗ್ರಾಹಕರು ಪಾವತಿಸಿದ 15 ದಿನಗಳ ವಿದ್ಯುತ್ ಶುಲ್ಕವನ್ನು ಮರು ಪಾವತಿಸಲಾಗುವುದು ಎಂದು ಗ್ರಾಹಕರ ವಿದ್ಯುತ್ ಬಾಕಿಗೆ ಇದನ್ನು ಹೊಂದಾಣಿಕೆ ಮಾಡಿಕೊಳ್ಳಲಾಗುತ್ತದೆ. ಒಂದು ವೇಳೆ ಯಾವುದೇ ಬಾಕಿ ಉಳಿದಿಲ್ಲವಾದರೆ, ಪಾವತಿಸಿದ ಹಣವನ್ನು ಗ್ರಾಹಕರಿಗೆ ಮರು ನಗದೀಕರಿಸುವುದಾಗಿ ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿ ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ಮಾಹಿತಿ ನೀಡಿದ್ದಾರೆ.

Ramesh Babu

Journalist

Recent Posts

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

3 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

5 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

18 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

18 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

19 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

1 day ago