ಗೃಹಜ್ಯೋತಿ ನೋಂದಣಿಗೆ ಸರ್ವರ್ ಸಮಸ್ಯೆ: ಬೆಸ್ಕಾಂ, ಗ್ರಾಮ ಒನ್, ಸೇವಾ ಕೇಂದ್ರಗಳಲ್ಲೂ ಸರ್ವರ್ ಡೌನ್!

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸ್ಕೀಂ ಗೃಹಜ್ಯೋತಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ತಾಂತ್ರಿಕ ತೊಡಕುಗಳ ಕಾರಣಗಳು ಜನರ ನಿದ್ದೆ ಕೆಡೆಸಿದೆ. ಬೆಸ್ಕಾಂ ಕಚೇರಿಗಳಲ್ಲಿ ಮಾತ್ರವಲ್ಲದೆ ಗ್ರಾಮ ಒನ್, ಸೈಬರ್ ಸೆಂಟರ್ ಕೇಂದ್ರಗಳಲ್ಲಿಯೂ ಸರ್ವರ್ ಡೌನ್ ಎಂಬ ನಾಮಫಲಕ ಹಾಕುವಂತಾಗಿದೆ.

ತಾಲ್ಲೂಕಿನ ನಗರ, ಗ್ರಾಮಾಂತರ ಸೇರಿ ವಿವಿಧೆಡೆ ಬೆಸ್ಕಾಂ ಕಚೇರಿಗಳಲ್ಲಿ ಆರಂಭಿಸಿರುವ ಒಟ್ಟು 6 ಕೌಂಟರ್ ಗಳ ಮುಂದೆ ಜನರು ತಮ್ಮ ಆರ್.ಆರ್ ನಂಬರ್, ಆಧಾರ್ ಕಾರ್ಡ್ ಮತ್ತು ಮೊಬೈಲ್ ಸಂಖ್ಯೆ ಹಿಡಿದು ನೋಂದಾಯಿಸಲು ಕಾಯುತ್ತಾ ಹೈರಾಣಾಗುತ್ತಿದ್ದಾರೆ.

ತಾಲ್ಲೂಕಿನಾದ್ಯಂತ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಾಗಳು ಜನತೆ ಉತ್ಸುಕರಾಗಿದ್ದಾರೆ. ಕಳೆದ ಭಾನುವಾರದಂದು ನೋಂದಣಿ ಪ್ರಕ್ರಿಯೆಯು ಆರಂಭಗೊಂಡಿದ್ದು ಗುರುವಾರ ತನಕವೂ ಬೆಸ್ಕಾಂ ಕಚೇರಿ ಮತ್ತು ಸೇವಾ ಕೇಂದ್ರಗಳಲ್ಲಿ ನೋಂದಣಿಗೆ ಟೆಕ್ನಿಕಲ್ ಪ್ರಾಬ್ಲಂ ಎದುರಾಗುತ್ತಲೇ ಇದೆ. ಬೆಸ್ಕಾಂ ತಾಂತ್ರಿಕ ತಂಡವು ಸಮಸ್ಯೆಯನ್ನು ಪರಿಹರಿಸಲು ಕಾರ್ಯನಿರ್ವಹಿಸುತ್ತಿದೆ. ಇತ್ತ ಜನರು ಸರ್ವರ್ ಸರಿ ಹೋಗಬಹುದು ಎಂದು ಕೌಂಟರ್ ಮುಂದೆಯೆ ಗಂಟೆಗಟ್ಟಲೆ ಕಾದು ಕುಳಿತಿದ್ದಾರೆ. ಕೆಲವರು ನಾಳೆ ಬಂದರಾಯಿತು ಎಂದು ವಾಪಸ್ ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿದೆ.

ತಾಲ್ಲೂಕಿನಲ್ಲಿ ಈವರೆಗೆ ಒಂದು ಸಾವಿರಕ್ಕೂ ಹೆಚ್ಚು ಅರ್ಜಿಗಳು ನೋಂದಣಿಯಾಗಿವೆ. ಸರತಿ ಸಾಲಿನಲ್ಲಿ ನಿಂತು ಯೋಜನೆಗೆ ನೋಂದಾಯಿಸಿದವರು ನಿಟ್ಟುಸಿರು ಬಿಟ್ಟರೆ, ನೋಂದಣಿಗೆ ಕಾಯುತ್ತಿದ್ದವರು ಪರಿತಪಿಸುತ್ತಿದ್ದಾರೆ. ಇನ್ನೂ ನೋಂದಾಯಿಸುವ ಗ್ರಾಹಕರ ಮೊಬೈಲ್ ಗೆ ಒಟಿಪಿ ಬರುವುದರಿಂದ ಕೇಂದ್ರಗಳಲ್ಲಿ ಕಾಯಬೇಕಾದ ಅನಿವಾರ್ಯ ಎದುರಾಗಿದೆ. ಸೇವಾ ಸಿಂಧು ಕೇಂದ್ರಗಳಲ್ಲಿ ನೋಂದಾಯಿಸಲು ಬಂದ ಅನೇಕರು ಅಂಗಡಿ ಮಾಲೀಕರನ್ನು ಮನವಿ ಮಾಡಿಕೊಂಡು ದಾಖಲೆಗಳನ್ನು ಮತ್ತು ಮೊಬೈಲ್ ಸಂಖ್ಯೆ ನೀಡಿ ಸರ್ವರ್ ಸರಿಹೋದಾಗ ಅಪ್ ಲೋಡ್ ಮಾಡಿ ಎಂದು ಹೇಳಿ ಹೋಗುತ್ತಿದ್ದವರ ಸಂಖ್ಯೆ ಹೆಚ್ಚಾಗಿತ್ತು.

ಮಾರ್ಗಸೂಚಿ ಸರಳೀಕರಣಗೊಳಿಸಿ:

ಗೃಹಜ್ಯೋತಿ ಯೋಜನೆಯ 200 ಯೂನಿಟ್ ಬಳಕೆಯ ಹೆಚ್ಚಿನ ಫಲಾನುಭವಿಗಳು ಗ್ರಾಮೀಣ ಪ್ರದೇಶದವರೆ ಆಗಿದ್ದಾರೆ. ಹೀಗಾಗಿ ಗ್ರಾಮಾಂತರ ಭಾಗದಲ್ಲಿ ಸುಮಾರು 75 ವರ್ಷಗಳ ಹಿಂದೆ ವಿದ್ಯುತ್ ಸಂಪರ್ಕವನ್ನು ಪಡೆದ ಜನರು ವಯಸ್ಸು ಮತ್ತು ವಿವಿಧ ವಯೋಸಹಜ ಕಾರಣಗಳಿಂದಾಗಿ ಮೃತಪಟ್ಟಿದ್ದಾರೆ. ಅವರ ಅವಲಂಬಿತರು/ಕುಟುಂಬಸ್ಥರು ಆರ್.ಆರ್ ಸಂಖ್ಯೆಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳದೆ ನಿಧನರಾದವರ ಹೆಸರಿನಲ್ಲಿಯೇ ಪ್ರತಿ ತಿಂಗಳು ವಿದ್ಯುತ್ ಬಿಲ್ ಪಾವತಿ ಮಾಡಿಕೊಂಡು ಬಂದಿರುತ್ತಾರೆ. ಅಂತಹ ಜನರು ಈಗ ಗೃಹಜ್ಯೋತಿ ಯೋಜನೆಯ ಲಾಭಕ್ಕಾಗಿ ತಮ್ಮ ದಾಖಲೆಗಳನ್ನು ಸಲ್ಲಿಸುವ ಮೂಲಕ ಹೆಸರನ್ನು ಬದಲಾವಣೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದ್ದು, ಹೆಸರು ಬದಲಾವಣೆ ಬಳಿಕವಷ್ಟೆ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ರಾಜ್ಯಾದ್ಯಂತ ಏಕಕಾಲಕ್ಕೆ ಅರ್ಜಿಗಳ ಸಲ್ಲಿಕೆ ಕಾರ್ಯ ನಡೆಯುತ್ತಿರುವುದರಿಂದ ಸರ್ವರ್ ನಲ್ಲಿ ಸಮಸ್ಯೆ ಕಾಣುತ್ತಿದೆ. ನಿಧಾನಗತಿಯಲ್ಲಿ ನಡೆಯುತ್ತಿರುವ ನೋಂದಣಿ ಮುಂದಿನ ಒಂದು ವಾರದಲ್ಲಿ ಎಲ್ಲವೂ ಸರಿಹೋಗಲಿದೆ. ತಾಲ್ಲೂಕಿನಲ್ಲಿ ಮೇಳೆಕೋಟೆಯಲ್ಲಿ ಒಂದು ಕೌಂಟರ್, ನಗರದ ಬೆಸ್ಕಾಂ ಕಚೇರಿಯಲ್ಲಿ ಒಂದು ಕೌಂಟರ್, ಹಳೆ ಕೆಇಬಿ ಆಫೀಸ್ ನಲ್ಲಿ ಎರಡು ಕೌಂಟರ್ ಸೇರಿ ವಿವಿಧೆಡೆ ಒಟ್ಟು ಆರು ಕೌಂಟರ್ ಗಳನ್ನು ತೆರೆಯಲಾಗಿದೆ. ಗೃಹಜ್ಯೋತಿ ಯೋಜನೆ ನೋಂದಣಿ ಪ್ರಕ್ರಿಯೆ ಅತ್ಯಂತ ಸುಲಭವಾಗಿ ಸಾರ್ವಜನಿಕರು ತಮ್ಮ ಮೊಬೈಲ್ ಮುಖಾಂತರವೂ ನೋಂದಯಿಸಿಕೊಳ್ಳಬಹುದು. ತಾಲ್ಲೂಕಿನಲ್ಲಿ ಈವರೆಗೆ ಸುಮಾರು ೧೦೦೦ಕ್ಕೂ ಹೆಚ್ಚು ಮಂದಿ ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. ನೋಂದಣಿಗೆ ಯಾವುದೇ ಅಂತ್ಯದ ದಿನಾಂಕ ನಿಗದಿ ಇಲ್ಲ ಯಾವಾಗ ಬೇಕಾದರೂ ಅರ್ಜಿ ಸಲ್ಲಿಸಬಹುದು ಹೀಗಾಗಿ ಸಾರ್ವಜನಿಕರು ಆತಂಕ ಪಡದೆ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಬೆಸ್ಕಾಂ ಎಇಇ ಮಂಜುನಾಥ್ ಹೇಳಿದ್ದಾರೆ.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

12 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago