ಗೃಹಜ್ಯೋತಿ ನೋಂದಣಿಗೆ ಸರ್ವರ್ ಸಮಸ್ಯೆ: ಬೆಸ್ಕಾಂ, ಗ್ರಾಮ ಒನ್, ಸೇವಾ ಕೇಂದ್ರಗಳಲ್ಲೂ ಸರ್ವರ್ ಡೌನ್!

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸ್ಕೀಂ ಗೃಹಜ್ಯೋತಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ತಾಂತ್ರಿಕ ತೊಡಕುಗಳ ಕಾರಣಗಳು ಜನರ ನಿದ್ದೆ ಕೆಡೆಸಿದೆ. ಬೆಸ್ಕಾಂ ಕಚೇರಿಗಳಲ್ಲಿ ಮಾತ್ರವಲ್ಲದೆ ಗ್ರಾಮ ಒನ್, ಸೈಬರ್ ಸೆಂಟರ್ ಕೇಂದ್ರಗಳಲ್ಲಿಯೂ ಸರ್ವರ್ ಡೌನ್ ಎಂಬ ನಾಮಫಲಕ ಹಾಕುವಂತಾಗಿದೆ.

ತಾಲ್ಲೂಕಿನ ನಗರ, ಗ್ರಾಮಾಂತರ ಸೇರಿ ವಿವಿಧೆಡೆ ಬೆಸ್ಕಾಂ ಕಚೇರಿಗಳಲ್ಲಿ ಆರಂಭಿಸಿರುವ ಒಟ್ಟು 6 ಕೌಂಟರ್ ಗಳ ಮುಂದೆ ಜನರು ತಮ್ಮ ಆರ್.ಆರ್ ನಂಬರ್, ಆಧಾರ್ ಕಾರ್ಡ್ ಮತ್ತು ಮೊಬೈಲ್ ಸಂಖ್ಯೆ ಹಿಡಿದು ನೋಂದಾಯಿಸಲು ಕಾಯುತ್ತಾ ಹೈರಾಣಾಗುತ್ತಿದ್ದಾರೆ.

ತಾಲ್ಲೂಕಿನಾದ್ಯಂತ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಾಗಳು ಜನತೆ ಉತ್ಸುಕರಾಗಿದ್ದಾರೆ. ಕಳೆದ ಭಾನುವಾರದಂದು ನೋಂದಣಿ ಪ್ರಕ್ರಿಯೆಯು ಆರಂಭಗೊಂಡಿದ್ದು ಗುರುವಾರ ತನಕವೂ ಬೆಸ್ಕಾಂ ಕಚೇರಿ ಮತ್ತು ಸೇವಾ ಕೇಂದ್ರಗಳಲ್ಲಿ ನೋಂದಣಿಗೆ ಟೆಕ್ನಿಕಲ್ ಪ್ರಾಬ್ಲಂ ಎದುರಾಗುತ್ತಲೇ ಇದೆ. ಬೆಸ್ಕಾಂ ತಾಂತ್ರಿಕ ತಂಡವು ಸಮಸ್ಯೆಯನ್ನು ಪರಿಹರಿಸಲು ಕಾರ್ಯನಿರ್ವಹಿಸುತ್ತಿದೆ. ಇತ್ತ ಜನರು ಸರ್ವರ್ ಸರಿ ಹೋಗಬಹುದು ಎಂದು ಕೌಂಟರ್ ಮುಂದೆಯೆ ಗಂಟೆಗಟ್ಟಲೆ ಕಾದು ಕುಳಿತಿದ್ದಾರೆ. ಕೆಲವರು ನಾಳೆ ಬಂದರಾಯಿತು ಎಂದು ವಾಪಸ್ ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿದೆ.

ತಾಲ್ಲೂಕಿನಲ್ಲಿ ಈವರೆಗೆ ಒಂದು ಸಾವಿರಕ್ಕೂ ಹೆಚ್ಚು ಅರ್ಜಿಗಳು ನೋಂದಣಿಯಾಗಿವೆ. ಸರತಿ ಸಾಲಿನಲ್ಲಿ ನಿಂತು ಯೋಜನೆಗೆ ನೋಂದಾಯಿಸಿದವರು ನಿಟ್ಟುಸಿರು ಬಿಟ್ಟರೆ, ನೋಂದಣಿಗೆ ಕಾಯುತ್ತಿದ್ದವರು ಪರಿತಪಿಸುತ್ತಿದ್ದಾರೆ. ಇನ್ನೂ ನೋಂದಾಯಿಸುವ ಗ್ರಾಹಕರ ಮೊಬೈಲ್ ಗೆ ಒಟಿಪಿ ಬರುವುದರಿಂದ ಕೇಂದ್ರಗಳಲ್ಲಿ ಕಾಯಬೇಕಾದ ಅನಿವಾರ್ಯ ಎದುರಾಗಿದೆ. ಸೇವಾ ಸಿಂಧು ಕೇಂದ್ರಗಳಲ್ಲಿ ನೋಂದಾಯಿಸಲು ಬಂದ ಅನೇಕರು ಅಂಗಡಿ ಮಾಲೀಕರನ್ನು ಮನವಿ ಮಾಡಿಕೊಂಡು ದಾಖಲೆಗಳನ್ನು ಮತ್ತು ಮೊಬೈಲ್ ಸಂಖ್ಯೆ ನೀಡಿ ಸರ್ವರ್ ಸರಿಹೋದಾಗ ಅಪ್ ಲೋಡ್ ಮಾಡಿ ಎಂದು ಹೇಳಿ ಹೋಗುತ್ತಿದ್ದವರ ಸಂಖ್ಯೆ ಹೆಚ್ಚಾಗಿತ್ತು.

ಮಾರ್ಗಸೂಚಿ ಸರಳೀಕರಣಗೊಳಿಸಿ:

ಗೃಹಜ್ಯೋತಿ ಯೋಜನೆಯ 200 ಯೂನಿಟ್ ಬಳಕೆಯ ಹೆಚ್ಚಿನ ಫಲಾನುಭವಿಗಳು ಗ್ರಾಮೀಣ ಪ್ರದೇಶದವರೆ ಆಗಿದ್ದಾರೆ. ಹೀಗಾಗಿ ಗ್ರಾಮಾಂತರ ಭಾಗದಲ್ಲಿ ಸುಮಾರು 75 ವರ್ಷಗಳ ಹಿಂದೆ ವಿದ್ಯುತ್ ಸಂಪರ್ಕವನ್ನು ಪಡೆದ ಜನರು ವಯಸ್ಸು ಮತ್ತು ವಿವಿಧ ವಯೋಸಹಜ ಕಾರಣಗಳಿಂದಾಗಿ ಮೃತಪಟ್ಟಿದ್ದಾರೆ. ಅವರ ಅವಲಂಬಿತರು/ಕುಟುಂಬಸ್ಥರು ಆರ್.ಆರ್ ಸಂಖ್ಯೆಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳದೆ ನಿಧನರಾದವರ ಹೆಸರಿನಲ್ಲಿಯೇ ಪ್ರತಿ ತಿಂಗಳು ವಿದ್ಯುತ್ ಬಿಲ್ ಪಾವತಿ ಮಾಡಿಕೊಂಡು ಬಂದಿರುತ್ತಾರೆ. ಅಂತಹ ಜನರು ಈಗ ಗೃಹಜ್ಯೋತಿ ಯೋಜನೆಯ ಲಾಭಕ್ಕಾಗಿ ತಮ್ಮ ದಾಖಲೆಗಳನ್ನು ಸಲ್ಲಿಸುವ ಮೂಲಕ ಹೆಸರನ್ನು ಬದಲಾವಣೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದ್ದು, ಹೆಸರು ಬದಲಾವಣೆ ಬಳಿಕವಷ್ಟೆ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ರಾಜ್ಯಾದ್ಯಂತ ಏಕಕಾಲಕ್ಕೆ ಅರ್ಜಿಗಳ ಸಲ್ಲಿಕೆ ಕಾರ್ಯ ನಡೆಯುತ್ತಿರುವುದರಿಂದ ಸರ್ವರ್ ನಲ್ಲಿ ಸಮಸ್ಯೆ ಕಾಣುತ್ತಿದೆ. ನಿಧಾನಗತಿಯಲ್ಲಿ ನಡೆಯುತ್ತಿರುವ ನೋಂದಣಿ ಮುಂದಿನ ಒಂದು ವಾರದಲ್ಲಿ ಎಲ್ಲವೂ ಸರಿಹೋಗಲಿದೆ. ತಾಲ್ಲೂಕಿನಲ್ಲಿ ಮೇಳೆಕೋಟೆಯಲ್ಲಿ ಒಂದು ಕೌಂಟರ್, ನಗರದ ಬೆಸ್ಕಾಂ ಕಚೇರಿಯಲ್ಲಿ ಒಂದು ಕೌಂಟರ್, ಹಳೆ ಕೆಇಬಿ ಆಫೀಸ್ ನಲ್ಲಿ ಎರಡು ಕೌಂಟರ್ ಸೇರಿ ವಿವಿಧೆಡೆ ಒಟ್ಟು ಆರು ಕೌಂಟರ್ ಗಳನ್ನು ತೆರೆಯಲಾಗಿದೆ. ಗೃಹಜ್ಯೋತಿ ಯೋಜನೆ ನೋಂದಣಿ ಪ್ರಕ್ರಿಯೆ ಅತ್ಯಂತ ಸುಲಭವಾಗಿ ಸಾರ್ವಜನಿಕರು ತಮ್ಮ ಮೊಬೈಲ್ ಮುಖಾಂತರವೂ ನೋಂದಯಿಸಿಕೊಳ್ಳಬಹುದು. ತಾಲ್ಲೂಕಿನಲ್ಲಿ ಈವರೆಗೆ ಸುಮಾರು ೧೦೦೦ಕ್ಕೂ ಹೆಚ್ಚು ಮಂದಿ ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. ನೋಂದಣಿಗೆ ಯಾವುದೇ ಅಂತ್ಯದ ದಿನಾಂಕ ನಿಗದಿ ಇಲ್ಲ ಯಾವಾಗ ಬೇಕಾದರೂ ಅರ್ಜಿ ಸಲ್ಲಿಸಬಹುದು ಹೀಗಾಗಿ ಸಾರ್ವಜನಿಕರು ಆತಂಕ ಪಡದೆ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಬೆಸ್ಕಾಂ ಎಇಇ ಮಂಜುನಾಥ್ ಹೇಳಿದ್ದಾರೆ.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

7 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

15 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

16 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago