ಗೃಹಜ್ಯೋತಿ ನೋಂದಣಿಗೆ ಸರ್ವರ್ ಸಮಸ್ಯೆ: ಬೆಸ್ಕಾಂ, ಗ್ರಾಮ ಒನ್, ಸೇವಾ ಕೇಂದ್ರಗಳಲ್ಲೂ ಸರ್ವರ್ ಡೌನ್!

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸ್ಕೀಂ ಗೃಹಜ್ಯೋತಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ತಾಂತ್ರಿಕ ತೊಡಕುಗಳ ಕಾರಣಗಳು ಜನರ ನಿದ್ದೆ ಕೆಡೆಸಿದೆ. ಬೆಸ್ಕಾಂ ಕಚೇರಿಗಳಲ್ಲಿ ಮಾತ್ರವಲ್ಲದೆ ಗ್ರಾಮ ಒನ್, ಸೈಬರ್ ಸೆಂಟರ್ ಕೇಂದ್ರಗಳಲ್ಲಿಯೂ ಸರ್ವರ್ ಡೌನ್ ಎಂಬ ನಾಮಫಲಕ ಹಾಕುವಂತಾಗಿದೆ.

ತಾಲ್ಲೂಕಿನ ನಗರ, ಗ್ರಾಮಾಂತರ ಸೇರಿ ವಿವಿಧೆಡೆ ಬೆಸ್ಕಾಂ ಕಚೇರಿಗಳಲ್ಲಿ ಆರಂಭಿಸಿರುವ ಒಟ್ಟು 6 ಕೌಂಟರ್ ಗಳ ಮುಂದೆ ಜನರು ತಮ್ಮ ಆರ್.ಆರ್ ನಂಬರ್, ಆಧಾರ್ ಕಾರ್ಡ್ ಮತ್ತು ಮೊಬೈಲ್ ಸಂಖ್ಯೆ ಹಿಡಿದು ನೋಂದಾಯಿಸಲು ಕಾಯುತ್ತಾ ಹೈರಾಣಾಗುತ್ತಿದ್ದಾರೆ.

ತಾಲ್ಲೂಕಿನಾದ್ಯಂತ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಾಗಳು ಜನತೆ ಉತ್ಸುಕರಾಗಿದ್ದಾರೆ. ಕಳೆದ ಭಾನುವಾರದಂದು ನೋಂದಣಿ ಪ್ರಕ್ರಿಯೆಯು ಆರಂಭಗೊಂಡಿದ್ದು ಗುರುವಾರ ತನಕವೂ ಬೆಸ್ಕಾಂ ಕಚೇರಿ ಮತ್ತು ಸೇವಾ ಕೇಂದ್ರಗಳಲ್ಲಿ ನೋಂದಣಿಗೆ ಟೆಕ್ನಿಕಲ್ ಪ್ರಾಬ್ಲಂ ಎದುರಾಗುತ್ತಲೇ ಇದೆ. ಬೆಸ್ಕಾಂ ತಾಂತ್ರಿಕ ತಂಡವು ಸಮಸ್ಯೆಯನ್ನು ಪರಿಹರಿಸಲು ಕಾರ್ಯನಿರ್ವಹಿಸುತ್ತಿದೆ. ಇತ್ತ ಜನರು ಸರ್ವರ್ ಸರಿ ಹೋಗಬಹುದು ಎಂದು ಕೌಂಟರ್ ಮುಂದೆಯೆ ಗಂಟೆಗಟ್ಟಲೆ ಕಾದು ಕುಳಿತಿದ್ದಾರೆ. ಕೆಲವರು ನಾಳೆ ಬಂದರಾಯಿತು ಎಂದು ವಾಪಸ್ ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿದೆ.

ತಾಲ್ಲೂಕಿನಲ್ಲಿ ಈವರೆಗೆ ಒಂದು ಸಾವಿರಕ್ಕೂ ಹೆಚ್ಚು ಅರ್ಜಿಗಳು ನೋಂದಣಿಯಾಗಿವೆ. ಸರತಿ ಸಾಲಿನಲ್ಲಿ ನಿಂತು ಯೋಜನೆಗೆ ನೋಂದಾಯಿಸಿದವರು ನಿಟ್ಟುಸಿರು ಬಿಟ್ಟರೆ, ನೋಂದಣಿಗೆ ಕಾಯುತ್ತಿದ್ದವರು ಪರಿತಪಿಸುತ್ತಿದ್ದಾರೆ. ಇನ್ನೂ ನೋಂದಾಯಿಸುವ ಗ್ರಾಹಕರ ಮೊಬೈಲ್ ಗೆ ಒಟಿಪಿ ಬರುವುದರಿಂದ ಕೇಂದ್ರಗಳಲ್ಲಿ ಕಾಯಬೇಕಾದ ಅನಿವಾರ್ಯ ಎದುರಾಗಿದೆ. ಸೇವಾ ಸಿಂಧು ಕೇಂದ್ರಗಳಲ್ಲಿ ನೋಂದಾಯಿಸಲು ಬಂದ ಅನೇಕರು ಅಂಗಡಿ ಮಾಲೀಕರನ್ನು ಮನವಿ ಮಾಡಿಕೊಂಡು ದಾಖಲೆಗಳನ್ನು ಮತ್ತು ಮೊಬೈಲ್ ಸಂಖ್ಯೆ ನೀಡಿ ಸರ್ವರ್ ಸರಿಹೋದಾಗ ಅಪ್ ಲೋಡ್ ಮಾಡಿ ಎಂದು ಹೇಳಿ ಹೋಗುತ್ತಿದ್ದವರ ಸಂಖ್ಯೆ ಹೆಚ್ಚಾಗಿತ್ತು.

ಮಾರ್ಗಸೂಚಿ ಸರಳೀಕರಣಗೊಳಿಸಿ:

ಗೃಹಜ್ಯೋತಿ ಯೋಜನೆಯ 200 ಯೂನಿಟ್ ಬಳಕೆಯ ಹೆಚ್ಚಿನ ಫಲಾನುಭವಿಗಳು ಗ್ರಾಮೀಣ ಪ್ರದೇಶದವರೆ ಆಗಿದ್ದಾರೆ. ಹೀಗಾಗಿ ಗ್ರಾಮಾಂತರ ಭಾಗದಲ್ಲಿ ಸುಮಾರು 75 ವರ್ಷಗಳ ಹಿಂದೆ ವಿದ್ಯುತ್ ಸಂಪರ್ಕವನ್ನು ಪಡೆದ ಜನರು ವಯಸ್ಸು ಮತ್ತು ವಿವಿಧ ವಯೋಸಹಜ ಕಾರಣಗಳಿಂದಾಗಿ ಮೃತಪಟ್ಟಿದ್ದಾರೆ. ಅವರ ಅವಲಂಬಿತರು/ಕುಟುಂಬಸ್ಥರು ಆರ್.ಆರ್ ಸಂಖ್ಯೆಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳದೆ ನಿಧನರಾದವರ ಹೆಸರಿನಲ್ಲಿಯೇ ಪ್ರತಿ ತಿಂಗಳು ವಿದ್ಯುತ್ ಬಿಲ್ ಪಾವತಿ ಮಾಡಿಕೊಂಡು ಬಂದಿರುತ್ತಾರೆ. ಅಂತಹ ಜನರು ಈಗ ಗೃಹಜ್ಯೋತಿ ಯೋಜನೆಯ ಲಾಭಕ್ಕಾಗಿ ತಮ್ಮ ದಾಖಲೆಗಳನ್ನು ಸಲ್ಲಿಸುವ ಮೂಲಕ ಹೆಸರನ್ನು ಬದಲಾವಣೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದ್ದು, ಹೆಸರು ಬದಲಾವಣೆ ಬಳಿಕವಷ್ಟೆ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ರಾಜ್ಯಾದ್ಯಂತ ಏಕಕಾಲಕ್ಕೆ ಅರ್ಜಿಗಳ ಸಲ್ಲಿಕೆ ಕಾರ್ಯ ನಡೆಯುತ್ತಿರುವುದರಿಂದ ಸರ್ವರ್ ನಲ್ಲಿ ಸಮಸ್ಯೆ ಕಾಣುತ್ತಿದೆ. ನಿಧಾನಗತಿಯಲ್ಲಿ ನಡೆಯುತ್ತಿರುವ ನೋಂದಣಿ ಮುಂದಿನ ಒಂದು ವಾರದಲ್ಲಿ ಎಲ್ಲವೂ ಸರಿಹೋಗಲಿದೆ. ತಾಲ್ಲೂಕಿನಲ್ಲಿ ಮೇಳೆಕೋಟೆಯಲ್ಲಿ ಒಂದು ಕೌಂಟರ್, ನಗರದ ಬೆಸ್ಕಾಂ ಕಚೇರಿಯಲ್ಲಿ ಒಂದು ಕೌಂಟರ್, ಹಳೆ ಕೆಇಬಿ ಆಫೀಸ್ ನಲ್ಲಿ ಎರಡು ಕೌಂಟರ್ ಸೇರಿ ವಿವಿಧೆಡೆ ಒಟ್ಟು ಆರು ಕೌಂಟರ್ ಗಳನ್ನು ತೆರೆಯಲಾಗಿದೆ. ಗೃಹಜ್ಯೋತಿ ಯೋಜನೆ ನೋಂದಣಿ ಪ್ರಕ್ರಿಯೆ ಅತ್ಯಂತ ಸುಲಭವಾಗಿ ಸಾರ್ವಜನಿಕರು ತಮ್ಮ ಮೊಬೈಲ್ ಮುಖಾಂತರವೂ ನೋಂದಯಿಸಿಕೊಳ್ಳಬಹುದು. ತಾಲ್ಲೂಕಿನಲ್ಲಿ ಈವರೆಗೆ ಸುಮಾರು ೧೦೦೦ಕ್ಕೂ ಹೆಚ್ಚು ಮಂದಿ ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. ನೋಂದಣಿಗೆ ಯಾವುದೇ ಅಂತ್ಯದ ದಿನಾಂಕ ನಿಗದಿ ಇಲ್ಲ ಯಾವಾಗ ಬೇಕಾದರೂ ಅರ್ಜಿ ಸಲ್ಲಿಸಬಹುದು ಹೀಗಾಗಿ ಸಾರ್ವಜನಿಕರು ಆತಂಕ ಪಡದೆ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಬೆಸ್ಕಾಂ ಎಇಇ ಮಂಜುನಾಥ್ ಹೇಳಿದ್ದಾರೆ.

Ramesh Babu

Journalist

Recent Posts

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

3 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

6 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

7 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

22 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

23 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago